ಟೈಟಲ್ ನಿಂದಲೇ ಎಲ್ಲರ ಗಮನ ಸೆಳೆದಿರುವ ಕೋಮಲ್ ಕುಮಾರ್ ಅಭಿನಯದ *2020* ಚಿತ್ರವು ಸದ್ದಿಲ್ಲದೆ
ವಿಜಯದಶಮಿ ಹಬ್ಬದ ದಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಪಂಚಮುಖಿ ಗಣಪತಿ ದೇವಾಲಯದಲ್ಲಿ ಸರಳವಾಗಿ ಮುಹೂರ್ತ ಆಚರಿಸಿಕೊಂಡಿದೆ.

ಈ ಚಿತ್ರಕ್ಕೆ ಟಿ. ಆರ್. ಚಂದ್ರಶೇಖರ್ ಅವರು ಬಂಡವಾಳ ಹೂಡುತ್ತಿದ್ದು, ,ಧನ್ಯ ಬಾಲಕೃಷ್ಣ,ಕುರಿ ಪ್ರತಾಪ್ ತಬಲಾ ನಾಣಿ, ಗಿರಿ, ಅಪೂರ್ವ ಹಾಗೂ ಇತರರೂ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಾಬರ್ಟ್, ವಿಕ್ಟರಿ2,ಅಮ್ಮ ಐ ಲವ್ ಯು,ತ್ರಿಬಲ್ ರೈಡಿಂಗ್,ಉಪಾಧ್ಯಕ್ಷ ಹಾಗೂ ಇನ್ನೂ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದ ಕೆ.ಎಲ್.ರಾಜಶೇಖರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.


ಟಿ.ಆರ್.ಚಂದ್ರ ಶೇಖರ್ ಪುತ್ರ ನಂದ ಕಿಶೋರ್ ರವರು ಕ್ಲಾಪ್ ಮಾಡಿದರೆ, ಟಿ.ಆರ್.ಚಂದ್ರ ಶೇಖರ್ ರವರು ಕ್ಯಾಮರ ಚಾಲನೆ ಮಾಡಿದರು, ನಿರ್ದೇಶಕರಾದ ರಾಜಶೇಖರ್ ರವರು ಆಕ್ಷನ್ ಕಟ್ ಹೇಳುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಹಾಗೂ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.


ಇದೆ ನವಂಬರ್ ನಲ್ಲಿ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ
ಸಂಪೂರ್ಣ ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನವೀನ್ ಕುಮಾರ್ .ಎಸ್ ಛಾಯಾಗ್ರಹಣ, ಕೆ,ಎಮ್,ಪ್ರಕಾಶ್ ಸಂಕಲನ,ಶ್ರೀಧರ್ ಸಂಭ್ರಮ ಸಂಗೀತ ನಿರ್ದೇಶನ ಈ ಚಿತ್ರಕ್ಕೆ ಮೆರಗು ನೀಡಲಿದೆ.










