ಮಕ್ಕಳ ಚಿತ್ರ `ಬೆಟ್ಟದ ದಾರಿ’ಗೆ ವಿಜಯರಾಘವೇಂದ್ರ ಕ್ಲಾಪ್

Published on

443 Views
Advertisement

`ಬೆಟ್ಟದ ದಾರಿ’ ಎಂಬ ಮಕ್ಕಳ ಚಿತ್ರಕ್ಕೆ ಸೋಮವಾರ ಮುಹೂರ್ತ ನೆರವೇರಿತು. ಚಿನ್ನಾರಿಮುತ್ತ ವಿಜಯರಾಘವೇಂದ್ರ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಈ ಹಿಂದೆ `ಬಂಗಾರಿ’ ನಿರ್ದೇಶನ ಮಾಡಿದ್ದ ಮಾ.ಚಂದ್ರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಚಂದ್ರಕಲಾ ಅವರು ನಿರ್ಮಾಪಕರು. ಈ ಹಿಂದೆ ಇವರು `ಮೂಕ ಹಕ್ಕಿ’ ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಇವರ ಸಹೋದರ ಮಂಜುನಾಥ್ ಹೆಚ್.ನಾಯ್ಕ ಅವರು ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ.

ಚಿತ್ರದ ಟೈಟಲ್ ಹೇಳುವಂತೆ, ಇದು ಮಕ್ಕಳ ಕುರಿತ ಚಿತ್ರ. ಇಡೀ ಚಿತ್ರದಲ್ಲಿ ಮಕ್ಕಳದ್ದೇ ಕಾರುಬಾರು. ಅದು ಇದ್ದರೂ ಸಹ ನಿರ್ದೇಶಕರು ಕಮರ್ಷಿಯಲ್ ಅಂಶಗಳನ್ನು ಬೆರೆಸಿ, ನಿರ್ದೇಶನ ಮಾಡುತ್ತಿದ್ದಾರೆ. `ಬೆಟ್ಟದ ದಾರಿ’ ಚಿತ್ರದಲ್ಲಿ ನಿರ್ದೇಶಕರು ಕುಡಿಯುವ ನೀರಿನ ಸಮಸ್ಯೆ ಕುರಿತು ಹೇಳುತ್ತಿದ್ದಾರೆ. ನಿರ್ದೇಶಕರೇ ಹೇಳುವಂತೆ, ಇದು ಸಂಪೂರ್ಣ ಉತ್ತರಕರ್ನಾಟಕದಲ್ಲಿ ನಡೆಯುವ ಕಥೆ. ಆ ನೆಲದಲ್ಲಿ ಜ್ವಲಂತ ಸಮಸ್ಯೆಯಂತಿರುವ ಕುಡಿಯುವ ನೀರಿನ ವಿಷಯ ಇಟ್ಟುಕೊಂಡು ಕಥೆ ಹೆಣೆದಿದ್ದೇನೆ. ಆ ಭಾಗದ ಜನರು ನೀರಿಗೆ ಪರದಾಡುವುದು ಎಲ್ಲರಿಗೂ ಗೊತ್ತೇ ಇದೆ. ಎಷ್ಟೇ ಸರ್ಕಾರ ಬಂದರೂ, ಅಧಿಕಾರಿಗಳು ಇದ್ದರೂ ಆ ಭಾಗದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಚಿತ್ರದ ಮೂಲಕ ಒಂದು ಹಳ್ಳಿಯಲ್ಲಿ ನೀರಿಗೆ ಪರದಾಡುತ್ತಿರುವ ತನ್ನೂರಿನ ಜನರನ್ನು ಕಂಡು ಮರಗುವ ಮಕ್ಕಳು, ಅದಕ್ಕೊಂದು ಪರಿಹಾರ ಕಂಡುಹಿಡಿಯುತ್ತಾರೆ. ಅದೇ ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕ ಮಾ.ಚಂದ್ರು.

Advertisement

ಈ ಚಿತ್ರದಲ್ಲಿ ಮಾಸ್ಟರ್ ನಿಶಾಂತ್ ಟಿ. ರಾಥೋಡ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾನೆ. ಇವರೊಂದಿಗೆ ಮಾಸ್ಟರ್ ಅಂಕಿತ್ ನವನಿಧಿ, ಬೇಬಿ ಲಕ್ಷ್ಮೀಶ್ರೀ, ಮಾಸ್ಟರ್ ರಂಗಸ್ವಾಮಿ, ಮಾಸ್ಟರ್ ರೋಹಿತ್ ಗೌಡ, ಮಾಸ್ಟರ್ ವಿಘ್ನೇಶ್ ಹಾಗು ಹಿರಿಯ ಕಲಾವಿದರಾದ ಬ್ಯಾಂಕ್ ಜನಾರ್ದನ್, ಉಮೇಶ್ ಸೇರಿದಂತೆ ಅನೇಕರು ಅಭಿನಯಿಸುತ್ತಿದ್ದಾರೆ. `ಬೆಟ್ಟದ ದಾರಿ’ ಚಿತ್ರವನ್ನು ಬಿಜಾಪುರ ಮತ್ತು ದೊಡ್ಡಬಳ್ಳಾಪುರದಲ್ಲಿ ಚಿತ್ರೀಕರಿಸಲಾಗುವುದು. 30 ದಿನಗಳ ಚಿತ್ರೀಕರಣ ಮಾಡುವ ಯೋಚನೆ ಇದೆ ಎನ್ನುತ್ತಾರೆ ನಿರ್ದೇಶಕ ಮಾ.ಚಂದ್ರು.

