“ಮರೆಯದೆ ಕ್ಷಮಿಸು” ಚಿತ್ರದ ಆಡಿಯೋ ರಿಲೀಸ್ ಮಾಡಿ ಶುಭಕೋರಿದ ನಟ ಶ್ರೀನಗರ ಕಿಟ್ಟಿ.

Published on

447 Views
Advertisement

ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, “ಮರೆಯದೆ ಕ್ಷಮಿಸು” ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಡಿಸಿಪಿ ಮಂಜುನಾಥ್ ಪ್ರಸಾದ್, ವೆಂಕಟೇಶ್ ಮುಂತಾದ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದೊಂದು ಪ್ರೇಮಕಥೆ ಆಧಾರಿತ ಚಿತ್ರ. ಈ ಚಿತ್ರದಲ್ಲಿ ನಾಯಕ ಗಾರೆ ಕೆಲಸ ಮಾಡುತ್ತಿರುತ್ತಾನೆ . ಶ್ರೀಮಂತ ಹುಡುಗಿಯನ್ನು ಪ್ರೀತಿಸುತ್ತಾನೆ. ಇವರಿಬ್ಬರ ಪ್ರೀತಿಯಿಂದ ಏನೇನಾಗುತ್ತದೆ? ಕೊನೆಗೆ ಒಂದಾಗುವರಾ? ಎಂಬುದೆ ಚಿತ್ರದ ಕಥಾಸಾರಾಂಶ. ನಿರ್ಮಾಪಕರು, ನಾನು ನಲವತ್ತು ವರ್ಷಗಳ ಸ್ನೇಹಿತರು. ನಮ್ಮ ಸ್ನೇಹದ ಸವಿನೆನಪಿಗಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದರೆ ತಪ್ಪಾಗಲಾರದು ಎಂದರು ನಿರ್ದೇಶಕ ರಾಫವ್. ಚಿತ್ರಕ್ಕೆ ಉತ್ತಮ ಸಂಗೀತ ನೀಡಿರುವ ಆರನ್ ಕಾರ್ತಿಕ್ ವೆಂಕಟೇಶ್ ಸೇರಿದಂತೆ ಇಡೀ ಚಿತ್ರತಂಡದ ಸಹಕಾರವನ್ನು ನಿರ್ದೇಶಕರು ಸ್ಮರಿಸಿಕೊಂಡರು. ಎಲ್ಲಾ ಅಂದು ಕೊಂಡ ಹಾಗೆ ಆದರೆ ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ ಎಂದರು.

ಚಿತ್ರದ ನಾಯಕ ಪ್ರಮೋದ್ ಬೋಪ್ಪಣ್ಣ ಮಾತನಾಡುತ್ತಾ, ಈ ಚಿತ್ರದಲ್ಲಿ ನಾಯಕ- ನಾಯಕಿಯ ಪ್ರೇಮ, ತಾಯಿ – ಮಗನ ಬಾಂಧವ್ಯ‌ ಹಾಗೂ ಎಲ್ಲಕ್ಕೂ ಮಿಗಿಲಾಗಿ ಉತ್ತಮ ಮನರಂಜನೆಯಿದೆ. ಇಂತಹ ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟ ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ತಿಳಿಸಿದರು. ಆಡಿಯೋ ರಿಲೀಸ್ ಮಾಡಿಕೊಟ್ಟ ಶ್ರೀನಗರ ಕಿಟ್ಟಿ ಅವರಿಗೆ ವಿಶೇಷ ಧನ್ಯವಾದ ಎಂದರು ಪ್ರಮೋದ್ ಬೋಪ್ಪಣ್ಣ.
ನಾಯಕಿ ಮೇಫನಾ ಗೌಡ ಹಾಗೂ ಚಿತ್ರದಲ್ಲಿ ನಟಿಸಿರುವ ಮಿಮಿಕ್ರಿ ಗೋಪಿ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಚಿತ್ರದ ಹಾಡುಗಳು ಹಾಗೂ ಗಾಯಕರ ಬಗ್ಗೆ ಸಂಗೀತ ನಿರ್ದೇಶಕ ಆರನ್ ಕಾರ್ತಿಕ್ ವೆಂಕಟೇಶ್ ಮಾಹಿತಿ ನೀಡಿದರು. ಇದು ಅವರು ಸಂಗೀತ ನೀಡಿರುವ ೨೨ ನೇ ಚಿತ್ರ. ಹಾಡುಗಳನ್ನು ಬಿಡುಗಡೆ ಮಾಡುತ್ತಿರುವ ಸಿರಿ ಮ್ಯೂಸಿಕ್ ನ ಚಿಕ್ಕಣ್ಣ ಸಹ ಈ ಚಿತ್ರದ ಹಾಡುಗಳ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದರು ನಾನು ಚಿತ್ರ ನಿರ್ಮಾಣ ಮಾಡಬೇಕೆಂದು ಎಂದಿಗೂ ಅಂದುಕೊಂಡಿರಲಿಲ್ಲ. ಸ್ನೇಹಿತ ರಾಘವ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಶಿವರಾಂ. ಕೆ.ರಾಘವ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿದ್ದಾರೆ. ರಿಷಿಕೇಶ್ ಈ ಚಿತ್ರದ ಛಾಯಾಗ್ರಹಕರು. ಪ್ರಮೋದ್ ಬೋಪ್ಪಣ್ಣ ಚಿತ್ರದ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಮೇಘನ ಗೌಡ. ರಮೇಶ್ ಭಟ್, ಮಿಮಿಕ್ರಿ ಗೋಪಿ, ರಾಕ್ ಲೈನ್ ಸುಧಾಕರ್, ಅಪೂರ್ವ, ಸಿರಿಹುಂಡೆ ರಘು ಮುಂತಾದವರು ಈ ಚಿತ್ರದ ತಾರಾಬಳಗದಲಿದ್ದಾರೆ.

Advertisement

More Buzz

Buzz 6 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com