ಮಾಯಾಬಜಾರ್ ಮುಹೂರ್ತ

Published on

603 Views
Advertisement

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಪಿ.ಆರ್.ಕೆ ಸಂಸ್ಥೆಯಲ್ಲಿ ಹೊಸ ಪ್ರತಿಭೆಗಳಿಗೆ ನಿರಂತರವಾಗಿ ಅವಕಾಶ ಸಿಗಲಿದೆಯಂತೆ. ಹಾಗಂತ ಎಲ್ಲರಿಗೂ ಅವಕಾಶ ಸಿಗುವುದಿಲ್ಲ ಯಾರಲ್ಲಿ ಸಾಮರ್ಥ್ಯ, ಪ್ರತಿಭೆ ಇರುತ್ತೋ ಅಂಥವರನ್ನು ಹುಡುಕಿ ಒಂದು ಸುವರ್ಣ ಅವಕಾಶವನ್ನು ಈ ಸಂಸ್ಥೆ ನೀಡಲಿದೆ. ಈ ಮೂಲಕ ಸದಭಿರುಚಿಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಪುನೀತ್ ರಾಜ್ ಕುಮಾರ್. ಈಗಾಗಲೇ ಕವಲುದಾರಿ ಎಂಬ ಚಿತ್ರವನ್ನು ನಿರ್ಮಿಸಿ ಎಂಬತ್ತು ರಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ. ಹಾಗೆಯೇ ಮಾಯಾ ಬಜಾರ್ ಚಿತ್ರವನ್ನು ಈಗ ಆರಂಭಿಸಿದ್ದು ಉತ್ತಮ ಕಥೆ ಹಾಗೂ ಬಜೆಟ್ ಪ್ಲಾನ್ ನೊಂದಿಗೆ ಬಂದರೆ ಖಂಡಿತ ಈ ಸಂಸ್ಥೆಯಿಂದ ನಿರಂತರವಾಗಿ ಚಿತ್ರಗಳನ್ನು ನಿರ್ಮಿಸಲಿದ್ದಾರಂತೆ.

Advertisement

ಮಾಯಾಬಜಾರ್ ಈ ಪದ ಕೇಳಿದೊಡನೆ ಟಾಲಿವುಡ್ನಲ್ಲಿ ದಾಖಲೆ ನಿರ್ಮಿಸಿದ್ದ ಮಾಯಾಬಜಾರ್ ಚಿತ್ರದತ್ತ ಚಿತ್ತ ಹರಿಯುತ್ತದೆ. ಅದೂ ಅಲ್ಲದೆ ಈಗ ಸ್ಯಾಂಡಲ್ವುಡ್ನಲ್ಲಿ ಕುರುಕ್ಷೇತ್ರ ಎಂಬ ಪೌರಾಣಿಕ ಚಿತ್ರ ಬರುತ್ತಿರುವ ಬೆನ್ನಲ್ಲೇ ಮಾಯಾಬಜಾರ್ ಎಂಬ ಚಿತ್ರವು ಸೆಟ್ಟೇರುತ್ತದೆ ಎಂಬ ಕುತೂಹಲ ಮೂಡುವುದು ಸಹಜ.

ಆದರೆ ಇದು ಪೌರಾಣಿಕ ಚಿತ್ರವಲ್ಲ , ಬದಲಿಗೆ ಈಗಿನ ಟ್ರೆಂಡ್ಗೆ ಇಷ್ಟವಾಗುವ ಸಬ್ಜೆಕ್ಟ್ ಅನ್ನು ಒಳಗೊಂಡಿರುವ ಸಿನಿಮಾ. ಪವರ್ಸ್ಟಾರ್ ಪುನೀತ್ ತಮ್ಮ ಪಿಆರ್ಕೆ ಪಿಕ್ಚರ್ಸ್ ಮೂಲಕ ತೆರೆಗರ್ಪಿಸಿ , ಅಶ್ವಿನಿ ಪುನೀತ್ರಾಜ್ಕುಮಾರ್ ಹಾಗೂ ಎಂ.ಗೋವಿಂದು ಅವರು ನಿರ್ಮಿಸುತ್ತಿರುವ ಸಿನಿಮಾ.

