ಚಿತ್ರೀಕರಣ ಮುಗಿಸಿಕೊಂಡ ರಗಡ್ ಕಥೆಯ ‘ಬಯಲುಸೀಮೆ’!

Published on

531 Views
Advertisement

ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಯಾವತ್ತಿಗೂ ಒಂದು ವಿಶೇಷ ಪ್ರೀತಿ ಜಾರಿಯಲ್ಲಿರುತ್ತೆ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಚಿತ್ರವೊಂದು ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ಈ ಸಿನಿಮಾಗೆ ಕಥೆಗೆ ತಕ್ಕುದಾಗಿ ‘ಬಯಲುಸೀಮೆ’ ಎಂಬ ಶೀರ್ಷಿಕೆಯಿದಲಾಗಿದೆ. ಸಂಪೂರ್ಣವಾಗಿ ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರೋ ಈ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಮೂಡಿ ಬಂದಿದೆ ಎಂಬ ಆತ್ಮವಿಶ್ವಾಶ ಚಿತ್ರತಂಡದಲ್ಲಿದೆ.

ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಭತ್ತರ ದಶಕ ಮತ್ತು ಈವತ್ತಿನ ಕಾಲಮಾನದೊಂದಿಗೆ ಜುಗಲ್ಬಂದಿ ಹೊಂದಿರೋ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆಯಂತೆ. ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲು ಸೀಮೆಯ ಕಥೆ ಚಲಿಸುತ್ತೆ. ಆತನ ಸುತ್ತ ಹಬ್ಬಿಕೊಳ್ಳುವ ಅಕ್ರಮ ಸಂಬಂಧ, ಅದರ ಹಿನ್ನೆಲೆಯಲ್ಲೊಮದು ಲವ್ ಸ್ಟೋರಿ ಹಾಗೂ ಅದರ ಗರ್ಭದಲ್ಲಿಯೇ ಹುಟ್ಟಿಕೊಳ್ಳೋ ರಣ ದ್ವೇಷ… ಕ್ಷಣ ಕ್ಷಣವೂ ಪ್ರೇಕ್ಷಕರನ್ನು ತುದೀ ಸೀಟಿಗೆ ತಂದು ಕೂರಿಸುವಂಥಾ ಗಟ್ಟಿ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಲ್ಲಿದೆ.

Advertisement

ಈ ಸಿನಿಮಾದಲ್ಲಿ ಭಯ ಹುಟ್ಟಿಸೋ ಪಾತ್ರಗಳಿವೆ. ಅದಕ್ಕೆ ಅತಿರಥ ಮಹಾರಥ ಕಲಾವಿದರುಗಳು ಜೀವ ತುಂಬಿದ್ದಾರೆ. ಬೃಹತ್ ತಾರಾಗಣ ಹೊಂದಿರೋ ಬಯಲು ಸೀಮಿಯಲ್ಲಿ ಬಿಸಿಲ ನಾಡ ಪ್ರತಿಭೆಗಳೂ ಮಿಂಚಲು ಅಣಿಯಾಗಿದ್ದಾರೆ. ಟಿ.ಎಸ್ ನಾಗಾಭರಣ, ರವಿಶಂಕರ್, ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ವರುಣ್ ಕಟ್ಟೀಮನಿ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕೈನವರ್, ಪ್ರದೀಪ್ ರಾಜ್ ಮುಂತಾದವರ ತಾರಾಗಣ ಈ ಸಿನಿಮಾದಲ್ಲಿದೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಮತ್ತು ರಾಮು ಅವರ ನೃತ್ಯ ಸಂಯೋಜನೆಯಿಂದ ಬಯಲುಸೀಮೆ ಸಿಂಗರಿಸಿಕೊಂಡಿದೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com