flixOye
Buzz

‘ಜೀವ್ನಾನೇ ನಾಟ್ಕ ಸಾಮಿ‌…’ ಅಂತಾರೆ ನಿರ್ದೇಶಕ ರಾಜು ಭಂಡಾರಿ‌ ರಾಜವರ್ತ…

ಕನ್ನಡತಿ ಧಾರಾವಾಹಿಯ ನಾಯಕನಟ ಕಿರಣ್ ರಾಜ್ ನಾಯಕನಾಗಿ ‘ಜೀವಾನ್ನೇ ನಾಟ್ಕ ಸಾಮಿ…’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಇನ್ನೊಬ್ಬ‌ ನಾಯಕ ಸರಿಗಮಪ ಖ್ಯಾತಿಯ ಶ್ರೀ ಹರ್ಷ ನಟಿಸುತ್ತಿದ್ದಾರೆ. ರಂಗಭೂಮಿ ಹಿನ್ನಲೆಯಿಂದ ಬಂದಿರುವ ರಾಜು ಭಂಡಾರಿ ರಾಜವರ್ತ ಈ ಸಿನಿಮಾವನ್ನು ‌ನಿರ್ದೇಶಿಸಿದ್ದಾರೆ. ಈ ಚಿತ್ರದ ಟೀಸರ್, ಟ್ರೈಲರ್ ಜೊತೆಗೆ ಲಿರಿಕಲ್‌ ಹಾಡು ಬಿಡುಗಡೆಗೊಳಿಸಿ ಪತ್ರಿಕಾಗೋಷ್ಠಿ ನಡೆಸಿತು ಚಿತ್ರತಂಡ. ಆಗಸ್ಟ್ 19 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಅದರ ತಯಾರಿಯಲ್ಲಿದೆ ಚಿತ್ರತಂಡ.

ಇದು ಮಹಾಭಾರತದ ಉಪಕಥೆಯನ್ನು ಆಧಾರವಾಗಿಟ್ಟುಕೊಂಡು ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಕಥಾವಸ್ತುವನಿಟ್ಟುಕೊಂಡು ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ. ಪಾಸಿಟಿವ್ ಹಾಗೂ ನೆಗಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದೇವೆ. ಕಿರಣ್ ರಾಜ್ ಹಾಗೂ ಶ್ರೀಹರ್ಷ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ತಮಿಳು, ತುಳು ಸಿನಿಮಾಗಳಲ್ಲಿ ನಟಿಸಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ‌ಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಇದೊಂದು ಸಂಪೂರ್ಣ ಮನರಂಜನಾ ಚಿತ್ರ. ಸ್ವಲ್ಪ ಟ್ರಾಜಿಡಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಸಿನಿಮಾ ನೋಡಿ ಹರಸಿ ಎಂದಿದ್ದಾರೆ ನಿರ್ದೇಶಕ ರಾಜು ಭಂಡಾರಿ.
ಕಿರಣ್ ರಾಜ್ ಸಹ ತಮ್ಮ ‌ಪಾತ್ರ ವಿವರಣೆ ನೀಡುತ್ತಾ, ಇಂತಹ ಒಳ್ಳೆಯ ತಂಡದಲ್ಲಿ ಅಭಿನಯಿಸಿದ್ದ ಸಂತೋಷ ನನಗಿದೆ. ನನ್ನ ಧಾರಾವಾಹಿ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

“ಸರಿಗಮಪ” ದಲ್ಲಿ ತಮ್ಮ ಗಾಯನದ ಮೂಲಕ ಮನೆಮಾತಾಗಿದ್ದ, ಶ್ರೀಹರ್ಷ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರದಲ್ಲಿ ಬರೀ ನಟನೆಯಷ್ಟೇ ಅಲ್ಲ. ಒಂದು ಹಾಡನ್ನು ಹಾಡಿದ್ದೇನೆ ಅಂತಾರೆ ಶ್ರೀಹರ್ಷ.
ರಾಜಶೇಖರ್ ಶಿರಹಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸಂಬಂಧಿತ · Related