ರಾಕ್​ಲೈನ್​ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದ ಫ್ಯಾಂಟಸಿ

Published on

375 Views
Advertisement

ಇತ್ತೀಚೆಗಷ್ಟೇ ಚಿತ್ರೀಕರಣ ಶುರುಮಾಡಿದ್ದ ಫ್ಯಾಂಟಸಿ ಚಿತ್ರತಂಡ ಇದೀಗ ಕುಂಬಳಕಾಯಿ ಒಡೆದು , ಚಿತ್ರೀಕರಣ ಮುಗಿಸಿಕೊಂಡ ಸಂಭ್ರಮದಲ್ಲಿದೆ. ಕೇವಲ 24 ದಿನದಲ್ಲಿ ಶೂಟಿಂಗ್​ ಕಂಪ್ಲೀಟ್​ ಮಾಡಿಕೊಂಡಿರುವ ಚಿತ್ರತಂಡ ಆ 24 ದಿನದ ಶೂಟಿಂಗ್​ ಪಯಣವನ್ನು ಮೆಲುಕು ಹಾಕುವ ಉದ್ದೇಶಕ್ಕೆ ಶೂಟಿಂಗ್​ ಲೋಕೆಷನ್​ನಲ್ಲಿಯೇ ಪತ್ರಿಕಾಗೋಷ್ಟಿ ಆಯೋಜಿಸಿತ್ತು ಫ್ಯಾಂಟಸಿ ತಂಡ.

ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್​. ನಿರ್ದೇಶಕರ ತಂದೆ ತಾಯಿಯವರಾದ ಎಂ. ಮಹಾದೇವಿ, ಟಿ. ರಂಗಸ್ವಾಮಿ ಈ ಚಿತ್ರಕ್ಕೆ ಸಹ- ನಿರ್ಮಾಪಕರಾಗಿದ್ದಾರೆ.

Advertisement

ನಿರ್ದೇಶಕ ಗುರು ದೇಶಪಾಂಡೆಯವರ ‘ಸಂಹಾರ’ ಸಿನಿಮಾದ ಮೂಲಕ ಸಹಾಯಕ ನಿರ್ದೇಶಕರಾಗಿ ಚಂದನವನಕ್ಕೆ ಬಂದು ನಂತರ ‘ಅಮ್ಮ ಐ ಲವ್​ ಯೂ’, ‘ಆದ್ಯಾ’ ಸಿನಿಮಾಗಳಲ್ಲಿ ನಿರ್ದೇಶಕ ಕೆ.ಎಂ. ಚೈತನ್ಯ ಅವರೊಂದಿಗೆ ಕೆಲಸ ಮಾಡಿರುವ ಪವನ್‌ ಸಿನಿಮಾರಂಗಕ್ಕೆ ಬರುವುದಕ್ಕೆ ಚಿರು ಸರ್ಜಾ ಅವರೇ ಕಾರಣ, ನಿರ್ದೇಶನದ ಪಾಠವನ್ನು ಚೈತನ್ಯ ಅವರಿಂದ ಕಲಿತಿದ್ದೇನೆ’ ಎಂದು ತಮ್ಮ ಹಿನ್ನೆಲೆ ಹೇಳಿಕೊಂಡ ನಿರ್ದೇಶಕ ಪವನ್‌ ಫ್ಯಾಂಟಸಿ ಸಿನಿಮಾ ಬಗ್ಗೆಯೂ ಮಾಹಿತಿ ಹಂಚಿಕೊಂಡರು.

Advertisement

‘ಇಂಜಿನಿಯರಿಂಗ್​ ಅರ್ಧಕ್ಕೆ ಬಿಟ್ಟು, ಸಿನಿಮಾ ಬೆನ್ನಹಿಂದೆ ಬಿದ್ದೆ. ಅಪ್ಪ ಅಮ್ಮನಿಂದಲೂ ಸಾಥ್​ ಸಿಕ್ಕಿತು. ಒಳ್ಳೇ ಕಥೆಯೂ ಸಿದ್ಧವಾಯ್ತು. ನಾನೇ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಿ ಕೆಲಸ ಆರಂಭಿಸಿದೆ. ಕಂಟೆಂಟ್ ಎಷ್ಟೇ ಗಟ್ಟಿಯಾಗಿದ್ದರೂ, ಅದನ್ನು ತೋರಿಸುವ ಛಾಯಾಗ್ರಾಹಕ ಅಷ್ಟೇ ಮುಖ್ಯ. ಆ ಸ್ಥಾನ ತುಂಬಲು ಪಿ.ಕೆ. ಎಚ್​ ದಾಸ್​ ಬಂದರು. ಶೇ. 100 ಕೇಳಿದರೆ, ಇನ್ನೂ ಹತ್ತು ಹೆಚ್ಚೇ ಕೊಟ್ಟಿದ್ದಾರೆ. ಗಣೇಶ್​ ನಾರಾಯಣ್​ ಸಂಗೀತ ನೀಡಿದ್ದಾರೆ. ಶಶಿರಾಮ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ’ ಎಂದು ತಾಂತ್ರಿಕ ವರ್ಗವನ್ನೂ ಪರಿಚಯಿಸಿದರು.

