ವಿಕಲಚೇತನ ಟ್ರಸ್ಟ್ ಗಾಗಿ ಕಲ್ಲಂಗಡಿ ಹಣ್ಣನ್ನು ಮಾರಿದ “ಮಾನ್ವಿತಾ ಹರೀಶ್”

Published on

356 Views

ಕಳೆದ ವಾರದ ಸದಾ ನಿಮ್ಮೊಂದಿಗೆ ಸಂಚಿಕೆಯಲ್ಲಿ ಲವ್ಲಿಸ್ಟಾರ್ ಪ್ರೇಮ್ ಅವರು ದೇವರಾಜ್ ಎಂಬ ಎಳನೀರು ವ್ಯಾಪಾರಿಗೋಸ್ಕರ ಎಳನೀರು ಮಾರಿ ಸಹಾಯ ಮಾಡಿದ್ದನ್ನ ನೀವು ನೋಡಿದ್ರಿ. ಇದರಿಂದ ದೇವರಾಜ್ ಕುಟುಂಬಕ್ಕೆ ಸಹಾಯವಾಗಿದೆ.

ಈ ವಾರದ ನಮ್ಮ ಸದಾ ನಿಮ್ಮೊಂದಿಗೆ ಕಾರ್ಯಕ್ರಮದಲ್ಲಿ ಕೆಂಡಸಂಪಿಗೆ ಚೆಲುವೆ ಮಾನ್ವಿತಾ ಹರೀಶ್ ಅವರು ಧನಲಕ್ಷ್ಮೀ ಎಂಬುವಳಿಗೋಸ್ಕರ ಭಾಗವಹಿಸಿದ್ದಾರೆ. ಧನಲಕ್ಷ್ಮೀ ಚಿಕ್ಕ ವಯಸ್ಸಲ್ಲೇ ಪೋಲಿಯೋ ಅಟ್ಯಾಕ್ ಆಗಿ ಬದುಕು ಸಾಗಿಸೋಕೆ ಕಷ್ಟಪಡುತ್ತಿದ್ದಾಳೆ. ತನ್ನ ಹಾಗೆ ಇರುವ ಬೇರೆ ವಿಕಲಚೇತನರಿಗೆ ಕಷ್ಟ ಬರಬಾರದೆಂದು “ನಮಿತಾಂಜಲಿ” ಎನ್ನುವ ಗೆಳತಿಯ ಹೆಸರಲ್ಲಿ ಒಂದು ಟ್ರಸ್ಟ್ ಓಪನ್ ಮಾಡಿ ಒಂದಷ್ಟು ವಿಕಲಚೇತನರಿಗೆ ಆಶ್ರಯ ಕೊಟ್ಟಿದ್ದಾರೆ. ಇಲ್ಲಿ ಒಂದು ವಿಶೇಷ ಎಂದರೆ ನಮಿತಾಂಜಲಿ ಎನ್ನುವರು ಈ ಧನಲಕ್ಷ್ಮೀಯ ಸ್ನೇಹಿತೆ. ಇವರ ಹೆಸರಿನಲ್ಲಿ ಟ್ರಸ್ಟ್ ಪ್ರಾರಂಭಿಸಿದ್ದು ಏಕೆ? ಎಂಬುದನ್ನು ಈ ವಾರದ ಸಂಚಿಕೆಯಲ್ಲಿ ನೋಡಬಹುದು.

ಇಂಥಹ ಮಹೋನ್ನತವಾದ ಸೇವೆಗೆ ಕೈ ಜೋಡಿಸಲು ಮಾನ್ವೀತಾ ಹರೀಶ್ ಕಲ್ಲಂಗಡಿ ಹಣ್ಣನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಮಾರಿದ್ದಾರೆ. ಹಾಗಾದರೆ ಮಾನ್ವೀತಾ ಮಾರಿದ ಕಲ್ಲಂಗಡಿ ಹಣ್ಣಿನ ಒಟ್ಟು ಮೊತ್ತ ಎಷ್ಟು? ಧನಲಕ್ಷ್ಮೀಯ ಟ್ರಸ್ಟ್‍ಗೆ ಸೇರಿದ ಹಣ ಎಷ್ಟು? ಎಂಬುದು ಈ ವಾರದ ಸದಾ ನಿಮ್ಮೋಂದಿಗೆಯಲ್ಲಿ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com