ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ” ಅಶೋಕ ಬ್ಲೇಡ್” ಚಿತ್ರದ ಮುಹೂರ್ತ

Published on

568 Views
Advertisement

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ” ಅಶೋಕ ಬ್ಲೇಡ್” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭಫಲಕ ತೋರಿದರು. ಟ.ಎನ್.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ನಾನು ಹಲವಾರು ವರ್ಷಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಿ. ಶೇಷಾದ್ರಿ, ಟಿ.ಎನ್​. ಸೀತಾರಾಂ ಅವರ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕ ಮತ್ತು ನಿರ್ದೇಶಕರಾಗಿ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ವರ್ಧನ್​ ಮತ್ತು ದೀಪಕ್​ ನಾಯ್ಡು ಅವರ ಪರಿಚಯವಾಯಿತು. ಮೂರು ಜನ ಸೇರಿ 10 ವರ್ಷಗಳ ಹಿಂದೆ ಒಂದು ಪ್ರೊಡಕ್ಷನ್​ ಹೌಸ್​ ಪ್ರಾರಂಭಿಸಿ, ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದೇವೆ. ಒಂದು ಚಿತ್ರ ನಿರ್ಮಾಣ ಮಾಡುವ ಯೋಚನೆ ಇತ್ತು. ಟಿ.ಕೆ. ದಯಾನಂದ್​ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್​ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಿರ್ದೇಶಕ ವಿನೋದ್ ದೋಂಡಾಳೆ ಮಾಹಿತಿ ನೀಡಿದರು.

Advertisement

ದಿನ ಬೆಳಗಾದರೆ ಹಲವು ನಿರ್ದೇಶಕರು ಬಂದು ಕಥೆ ಹೇಳುತ್ತಾರೆ. ಆದರೆ, ಈ ಕಥೆ ಹುಡುಕಿದ್ದು ನಾನೇ. ಸ್ನೇಹಿತರ ಮೂಲಕ ದಯಾನಂದ್​ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್​ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್​ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್​ ಸ್ಟಾರ್​ ಕಾಣಿಸಿಕೊಳ್ಳಲಿದ್ದಾರೆ. ಉತ್ತರಖಾಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಳೆಯಿಂದ ಚಿತ್ರೀಕರಣ ಶುರುವಾಗಲಿದ್ದು, ನಾನು ಜುಲೈನಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದೇನೆ ಎನ್ನುತ್ತಾರೆ ನೀನಾಸಂ ಸತೀಶ್.

Advertisement

ಮೊದಲ ಬಾರಿಗೆ ಇನ್​ಸ್ಪೆಕ್ಟರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹಳ ಒಳ್ಳೆಯ ಪಾತ್ರ ಇದು. ಚಿತ್ರವು ಎರಡು ಕಾಲಘಟ್ಟದಲ್ಲಿ ನಡೆಯಲಿದೆ. ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದರು ಕಾವ್ಯ ಶೆಟ್ಟಿ.

ದಯಾನಂದ್ ಅವರು ಈ ಕಥೆ ಹೇಳಿದ ತಕ್ಷಣ ನಮಗೆ ಹಾಗೂ ನಿರ್ದೇಶಕ ವಿನೋದ್ ಅವರಿಗೆ ಹಿಡಿಸಿತು. ಇದೇ ಕಥೆಯನ್ನು ಸಿನಿಮಾ ಮಾಡಲು ತೀರ್ಮಾನಿಸಿದ್ದೆವು. ಇದೊಂದು ಬಿಗ್ ಬಜೆಟ್ ಸಿನಿಮಾ ಆಗಲಿದೆ ಅಂದರು ನಿರ್ಮಾಪಕ ನರಹರಿ.

Advertisement

ನನಗೆ ಈ ಕಥೆ ಬಹಳ ವಿಶೇಷ. ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾಯಿತು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ ಎಂದು‌ ಚಿತ್ರದ ಕಥೆಯ ಬಗ್ಗೆ ಟಿ.ಕೆ.ದಯಾನಂದ್ ಮಾತನಾಡಿದರು.

Advertisement

ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್ ಹಾಗೂ ನಟ ಬಿ.ಸುರೇಶ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವೃದ್ಧಿ ಕ್ರಿಯೇಷನ್ಸ್ ಹಾಗೂ ಸತೀಶ್ ಪಿಕ್ಚರ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 1 month ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 month ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com