Advertisement

‘ಒಂಭತ್ತು ತಿಂಗಳ ನಂತರ ಮತ್ತೆ ಕ್ಯಾಮರಾ ಮುಂದೆ ಬಂದಿರುವುದಕ್ಕೆ ಖುಷಿ ಎನಿಸುತ್ತಿದೆ. ಪವನ್ ಹೊಸ ಆಲೋಚನೆ, ಸಿನಿಮಾದ ಬಗ್ಗೆ ಆತನಿಗಿರುವ ಪ್ಯಾಷನ್, ಸೆಳೆತವನ್ನು ನಾನು ‘ಸಂಹಾರ’ ಸಿನಿಮಾ ಸಮಯದಲ್ಲಿಯೇ ನೋಡಿದ್ದೆ. ನಿರ್ದೇಶಕನಾಗುವ ಎಲ್ಲ ಕೌಶಲವೂ ಆತನಿಗಿತ್ತು ಎಂದು ಆವತ್ತೇ ಹೇಳಿದ್ದೆ. ಇದೀಗ ಅದು ಸಾಕಾರವಾಗಿದೆ. ಈ ಸಿನಿಮಾದಲ್ಲಿ ನನಗೂ ಒಂದು ಪಾತ್ರ ನೀಡಿದ್ದಾನೆ. ಭಾಸ್ಕರ್ ಪೊನ್ನಪ್ಪ ಎಂಬುದು ನನ್ನ ಪಾತ್ರ’ ಮಿಕ್ಕಿದ್ದನ್ನು ಸಿನಿಮಾದಲ್ಲಿಯೇ ನೋಡಿ ಎಂದರು ಬಾಲರಾಜ್ವಾಡಿ.

ಚಿತ್ರದ ನಾಯಕಿ ಪ್ರಿಯಾಂಕಾ ಸಹ ಸಿನಿಮಾ ಬಗ್ಗೆ ತುಂಬ ಎಗ್ಸೈಟ್ ಆಗಿದ್ದಾರೆ. ‘ಬಿಗ್​ಬಾಸ್​ನಲ್ಲಿ ದಿನದೂಡಿದಂತೆ ಕೊರೊನಾದಲ್ಲಿಯೂ ಸಮಯ ಕಳೆದಿದ್ದೆವು. ಖುಷಿ ವಿಚಾರವನ್ನು ಕೇಳಿ ತುಂಬ ದಿನ ಆಗಿತ್ತು. ಆಗ ಸಿಕ್ಕ ಸಿಹಿ ಸುದ್ದಿ ಈ ಫ್ಯಾಂಟಸಿ ಸಿನಿಮಾ. ಇದು ನನ್ನ ಮೊದಲ ಸಿನಿಮಾ ಆದರೂ, ಧಾರಾವಾಹಿಯಂತೆ ಇಲ್ಲಿಯು ನೆಗೆಟಿವ್​ ಪಾತ್ರ ಮುಂದುವರಿದಿದೆ. ’ ಎಂಬುದು ಅವರ ಮಾತು. ಅದೇ ರೀತಿ ಬಾಲನಟ ಅನುರಾಗ್ ಸಹ ತನ್ನ ಶೂಟಿಂಗ್​ ಅನುಭವ ಹಂಚಿಕೊಂಡ. ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದನ್ನು ನಿಭಾಯಿಸಿದ ಖುಷಿ ಇದೆ ಎಂದರು ನಟ ಹೇಮಂತ್. ಪಿಕೆಎಚ್ ದಾಸ್ ಸಹ ಸಿನಿಮಾದಲ್ಲಿನ ಕ್ಯಾಮರಾ ಕೈಚಳಕದ ಬಗ್ಗೆ ಮಾತನಾಡಿದರು. ಇನ್ನುಳಿದಂತೆ ಹರಿಣಿ, ಮೂರ್ತಿ, ಗೌರಿ ಸೇರಿ ಹಲವರು ತಾರಾಬಳಗದಲ್ಲಿದ್ದಾರೆ.

ಇದೊಂದು ಥ್ರಿಲ್ಲರ್ ಶೈಲಿಯ ಸಿನಿಮಾ. ಚಿತ್ರದ ಶೇ. 90 ಭಾಗ ಒಳಾಂಗಣದಲ್ಲಿ ನಡೆದರೆ, ಇನ್ನು ಶೇ. 10 ಹೊರಾಂಗಣದಲ್ಲಿ ಶೂಟ್ ಮಾಡಿದ್ದೇವೆ. ಪೋಸ್ಟ್ ಪ್ರೊಡಕ್ಷನ್​ ಕೆಲಸವೂ ನಡೆಯುತ್ತಿದೆ. ಫೆಬ್ರವರಿ ವೇಳೆಗೆ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದಲೇ ಸಿನಿಮಾ ಮಾಡಿದ್ದೇನೆ ಎನ್ನುತ್ತಾರೆ
ಪವನ್ ಕುಮಾರ್ ಆರ್​.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com