ಕನಸುಗಾರ ರವಿಚಂದ್ರನ್ ಈಗ ಕನ್ನಡಿಗ!

Published on

493 Views
Advertisement

ಕೊರೋನಾ ಸಮಸ್ಯೆ ಚಿತ್ರರಂಗದ ಮೇಲೆ ಗಾಢ ಕಗ್ಗತ್ತಲನ್ನು ಆವರಿಸುವಂತೆ ಮಾಡಿದೆ. ಮುಂದೇನು? ದೊಡ್ಡ ನಟರ ಸಿನಿಮಾಗಳು ಸೆಟ್ಟೇರುತ್ತವಾ? ವೃತ್ತಿಪರ ನಿರ್ಮಾಪಕರು ಮತ್ತೆ ಚಿತ್ರನಿರ್ಮಾಣಕ್ಕೆ ಮುಂದಾಗುತ್ತಾರಾ? ಎನ್ನುವ ಪ್ರಶ್ನೆಗಳೆಲ್ಲ ಉದ್ಭವಿಸಿದ್ದವು. ಇಂಥ ಪ್ರಶ್ನೆಗಳಿಗೆಲ್ಲಾ ಉತ್ತರವೆನ್ನುವಂತೆ, ಚೇತೋಹಾರಿಯಾದ ಕಾರ್ಯವೊಂದು ಯಶಸ್ವಿಯಾಗಿ ನೆರವೇರಿದೆ. ಓಂಕಾರ್ ಮೂವೀಸ್ ಲಾಂಛನದಲ್ಲಿ ಎನ್.ಎಸ್. ರಾಜ್ ಕುಮಾರ್ ನಿರ್ಮಾಣದ, ಜಟ್ಟ, ಮೈತ್ರಿ, ಅಮರಾವತಿಯಂತಹ ಸದಭಿರುಚಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಬಿ.ಎಂ. ಗಿರಿರಾಜ್ ನಿರ್ದೇಶನದಲ್ಲಿ, ವಿ.ರವಿಚಂದ್ರನ್ ಅಭಿನಯದ, ಐತಿಹಾಸಿಕ ಕಥಾಹಂದರ ಹೊಂದಿರುವ, ʻಕನ್ನಡಿಗʼ ಚಿತ್ರ ಆರಂಭಗೊಂಡಿದೆ. ಡಾ. ಶಿವರಾಜ್ ಕುಮಾರ್ ಆರಂಭ ಫಲಕ ತೋರಿ, ರಾಘವೇಂದ್ರ ರಾಜ್ ಕುಮಾರ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ʻಕನ್ನಡಿಗʼನಿಗೆ ಚಾಲನೆ ದೊರೆತಿದೆ.

Advertisement

ಸಾಮಾನ್ಯಕ್ಕೆ ಆಳ್ವಿಕೆ ನಡೆಸಿದ ರಾಜ-ರಾಣಿಯರ ಕಥೆಗಳು ಎಲ್ಲೆಡೆ ದಾಖಲಾಗಿರುತ್ತವೆ. ಆದರೆ ಸಾಮಾನ್ಯ ಪ್ರಜೆಗಳ ಕೊಡುಗೆಗಳು ನೆನಪಿಗೇ ಬರುವುದಿಲ್ಲ. ಈ ನಾಡಿನ ಇತಿಹಾಸವನ್ನು ದಾಖಲಿಸುವಲ್ಲಿ ಲಿಪಿಕಾರರ ವಶಂದ ಕೊಡುಗೆ ಅಪಾರ. 1858ರ ನಂತರದ ಕಾಲಘಟ್ಟವನ್ನು ʻಕನ್ನಡಿಗʼನೊಂದಿಗೆ ಮರುಸೃಷ್ಟಿಸಲಾಗುತ್ತಿದೆ. ಇಲ್ಲಿ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾತಿ ಚಂದ್ರಶೇಖರ್, ಕಿಟ್ಟಲ್ ಪಾತ್ರಕ್ಕೆ ಜೆಮಿ ವಾಲ್ಟರ್ ಅವರನ್ನು ಕರೆತರಲಾಗುತ್ತಿದೆ. ಕಮರೀಲ ಭಟ್ಟನಾಗಿ ಚಿ. ಗುರುದತ್, ಮಲ್ಲಿನಾಥನಾಗಿ ಬಾಲಾಜಿ ಮನೋಹರ್, ಮಠದ ಸ್ವಾಮಿಯ ಪಾತ್ರದಲ್ಲಿ ದತ್ತಣ್ಣ ಮತ್ತು ಅಚ್ಯುತ್ ಕುಮಾರ್ ಹರಿಗೋಪಾಲನ ಪಾತ್ರ ನಿರ್ವಹಿಸುತ್ತಿದ್ದಾರೆ. ರಾಣಿ ಚಿನ್ನಬೈರಾದೇವಿ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ.