Advertisement

ನಿರ್ಮಾಪಕಿ ಚಂದ್ರಕಲಾ ಅವರಿಗೆ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಆಸೆ ಈ ಚಿತ್ರದ ಮೂಲಕ ಈಡೇರುತ್ತಿದೆಯಂತೆ. ಅವರಿಗೆ ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿದ್ದರಿಂದ, ಹಣ ಹೂಡಲು ಮುಂದಾಗಿದ್ದಾರೆ. ಸುಮಾರು 40 ಲಕ್ಷ ರೂ.ಬಜೆಟ್‍ನಲ್ಲಿ ಈ ಮಕ್ಕಳ ಚಿತ್ರವನ್ನು ತಯಾರಿಸುತ್ತಿದ್ದು, ಯಾವುದೇ ಕಮರ್ಷಿಯಲ್ ಸಿನಿಮಾಗಳಿಗೂ ಕಮ್ಮಿ ಇಲ್ಲ ಎಂಬಂತೆ ಚಿತ್ರ ಮಾಡಲಾಗುವುದು. ಮಕ್ಕಳ ಚಿತ್ರಕ್ಕೆ ಹಣ ಮುಖ್ಯವಲ್ಲ. ಕಥೆ ಮುಖ್ಯ. ಇದು ಸಾಮಾಜಿಕ ಸಮಸ್ಯೆ ಸಾರುವ ಚಿತ್ರ. ಇಲ್ಲಿ ಅನೇಕ ಒಳ್ಳೆಯ ಅಂಶಗಳಿವೆ ಎನ್ನುತ್ತಾರೆ ಚಂದ್ರಕಲಾ.

ಚಿತ್ರಕ್ಕೆ ವೀರ್‍ಸಮರ್ಥ್ ಸಂಗೀತ ನೀಡುತ್ತಿದ್ದಾರೆ. ಅವರು ಈ ಚಿತ್ರದಲ್ಲಿ ನಾಲ್ಕು ಗೀತೆಗಳಿಗೆ ರಾಗ ಸಂಯೋಜಿಸುತ್ತಿದ್ದಾರೆ. ವಿ. ನಾಗೇಂದ್ರಪ್ರಸಾದ್, ಕೆ.ಕಲ್ಯಾಣ್, ವಿಜಯ ಭರಮಸಾಗರ ಹಾಡುಗಳನ್ನು ಬರೆಯುತ್ತಿದ್ದಾರೆ. ಚಿತ್ರದಲ್ಲಿ ಹಳ್ಳಿ ಸೊಗಡು ಕುರಿತ ಹಾಡು ಇದೆ. ಮಕ್ಕಳ ಗೆಳೆತನ ಬಗ್ಗೆ ಒಂದು ಗೀತೆ ಇದೆ. ನೀರಿಗೆ ಪರಿತಪಿಸುವ ಕುರಿತಂತೆಯೂ ಒಂದು ಗೀತೆ. ಅದರ ಜೊತೆಗೆ ಉತ್ತರ ಕರ್ನಾಟಕ ಭಾಷೆಯಲ್ಲೇ ಒಂದು ಹಾಡನ್ನು ಮಾಡಲಾಗುತ್ತದೆ ಎಂದು ವಿವರಿಸಿದರು ವೀರ್‍ಸಮರ್ಥ್.

Advertisement

ಚಿತ್ರಕ್ಕೆ ನಂದಕುಮಾರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅವರು ಮಕ್ಕಳ ಚಿತ್ರದಲ್ಲಿ ಚಾಲೆಂಜಿಂಗ್ ಇರುತ್ತದೆ. ಬಹುತೇಕ ನಾವೂ ಮಕ್ಕಳಾಗಿಯೇ ಅವರೊಂದಿಗೆ ಇಳಿದು, ಕೆಲಸ ತೆಗೆದುಕೊಂಡರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಉತ್ತರ ಕರ್ನಾಟಕದ ಪೂರ್ಣ ಹೂರಣವನ್ನು ಸೆರೆಹಿಡಿಯುವ ಪ್ರಯತ್ನ ಮಾಡುವುದಾಗಿ ಹೇಳಿದರು ನಂದಕುಮಾರ್.


ಚಿತ್ರದ ಇನ್ನೊಬ್ಬ ನಿರ್ಮಾಪಕ ಮಂಜುನಾಥ್ ಹೆಚ್.ನಾಯ್ಕ ಅವರಿಗೆ, ನಿರ್ದೇಶಕರು ಹಳೆಯ ಪರಿಚಯವಾದ್ದರಿಂದ ಅವರಿಗೆ ಕಥೆಯ ಮೇಲೆ ನಂಬಿಕೆ ಇದೆಯಂತೆ. ಆ ಉದ್ದೇಶದಿಂದ ಸಮಾಜಕ್ಕೊಂದು ಸಂದೇಶ ಸಾರುವ ಚಿತ್ರ ಕೊಡುವ ಪ್ರಯತ್ನ ಮಾಡುವುದಾಗಿ ಹೇಳಿಕೊಂಡರು. `ಬೆಟ್ಟದ ದಾರಿ’ ಚಿತ್ರದಲ್ಲಿ ನಟಿಸುತ್ತಿರುವ ಮಕ್ಕಳೆಲ್ಲರೂ ಚಿತ್ರದ ಪಾತ್ರ ಬಗ್ಗೆ ಮಾತಾಡಿದರು.

Advertisement

More Buzz

Buzz 5 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 7 days ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com