ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಜೈ ಹನುಮಾನ” ಅಕ್ಟೋಬರ್ 8ರಿಂದ ರಾತ್ರಿ 7.30ಕ್ಕೆ

Published on

747 Views
Advertisement

ಮನರಂಜನಾ ಕ್ಷೇತ್ರದ ಬದಲಾದ ಸನ್ನಿವೇಶದಲ್ಲಿ ಕಿರುತೆರೆಯೂ ಹಿರಿತೆರೆಯಷ್ಟು ಶ್ರೀಮಂತವಾಗಿದೆ. ವಿನೂತನ ಕಥೆ, ನಿರೂಪಣೆಗಳ ಜತೆಗೆ ಅದ್ಧೂರಿ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ದಿಸೆಯಲ್ಲಿ ಕನ್ನಡ ಮನರಂಜನಾ ವಾಹಿನಿಗಳ ಹಿರಿಯಣ್ಣ ಉದಯ ಟಿವಿ ‘ಜೈ ಹನುಮಾನ್’ ಎಂಬ ಅದ್ಧೂರಿ ಧಾರಾವಾಹಿಯನ್ನು ಕನ್ನಡದ ವೀಕ್ಷಕರಿಗೆ ನೀಡÀಲು ಸಿದ್ಧತೆ ನಡೆಸಿದೆ.
ಅಕ್ಟೋಬರ್ 8 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಪ್ರತೀ ದಿನ ರಾತ್ರಿ 7.30ಕ್ಕೆ ಜೈ ಹನುಮಾನ್ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಈಗಾಗಲೇ ಪ್ರೋಮೋಗಳು ಪ್ರೇಕ್ಷಕರ ಮನಸೂರೆಗೊಂಡಿದ್ದು, ಸೋಶಿಯಲ್ ಮೀಡಿಯಾಗಳಲ್ಲೂ ಹವಾ ಸೃಷ್ಟಿಸಿದೆ. ಎಲ್ಲ ವಯೋಮಾನದ ವೀಕ್ಷಕರಿಗೂ ಇಷ್ಟವಾಗುವಂಥ ಕಥೆ, ನಿರೂಪಣೆ ಹಾಗೂ ಕಣ್ಮನ ಸೆಳೆಯುವ ನಿರ್ಮಾಣ ಈ ಧಾರಾವಾಹಿಯ ವಿಶೇಷವಾಗಿದೆ.
ಮುಂಬೈ ಮೂಲದ ಪ್ರಸಿದ್ಧ ನಿರ್ಮಾಣ ಸಂಸ್ಥೆ ಕಾಂಟಿಲೋ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ. ಈಗಾಗಲೇ ಐವತ್ತಕ್ಕೂ ಹೆಚ್ಚಿನ ಸಂಚಿಕೆಗಳ ಚಿತ್ರೀಕರಣ ಪೂರೈಸಿದ್ದು, ಪ್ರತೀ ಪ್ರೇಂನಲ್ಲೂ ಸಿನಿಮಾದ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗಿದೆ. ರೋಚಕ ಸನ್ನಿವೇಷಗಳನ್ನು ಹೆಣೆಯಲಾಗಿದ್ದು ಬಿಗಿಯಾದ ಚಿತ್ರಕಥೆ ಹಾಗೂ ಸತ್ವಯುತ ಸಂಭಾಷಣೆಳು ಈ ಧಾರಾವಾಹಿಯ ಇನ್ನಷ್ಟು ವಿಶೇಷಗಳಾಗಿವೆ ಎನ್ನುತ್ತಾರೆ ನಿರ್ಮಾಣ ಸಂಸ್ಥೆಯವರು.

ಹದಿನಾಲ್ಕು ಲೋಕಗಳನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಜರಾಮರನಾಗುವ ವರ ಪಡೆದುಕೊಂಡಿದ್ದ ರಾವಣ ತನ್ನ ಅಧಿಕಾರ ಲಾಲಸೆಯಿಂದ ಇತರ ಜೀವಿಗಳ ಮೇಲೆ ಕ್ರೌರ್ಯ ಎಸಗುತ್ತಿದ್ದ. ಅವನನ್ನು ಸದೆಬಡಿಯಲು ಹನುಮಂತ ಜನ್ಮ ತಳೆಯುತ್ತಾನೆ. ಅವನ ಹುಟ್ಟಿನ ಹಿನ್ನೆಲೆ. ಮುಂದೆ ಸಾಗುವ ದಾರಿ, ಆತ ಹೇಗೆ ರಾಮನನ್ನು ಸಂಧಿಸುತ್ತಾನೆ? ರಾವಣನ ಸಂಹಾರಕ್ಕೆ ಹೇಗೆ ಸಾಥ್ ನೀಡುತ್ತಾನೆ ಇತ್ಯಾದಿ ಕುತೂಹಲಗಳಿಗೆ ಉತ್ತರ ನೀಡುತ್ತದೆ ಜೈ ಹನುಮಾನ್.