ʻಈ ಸಿನಿಮಾದ ಪ್ರಾಕಾರ, ಚಿತ್ರತಂಡ ಎಲ್ಲವೂ ನನಗೆ ಹೊಸದು. ಪ್ರತೀ ಸಿನಿಮಾ ಕೂಡಾ ನನಗೆ ಹೊಸದೇ. ಕನ್ನಡಿಗನಾಗಿ ಕಾಣಿಸಿಕೊಳ್ಳುತ್ತಿರುವುದು ನನಗೆ ನಿಜಕ್ಕೂ ಸವಾಲಿನ ಕೆಲಸವೇ ಆಗಿದೆʼ ಎನ್ನುವುದು ರವಿಚಂದ್ರನ್ ಅವರ ಅಭಿಪ್ರಾಯ. ಈ ಚಿತ್ರದಲ್ಲಿ ಗಟ್ಟಿಗಿತ್ತಿಯ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಗಿರಿರಾಜ್ ಅವರ ಈ ಹಿಂದಿನ ಸಿನಿಮಾಗಳಲ್ಲೂ ನಟಿಸಿದ್ದೇನೆ. ನನಗಾಗಿ ಈ ಚಿತ್ರದಲ್ಲೂ ಪಾತ್ರ ಸೃಷ್ಟಿಸಿರುವುದು ಸಂತಸ ತಂದಿದೆ ಎಂದು ಪಾವನಾ ಹೇಳಿದರು. ಕನ್ನಡ ಮಾತ್ರವಲ್ಲ, ಸಿನಿಮಾ ಪ್ರಪಂಚದ ಅದ್ಭುತ ತಂತ್ರಜ್ಞ ರವಿ ಚಂದ್ರನ್. ಕನ್ನಡಿಗ ಸಿನಿಮಾದ ಮೂಲಕ ಮೊದಲ ಬಾರಿಗೆ ಅವರೊಂದಿಗೆ ಬಣ್ಣ ಹಚ್ಚುತ್ತಿದ್ದೇನೆ. ಅವರ ತಮ್ಮನ ಪಾತ್ರ ನನಗೆ ದಕ್ಕಿರುವುದು ನನ್ನ ಪಾಲಿನ ಹೆಮ್ಮೆ ಎಂದು ನಟ ಬಾಲಾಜಿ ಮನೋಹರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನೂರೈವತ್ತು ವರ್ಷಕ್ಕೂ ಹಿಂದಿನ ಕಥೆ ʻಕನ್ನಡಿಗʼನದ್ದಾಗಿದ್ದು, ಪಾತ್ರಗಳ ಜೊತೆಗೆ ಅಂದಿನ ಪರಿಸರ, ಕಟ್ಟಡಗಳನ್ನು ಮರುಸೃಷ್ಟಿ ಮಾಡುವುದು ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ, ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಮತ್ತು ಚಿತ್ರತಂಡ ಸಾಕಷ್ಟು ಜನ ಇತಿಹಾಸಕಾರರನ್ನು ಸಂಪರ್ಕಿಸಿ, ಹಲವಾರು ಕೃತಿಗಳನ್ನು ಮರಾಮರ್ಶಿಸಿ ಸೆಟ್ ಗಳನ್ನು ರೂಪಿಸುತ್ತಿದ್ದಾರೆ. ಸಾಗರ, ಚಿಕ್ಕಮಗಳೂರಿನ ಸುತ್ತಮುತ್ತಲಿನ ಕೆಲವು ಪ್ರದೇಶಗಳನ್ನು ಹಾಗೆಯೇ ಬಳಸಿಕೊಳ್ಳಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಮೂವತ್ತು ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸಿ, ಬಹುತೇಕ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಚಿತ್ರತಂಡದ ಸದ್ಯದ ಯೋಜನೆ.

