ಸಂಗೀತದ ಮೂಲಕ ಜನಮನಗೆದ್ದ ಚಂದನ್ ಶೆಟ್ಟಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ

Published on

892 Views
Advertisement

ತಮ್ಮ ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿರುವ ಸುಜಯ್ ಶಾಸ್ತ್ರಿ ನಿರ್ದೇಶನದ “ಎಲ್ರ ಕಾಲೆಳಿಯುತ್ತೆ ಕಾಲ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು ಚಿತ್ರದ ಪ್ರಥಮ‌ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ಕರ್ನಾಟಕದಲ್ಲಿ ಕನ್ನಡತನ ಮರೆಯಾಗುತ್ತಿದೆ. ನಾವು ಹೇಗೆ ಬೇರೆಭಾಷೆಗಳ ಚಿತ್ರಗಳನ್ನು ಸಬ್ ಟೈಟಲ್ ಮೂಲಕ ನೋಡುತ್ತೀವಲ್ಲಾ, ಹಾಗೆ ಬೇರೆ ಭಾಷೆಗಳಲ್ಲೂ ನಮ್ಮ ಕನ್ನಡ ಚಿತ್ರಗಳು ಬಿಡುಗಡೆಯಾಗಲಿ. ಅವರು ನಮ್ಮ ಹಾಗೆ ನೋಡಲಿ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಅರ್ಜುನ್ ಅವಧೂತರು ಆಶೀರ್ವದಿಸಿದರು.

Advertisement

ನಾನು ಹಾಗೂ ರಾಜ್ ಗುರು ಸೇರಿ ಕಥೆ ಮಾಡಿಕೊಂಡೆವು. ನಿರ್ಮಾಪಕ ಗೋವಿಂದರಾಜು ಅವರ ಮುಂದೆ ಕಥೆ ಹೇಳಿದ್ದೆವು. ನಮ್ಮ ಕಥೆಯನ್ನು ಮೆಚ್ಚಿದ ಅವರು ಕೊರೋನ ಕಡಿಮೆಯಾದ ಮೇಲೆ ಚಿತ್ರ ಆರಂಭಿಸೋಣ ಅಂದರು. ಈಗ ಚಿತ್ರ ಆರಂಭಾಗಿದೆ. 1980 ರಿಂದ 90ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಕಥೆಯ ಬಗ್ಗೆ ಜಾಸ್ತಿ ಹೇಳುವುದಿಲ್ಲ. ಈ ಚಿತ್ರದ ನಯಕನಾಗಿ ಚಂದನ್ ಶೆಟ್ಟಿ, ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ಅಭಿನಯಿಸುತ್ತಿದ್ದಾರೆ. ತಾರಾ, ಮಂಡ್ಯ ರಮೇಶ್, ಮಂಜು ಪಾವಗಡ, ನಾಗರಾಜ್ ಮೂರ್ತಿ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ. ನಾನು ಕೂಡ ಅಭಿನಯಿಸುತ್ತಿದ್ದೀನಿ ಎಂದರು ಸುಜಯ್ ಶಾಸ್ತ್ರಿ.

Advertisement

ಇಷ್ಟು ದಿನ ನನ್ನ ಹಾಡು, ಸಂಗೀತಕ್ಕೆ ನಿಮ್ಮ ಬೆಂಬಲ ದೊರಕಿದೆ. ಈಗ ನಾಯಕನಟನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ವಿಜಯ್ ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ಕಾಲೇಜು ಹುಡುಗನಾಗಿ ಕಾಣಿಸಿಕೊಳ್ಳುತ್ತದ್ದೇನೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ಚಂದನ್ ಶೆಟ್ಟಿ.

ತಮ್ಮ ಪಾತ್ರದ ಬಗ್ಗೆ ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿಕಂಡರು.

Advertisement

ರಿಯಾಲಿಟಿ ಶೋ ಮೂಲಕ ನನಗೆ ಸುಜಯ್ ಪರಿಚಯ. ಉತ್ತಮ ನಟ. ನನ್ನ ಚಿತ್ರವೊಂದರಲ್ಲಿ ನೀವು ಅಭಿನಯಿಸಬೇಕೆಂದರು. ಕಥೆ ಕೇಳದೆ ಒಪ್ಪಿಕೊಂಡಿದ್ದೇನೆ. ನನ್ನ ಹಾಗೂ ಸುಜಯ್ ಶಾಸ್ತ್ರಿ ಕಾಂಬಿನೇಶನ್ ನಲ್ಲಿ ಮತ್ತೊಂದು ಚಿತ್ರ ಕೂಡ ಸದ್ಯದಲ್ಲೇ ಸೆಟೇರಲಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು ನಟಿ ತಾರಾ.

ನಮ್ಮ‌ ಸಂಸ್ಥೆಯಿಂದ ನಿರ್ಮಾಣವಾಗಿದ್ದ “ಕಾರ್ನಿ” ಹಾಗೂ “ಕೃಷ್ಣ ಟಾಕೀಸ್” ಚಿತ್ರಗಳು ಪ್ರೇಕ್ಷಕರನ್ನು ಕುರ್ಚಿ ತುದಿಯಲ್ಲಿ ಕುಳಿತು ನೋಡುವ ಹಾಗೆ ಮಾಡಿತ್ತು.. ಆದರೆ ಈ ಚಿತ್ರ ಆರಾಮವಾಗಿ ಕುರ್ಚಿಗೆ ಒರಗಿಕೊಂಡು ಕುಟುಂಬ ಸಮೇತ ನೋಡಬಹುದು. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಗೋವಿಂದರಾಜು.

Advertisement

ಚಿತ್ರಕ್ಕೆ ಕಥೆ , ಸಂಭಾಷಣೆ ಬರೆದಿರುವ ರಾಜಗುರು, ಸಂಗೀತ ನಿರ್ದೇಶಕರಾದ ಪ್ರದೀಪ – ಪ್ರವೀಣ ಮುಂತಾದ ಚಿತ್ರತಂಡದ ಸದಸ್ಯರು ತಮ್ಮ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಉಷಾ ಗೋವಿಂದರಾಜು ನಿರ್ಮಾಣದ ಈ ಚಿತ್ರಕ್ಕೆ ವಿಶ್ವಜಿತ್ ರಾವ್ ಅವರ ಛಾಯಾಗ್ರಹಣವಿದೆ
ಬಾಲು ಕುಮಟಾ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

More Buzz

Buzz 8 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com