ಕಸ್ತೂರಿ ನಿವಾಸದಲ್ಲಿ ಸಪ್ತಪದಿ ಸಂಭ್ರಮ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

Published on

503 Views

ಉದಯ ಟಿವಿಯಲ್ಲಿ ಸಂಜೆ ೭ಕ್ಕೆ ಪ್ರಸಾರವಾಗುತ್ತಿರುವ ಕಸ್ತೂರಿ ನಿವಾಸ ಇತ್ತಿಚಿಗಷ್ಟೆ ೫೦೦ರ ಸಂಭ್ರಮ ಆಚರಿಸಿಕೊಂಡಿತು. ಇದೇ ಸಂತಸದಲ್ಲಿ ಈಗ ಮದುವೆ ಸಂಭ್ರಮದ ವಿಶೇಷ ಸಂಚಿಕೆಗಳನ್ನು ವೀಕ್ಷಕರಿಗಾಗಿ ಬಿತ್ತರಿಸುತ್ತಿದೆ.ರಾಘವ್ ಬದುಕಲ್ಲಿ ಪ್ರಾರಂಭವಾಗುತ್ತಿದೆ ಹೊಸ ಅಧ್ಯಾಯ . ಖುಷಿಯ ಜೊತೆಗೆ ರಾಘವ್ ಸಪ್ತ ಹೆಜ್ಜೆಗಳಿಡೊ ಶುಭಗಳಿಗೆಗೆ ಸಜ್ಜಾಗುತ್ತಿದೆ ಕಸ್ತೂರಿ ನಿವಾಸ.ರಾಘವ ಖುಷಿಯ ವಿವಾಹ ಮಹೋತ್ಸವಕ್ಕೆ ಈಡಿ ಮನೆ ಕಳೆ ಕಟ್ಟುತ್ತಿದೆ. ಇದೇ ಸಂದರ್ಭದಲ್ಲಿ ಮೃದಲಾ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ.ಅಮೃತಾ ರಾಮಮೂರ್ತಿ ಈ ಸಂದರ್ಭದಲ್ಲಿ ಆಗಮಿಸಿದ್ದು ಏಕೆ ಎಂಬುದು ಕೂತಹಲವಿದೆ. ಮೃದಲಾ ಪಾತ್ರ ಈ ಸಮಯದಲ್ಲಿ ಏನನ್ನು ತಿರುವು ಕಾಣುತ್ತದೆ ಎಂಬುದನ್ನು ಸಂಚಿಕೆಯಲ್ಲಿ ನೋಡಬಹುದು.
ಶಾಸ್ರ್ತೋಕ್ತವಾಗಿ ಮದುವೆ ಕಾರ್ಯಕ್ರಮನ್ನು ನಡಿಸಲಾಗಿದೆ. ಬಳೆ ಶಾಸ್ತ್ರ , ಅರಿಶಿನ ಶಾಸ್ತ್ರ , ಮೆಹೆಂದಿ ಹೀಗೆ ನೈಜ ರೀತಿಯಲ್ಲಿ ನೆರವೇರಿಸಿದ್ದಾರೆ.

ಕಾವ್ಯಾಂಜಲಿಯಲ್ಲಿ ಮಂಡ್ಯ ರಮೇಶ್ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ

ಈ ಕಲ್ಯಾಣೋತ್ಸವದಲ್ಲಿ ಸಂಗೀತ ಮತ್ತು ನೃತ್ಯದ ರಂಗು ಎರಡು ಇದೆ. ವಿಶೇಷವೆಂದರೆ ಖಡಕ್ ರೆಟ್ರೊ ಲುಕ್‌ನಲ್ಲಿ ಈಡಿ ಫ್ಯಾಮಿಲಿ ನೃತ್ಯ ಮಾಡುತ್ತಾರೆ. ಕಸ್ತೂರಿನಿವಾಸದ ಈಡಿ ತಂಡ ಹಾಡು – ನೃತ್ಯದೊಂದಿಗೆ ಸಪ್ತಪದಿಯ ಕಂತುಗಳಿಗೆ ಸಾಕ್ಷಿಯಾಗಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.ರಾಘವ್ ಖುಷಿ ಮದುವೆ ಗೆ ಜೊತೆಯಾಗ್ತಿದ್ದಾರೆ ಯಾರಿವಳು ಧಾರಾವಾಹಿಯ ಮಾಯ ಮತ್ತು ನಿಖಿಲ್ , ಹಾಗು ಕಾವ್ಯಾಂಜಲಿಯ ಎರಡು ಸೂಪರ್ ಹಿಟ್ ಜೋಡಿಗಳು. ಇದೆಲ್ಲದರ ನಡುವೆ ಕಥೆಯಲ್ಲಿ ವಿಶೇಷ ತಿರುವುಗಳು ಸೇರಿವೆ , ಅಡೆಚಣೆಗಳು ನಡುವೆ ಹೇಗೆ ನಡೆಯತ್ತೆ ಈ ಶುಭಕಾರ್ಯಅನ್ನುವುದೆ ಕಥಾ ಹಂದರ.
ರಂಗೇರಿತ್ತಿರೊ ಈ ವಿವಾಹ ಸಂಭ್ರಮ ಸೋಮವಾರದಿಂದ ಶನಿವಾರದ ವರೆಗೆ ಸಂಜೆ ೭ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com