Advertisement

ಜಿ.ಎಸ್.ವಿ ಸೀತಾರಾಮ್ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ಅರ್ಜುನ್ ಕಿಟ್ಟು ಸಂಕಲನ, ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನ ʻಕನ್ನಡಿಗʼ ಚಿತ್ರಕ್ಕಿದೆ.

ಶುರುವಾಗಿದ್ದು ಹೀಗೆ

Advertisement

ಚೆಂದನೆಯ ಕಥೆಯೊಂದನ್ನು ಸಿದ್ದಪಡಿಸಿಕೊಂಡಿದ್ದರು. ಈ ಸಿನಿಮಾಗೆ ನಿರ್ಮಾಪಕರು ಯಾರು? ಯಾರು ನಿರ್ಮಿಸಿದರೆ ಹೆಚ್ಚು ಗುಣಮಟ್ಟ ಪಡೆಯುತ್ತದೆ? ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಮೇಲಾಗಿ, ಇದು ಉತ್ತಮ ಅಭಿರುಚಿ ಇರುವ ನಿರ್ಮಾಪಕರು ಮಾತ್ರ ರೂಪಿಸಬಲ್ಲ ಚಿತ್ರ. ಈ ಕಾರಣದಿಂದ ಅದಾಗಲೇ ತಮ್ಮ ಜಟ್ಟ ಮತ್ತು ಮೈತ್ರಿ ಎಂಬ ಎರಡು ಸಿನಿಮಾಗಳನ್ನು ನಿರ್ಮಿಸಿದ್ದ ಎನ್.ಎಸ್. ರಾಜ್ ಕುಮಾರ್ ಅವರನ್ನು ಗಿರಿರಾಜ್ ಸಂಪರ್ಕಿಸಿದ್ದರಂತೆ. ಕಥೆಯ ಒಂದು ಎಳೆಯನ್ನು ಕೇಳಿದ ರಾಜ್ ಕುಮಾರ್ ಬಹಳವಾಗಿ ಇಷ್ಟಪಟ್ಟು, ಈ ಚಿತ್ರವನ್ನು ನಾನೇ ನಿರ್ಮಿಸುತ್ತೇನೆ ಎಂದು ಒಪ್ಪಿದ್ದರು. ಆ ನಂತರ ಒಂದಷ್ಟು ಚರ್ಚೆಗಳಾಗಿ, ಇನ್ನೂ ಸಾಕಷ್ಟು ಅಂಶಗಳು ಸೇರಿ ಪರಿಪೂರ್ಣವಾದ ಸ್ಕ್ರಿಪ್ಟ್ ತಯಾರಾಯಿತು.

ರವಿ ಆಗಮನ

ಸಿನಿಮಾದಲ್ಲಿ ಬರುವ ನಾಯಕನ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡಿಕೊಳ್ಳುವುದು? ಅಪಾರ ಘನತೆ ಹೊಂದಿರುವ ಈ ಪಾತ್ರಕ್ಕೆ ಅಷ್ಟೇ ಪ್ರಮುಖ ಕಲಾವಿದನೇ ಬೇಕು ಎಂದು ಆಲೋಚಿಸುತ್ತಿದ್ದಾಗ ನಿರ್ದೇಶಕ ಗಿರಿರಾಜ್ ಅವರಿಗೆ ಮೊದಲಿಗೆ ನೆನಪಾಗಿದ್ದೇ ಕ್ರೇಜ಼ಿ ಸ್ಟಾರ್ ರವಿಚಂದ್ರನ್. ರವಿಚಂದ್ರನ್ ಅವರು ಈ ಪಾತ್ರಕ್ಕೆ ಹೇಳಿಮಾಡಿಸಿದಂತಾ ವ್ಯಕ್ತಿ. ಆದರೆ ಈ ಪಾತ್ರವನ್ನು ಅವರು ಒಪ್ಪುತ್ತಾರಾ? ಅನ್ನಿಸಿದರೂ, ಒಂದು ಬಾರಿ ಕೇಳಿಬಿಡೋಣ ಎಂದು ರವಿಚಂದ್ರನ್ ಗಿರಿರಾಜ್ ತಂಡ ಅವರನ್ನು ಸಂಪರ್ಕಿಸಿತ್ತು. ಪೂರ್ತಿ ಕಥೆ ಕೇಳಿದ ರವಿ ಚಂದ್ರನ್ ಅವರು ಸಿನಿಮಾದಲ್ಲಿ ನಟಿಸಲು ನನ್ನ ಅಭ್ಯಂತರವಿಲ್ಲ. ಆದರೆ ಇದು ಸಂಪೂರ್ಣ ಬೇರೆಯದ್ದೇ ಪ್ರಾಕಾರದಲ್ಲಿರೋದರಿಂದ ಮೇಕಿಂಗ್ ಇತ್ಯಾದಿಗಳನ್ನೆಲ್ಲಾ ನೀವೇ ನಿಭಾಯಿಸಿಕೊಳ್ಳಬೇಕು. ನಟಿಸೋದು ಮಾತ್ರ ನನ್ನ ಜವಾಬ್ದಾರಿ ಎಂದು ಹೇಳಿದ್ದರು. ಆ ಮೂಲಕ ʻಕನ್ನಡಿಗʼನ ಪಾತ್ರಕ್ಕೆ ರವಿಯ ಆಗಮನವಾಯಿತು.

