ಜೋಗಿ ಪ್ರೇಮ್ ಬಿಡುಗಡೆ ಮಾಡಿದರು “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡು.

Published on

561 Views
Advertisement

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

Advertisement

ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್.

Advertisement

ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತಾಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ.
ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು. ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11 ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

Advertisement

ಹಾಡು ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11 ಬಿಡುಗಡೆಯಾಗಲಿದೆ. ತಂಡದರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್.
ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.
ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.
ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com