Advertisement

ಅದ್ಧೂರಿ ಸೆಟ್ ಜತೆಗೆ ಪೂರಕವಾದ ಗ್ರಾಫಿಕ್ಸ್‍ಗಳು ಗತವೈಭವವನ್ನು ಮತ್ತೆ ತೆರೆಯ ಮೇಲೆ ತಂದರೆ, ಕಲಾವಿದರ ಪ್ರೌಢ ನಟನೆ ಇಡೀ ಧಾರಾವಾಹಿಯನ್ನು ಮತ್ತೊಂದು ಎತ್ತರಕ್ಕೇ ಕೊಂಡೊಯುತ್ತದೆ. ಅದರಲ್ಲೂ ಇಲ್ಲಿನ ವೇಷ ಭೂಷಣಗಳು, ಚಿತ್ರ ವಿಚಿತ್ರ ಹೆಸರುಗಳು ಎಲ್ಲ ವರ್ಗಗಳ ವೀಕ್ಷಕರನ್ನೂ, ಮಕ್ಕಳನ್ನೂ ಹಿಡಿದಿಟ್ಟುಕೊಳ್ಳುತ್ತವೆ ಎನ್ನುತ್ತಾರೆ ನಿರ್ದೇಶಕ ವಾಸು.
ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿರುವವರು ಖ್ಯಾತ ನಿರ್ದೇಶಕ ಬುಕ್ಕಾಪಟ್ಟಣ ವಾಸು. ಕಿರುತೆರೆಯ ನುರಿತ ನರ್ದೇಶಕ, ಬರಹಗಾರ ಬ. ಲ. ಸುರೇಶ್ ‘ಜೈ ಹನುಮಾನ್’ ಗೆ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರಕಥೆ ನೀರಜ್ ಮತ್ತು ತಂಡ ಮಾಡುತ್ತಿದ್ದರೆ, ನಿಷಿನ್ ಚಂದ್ರ ಡಿಓಪಿ ಆಗಿದ್ದಾರೆ. ಸಂತೋಷ್ ಸಂಕಲನದ ಜವಾಬ್ಧಾರಿ ಹೊತ್ತಿದ್ದಾರೆ. ಕಾಂಟಿಲೋ ಪ್ರೊಡಕ್ಷನ್ಸ್‍ನ ಮುಖ್ಯಸ್ಥ ಅಭಿಮನ್ಯು ಸಿಂಗ್ ಜತೆ ಯಶಸ್ವಿ ಹಿಂದಿ ಧಾರಾವಾಹಿಗಳಲ್ಲಿ ಕೆಲಸ ಮಾಡಿರುವ ಹಿಮಾನಿ, ಗೌತಮ್, ಮನಿಷ್ ಪೋಪಟ್ ಮುಂತಾದವರ ತಂಡ ಇದೆ.

ತಾರಾಗಣದಲ್ಲಿ ಬಾಲಕ ಹನುಮಾನ್ ಪಾತ್ರವನ್ನು ಪ್ರದ್ಯುಮ್ನ ನಿರ್ವಹಿಸುತ್ತಿದ್ದಾನೆ. ಅಂಜನಾ ಪಾತ್ರವನ್ನು ಪ್ರಿಯಾಂಕಾ ಚಿಂಚೋಳಿ, ಕೇಸರಿಯಾಗಿ ಪ್ರಸನ್ನ, ಶಿವನಾಗಿ ಮಧು, ರಾವಣನಾಗಿ ವಿನಯ್ ಗೌಡ, ಕೈಕಸಿಯಾಗಿ ರಂಜಿತಾ ಸೂರ್ಯವಂಶಿ, ಪಾರ್ವತಿಯಾಗಿ ನಾಗಶ್ರಿ ವೀಕ್ಷಕರನ್ನು ರಂಜಿಸಲಿದ್ದಾರೆ.
ದುಷ್ಟರ ಸಂಹಾರಕ್ಕಾಗಿ ಅವತರಿಸಿದ “ಜೈ ಹನುಮಾನ” ಇದೇ ಅಕ್ಟೋಬರ್ 8ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7.30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com