Advertisement

ಮೂವತ್ತು ವರ್ಷಗಳ ಹಿಂದೆ ನೊಂದಾಯಿಸಿದ್ದ ಶೀರ್ಷಿಕೆ

ರವಿಚಂದ್ರನ್ ಕನ್ನಡ ಚಿತ್ರರಂಗದ ಅಪ್ರತಿಮ ಕನಸುಗಾರ. ದಶಕಗಳು ಉರುಳಿದರೂ ಅವರ ಕಲ್ಪನೆ ಮಾಸುವುದಿಲ್ಲ ಅನ್ನೋದಕ್ಕೆ ಇದೂ ಕೂಡಾ ಒಂದು ನಿದರ್ಶನ. ಬರೋಬ್ಬರಿ ಮೂವತ್ತು ವರ್ಷಗಳ ಹಿಂದೆ ರವಿಚಂದ್ರನ್ ಅವರು ʻಕನ್ನಡಿಗʼ ಹೆಸರಿನ ಶೀರ್ಷಿಕೆಯನ್ನು ರಿಜಿಸ್ಟರ್ ಮಾಡಿಸಿಟ್ಟಿದ್ದರು. ಅದಾಗಿ ಇಪ್ಪತ್ತು ವರ್ಷಗಳು ಕಳೆದನಂತರ ಇದೇ ಎನ್.ಎಸ್. ರಾಜ್ ಕುಮಾರ್ ರವಿಚಂದ್ರನ್ ಅವರ ಬಳಿ ಹೋಗಿ ʻಕನ್ನಡಿಗʼ ಶೀರ್ಷಿಕೆಯನ್ನು ನನ್ನ ಸಂಸ್ಥೆಗೆ ಬಿಟ್ಟುಕೊಡಿ, ನಾನೊಂದು ಸಿನಿಮಾ ಮಾಡಬೇಕು ಎಂದು ವಿನಂತಿಸಿದ್ದರು. ಆದರೆ, ರವಿಚಂದ್ರನ್ ʻಕನ್ನಡಿಗ ಎನ್ನುವ ಹೆಸರನ್ನು ಬಹಳ ವರ್ಷಗಳಿಂದಲೂ ಕಾಪಾಡಿಕೊಂಡು ಬಂದಿದ್ದೀನಿ. ಆ ಟೈಟಲ್ಲಿನ ಸಿನಿಮಾದಲ್ಲಿ ನಾನೇ ನಟಿಸಬೇಕು. ಕೊಡಲು ಸಾಧ್ಯವಿಲ್ಲʼ ಎಂದು ಖಡಾಖಂಡಿತವಾಗಿ ಹೇಳಿಬಿಟ್ಟಿದ್ದರು. ಬೇಸರಿಸಿಕೊಳ್ಳದ ರಾಜ್ ಕುಮಾರ್ ʻವೀರಕನ್ನಡಿಗʼ ಹೆಸರಿನಲ್ಲಿ ಚಿತ್ರ ನಿರ್ಮಾಣ ಮಾಡಿದ್ದರು. ಈಗ ಇದೇ ಎನ್.ಎಸ್. ರಾಜ್ ಕುಮಾರ್ ಅವರ ನಿರ್ಮಾಣದಲ್ಲಿ, ರವಿಚಂದ್ರನ್ ಅವರೇ ನಟಿಸುತ್ತಿರುವ ʻಕನ್ನಡಿಗʼ ಚಿತ್ರ ಸೆಟ್ಟೇರಿದೆ.

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com