ನಿತ್ಯಾನಂದ ಸ್ವಾಮಿಗಳ ಜೀವನ ಚರಿತ್ರೆ ‘ಜೈ ಗುರುದೇವ್’…

Published on

516 Views
Advertisement

ತುಳುಭಾಷೆಯಲ್ಲಿ ಈಗಾಗಲೇ ತುಳು ನಾಡಸಿರಿ, ಕೋಟೆ ಚೆನ್ನಯ್ಯ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಹೀಗೆ ಹಲವರ ಬಯಾಗ್ರಫಿ ಚಿತ್ರಗಳು ಬಂದಿವೆ. ಅದಕ್ಕೆ ಈಗ ಹೊಸ ಸೇರ್ಪಡೆ ‘ಜೈ ಗುರುದೇವ್’. 20ನೇ ಶತಮಾನದಲ್ಲಿ ನಿತ್ಯಾನಂದ ಸ್ವಾಮಿಗಳು ಕೇರಳ, ಕರ್ನಾಟಕದ ಕರಾವಳಿ, ಮುಂಬಯಿಯಲ್ಲಿ ಸಂಚರಿಸಿ ಅಸಂಖ್ಯಾತ ಪವಾಡಗಳನ್ನು ಸೃಷ್ಟಿಸಿ, ನೊಂದವರ ಬಾಳಿಗೆ ಬೆಳಕಾದ ಮಹಾಸಂತ, ಅವಧೂತ. ಅವರ ಜೀವನ ಚರಿತ್ರೆಯನ್ನು ಆಧರಿಸಿ ತುಳು ಚಿತ್ರವೊಂದು ತೆರೆಗೆ ಬರಲಿದೆ.
ತುಳು ಕನ್ನಡದಲ್ಲಿ ಹಲವಾರು ಚಿತ್ರಗಳಿಗೆ ಸಂಭಾಷಣೆ ನಿರ್ದೇಶನ ಮಾಡಿದ್ದ ಸುಧಾಕರ ಬನ್ನಂಜೆ ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ತುಳುವಿನಲ್ಲಿ “ಪುಂಡಿಪಣವು” ಎಂಬ ಸದಭಿರುಚಿಯ ಚಿತ್ರ ನಿರ್ಮಿಸಿದ ರಾಮಕೃಷ್ಣ ಶೆಟ್ಟಿ ಅವರು ತವಿಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.

Advertisement

ಔರ ಫಿಲ್ಮ್ಸ್, ಭಾರತಿ ಶೆಟ್ಟಿ, ದುಬಾಯ್ ಸಹನಿರ್ಮಾಪಕರು, ವಿ.ಮನೋಹರ್-ಸಂಗೀತ, ನಾಗರಾಜ ಅದ್ವಾನಿ -ಛಾಯಾಗ್ರಹಣ, ಕೆ.ಗಿರೀಶ್ ಕುಮಾರ್ – ಸಂಕಲನ, ತಮ್ಮ ಲಕ್ಷ್ಮಣ -ಕಲೆನಿರ್ದೇಶನ ಮಾಡಲಿದ್ದಾರೆ. ಕಲಾವಿದರ ಆಯ್ಕೆ ನಡೆಯುತ್ತಿದೆ.

Advertisement

ಈ ಚಿತ್ರದ ಪ್ರಥಮ ಪೋಸ್ಟರ್ ಬಿಡುಗಡೆ ಸಮಾರಂಭ ಬಂಟರ ಸಂಘ ಬೆಂಗಳೂರು ಇಲ್ಲಿ ನಡೆಯಿತು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಉಪೇಂದ್ರ ಶೆಟ್ಟಿ ಅವರು ಪ್ರಥಮ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

Advertisement

ಚಿತ್ರ ನಿರ್ಮಾಪಕರಾದ ದಿವಾಕರ್, ರಾಜಾರಾಂ ಶೆಟ್ಟಿ ಉಪ್ಪಳ, ನಿರ್ದೇಶಕ ಮಂಜು ಹೆದ್ದೂರ್, ಸಂಗೀತ ನಿರ್ದೇಶಕ ವಿ. ಮನೋಹರ್, ಪ್ರಸಾದ್ ಶೆಟ್ಟಿ, ನಟ ರಿಪ್ಪನ್ ಎಡ್ವರ್ಡ್, ನಾಗರಾಜ ಅದ್ವಾನಿ, ಗಿರೀಶ್ ಕುಮಾರ್ ಮುಂತಾದವರು ಹಾಜರಿದ್ದರು.

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com