flixOye
Buzz

ವಿನಾಯಕನ ಸನ್ನಿಧಿಯಲ್ಲಿ “ಚಂದ್ರಲೇಖ ರಿಟರ್ನ್ಸ್” ಚಿತ್ರಕ್ಕೆ ‌ಚಾಲನೆ.

ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ. ನಿರ್ದೇಶಕ ಓಂಪ್ರಕಾಶ್ ರಾವ್ ಬಹಳವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರವಿದು.

ಡಾರ್ಲಿಂಗ್ ಕೃಷ್ಣ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. “ಚಂದ್ರಲೇಖ ರಿಟರ್ನ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಆನಂದರಾವ್ ಸರ್ಕಲ್ ನ‌ ಶ್ರೀವಿನಾಯಕ ದೇವಸ್ಥಾನದಲ್ಲಿ‌ ನೆರವೇರಿತು.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ.

ಶ್ರೀ ಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.ಈ ಹಿಂದೆ ರವೀಶ್ ಅವರ ನಿರ್ಮಿಸಿರುವ “ಕಸ್ತೂರಿ ಮಹಲ್” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದೆ.

ಡಾರ್ಲಿಂಗ್ ಕೃಷ್ಣ ಅವರೊಂದಿಗೆ ಸಾಧುಕೋಕಿಲ, ನಾಗಶೇಖರ್, ವಿವಿನ್ ಸೂರ್ಯ, ಅಚ್ಯುತರಾವ್, ಸುಧಾ ಬೆಳವಾಡಿ, ಪ್ರಶಾಂತ್ ಸಿದ್ದಿ ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ.ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದು, ಸದ್ಯದಲ್ಲೇ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರವೀಶ್ ಆರ್ ಸಿ ತಿಳಿಸಿದ್ದಾರೆ.

ಸಂಬಂಧಿತ · Related