Advertisement

ರಾಧಾಕೃಷ್ಣ ನಿರ್ದೇಶಿಸುತ್ತಿರುವ ಈ ಮಾಯಾಬಜಾರ್ ಚಿತ್ರದಲ್ಲಿ ಮನರಂಜನೆಯ ಜೊತೆಗೆ ಪ್ರೇಕ್ಷಕರನ್ನು ನಕ್ಕು ನಲಿಸಲು ಹಾಸ್ಯವನ್ನು ಕೇಂದ್ರಿಕೃತವಾಗಿಸಿಕೊಂಡಿದೆಯಂತೆ. ಸಿವಿಎಲ್ ಎಂಜಿನಿಯರ್ ಆಗಿರುವ ರಾಧಾಕೃಷ್ಣ ಈ ಹಿಂದೆ ಕಿರುಚಿತ್ರವನ್ನು ನಿರ್ದೇಶನಿಸಿರುವ ಅನುಭವ ಇದ್ದು , ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದಾರೆ.

Advertisement

ರಾಧಾಕೃಷ್ಣ ಅವರು ಮಾಯಾಬಜಾರ್ನ ಕಥೆಯ ಎಳೆಯನ್ನು ಹೇಳಿದ ಕೂಡಿ ಮೆಚ್ಚಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರಂತೆ. ಚಿತ್ರಕ್ಕೆ ಮಾಯಾಬಜಾರ್-2016 ಎಂದಿಟ್ಟಿದ್ದು ಆ ವರ್ಷ ನಡೆದ ಕೆಲವು ಘಟನೆಗಳನ್ನೇ ಕೇಂದ್ರೀಕರಿಸಲಾಗಿದ್ದು ಚಿತ್ರಕ್ಕೆ ಇದೇ 29 ರಂದು ಬೆಂಗಳೂರಿನಲ್ಲಿ ಚಿತ್ರೀಕರಿಸುವುದರ ಜೊತೆಗೆ ವಿದೇಶದಲ್ಲೂ ಚಿತ್ರೀಕರಣ ನಡೆಸಲಿದ್ದಾರಂತೆ. ಮೊನ್ನೆ ಕಂಠೀರವಾ ಸ್ಟುಡಿಯೋದಲ್ಲಿ ಮುಹೂರ್ತ ನಡೆದಿದ್ದು , ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮೊದಲ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು. ಕಥೆಯೇ ಪ್ರಮುಖವಾಗಿರುವ ಈ ಚಿತ್ರದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ನಾಯಕ ವಸಿಷ್ಠ, ಒಂದು ಮೊಟ್ಟೆಯ ಕಥೆಯ ನಾಯಕ ರಾಜ್ ಬಿ.ಶೆಟ್ಟಿ ಹಾಗೂ ಜೋಡಿಹಕ್ಕಿ ಧಾರಾವಾಹಿಯ ಚೈತ್ರ ಅಭಿನಯಿಸುತ್ತಿದ್ದು, ಪ್ರಕಾಶ್ ರೈ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಉಳಿದಂತೆ ಅಚ್ಯುತ್ಕುಮಾರ್, ಸಾಧುಕೋಕಿಲ, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವನ್ನೇ ಹೊಂದಿದೆ. ಈ ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಛಾಯಾಗ್ರಹಣ, ಮಿಥುನ್ ಮುಕುಂದನ್ ಸಂಗೀತ, ಪವನ್ ಸಂಭಾಷಣೆ ಬರೆಯುತ್ತಿದ್ದು, ಈ ಚಿತ್ರ ಸಣ್ಣ ಸಣ್ಣ ವಿಚಾರಗಳನ್ನು ಕೂಡ ಸೂಕ್ಷ್ಮವಾಗಿ ತೆರೆ ಮೇಲೆ ತರುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಪಿಆರ್ಕೆ ಪ್ರೊಡಕ್ಷನ್ಸ್ ಮೂಲಕ ಮತ್ತಷ್ಟು ಉತ್ತಮ ಚಿತ್ರಗಳು ಹೊಮ್ಮಿಬರುವಂತಾಗಲಿ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com