ಕನ್ನಡದ ಹೆಮ್ಮೆಯ ಬಹುಮುಖ ಪ್ರತಿಭೆಯ ಮಿಮಿಕ್ರಿ ದಯಾನಂದ ! ದಯೆ’ಯಲ್ಲಿ ‘ಆನಂದ’ವಿದೆ ! – ಮಂಡ್ಯ ರಮೇಶ್

Published on

609 Views
Advertisement

‘ಕನಸುಗಾರ’ ಚಿತ್ರೀಕರಣ ಭರದಿಂದ ನಡೆದಿತ್ತು !
ಆ ಹೊತ್ತಿಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಟನೊಬ್ಬನನ್ನು ನಾನು ಸಮೀಪದಲ್ಲಿ ನೋಡಿದೆ.ನನ್ನನ್ನು ಕಂಡವರೇ ಹತ್ತಿರ ಕರೆದು, ಕುಳಿತು ಎಷ್ಟೋ ವರ್ಷಗಳ ಗೆಳೆಯ ಎಂಬಂತೆ ಮಾತನಾಡಿಸಿದರು.ರಂಗಭೂಮಿ, ಮಾಧ್ಯಮಗಳು ,ಸಾಮಾಜಿಕ ವರ್ತಮಾನ, ರಾಜಕೀಯ ,ಸಾಹಿತ್ಯ ..ಅನೇಕ ವಿಷಯಗಳ ಬಗ್ಗೆ ಮಾತನಾಡುತ್ತಲೇ ಹೋದರು.ಸಾಮಾನ್ಯವಾಗಿ ಕಮರ್ಷಿಯಲ್ ಸಿನಿಮಾಗಳಲ್ಲಿ ಪೋಷಕ ನಟ ಎಂದರೆ ಉಪ್ಪಿನಕಾಯಿ ಇದ್ದಹಾಗೆ! ಅಪರೂಪಕ್ಕೊಮ್ಮೆ ಬಂದು ಹೋಗುತ್ತೇವೆ ಅಷ್ಟೇ! ಶೂಟಿಂಗ್ನಲ್ಲಿ ತುಂಬಾ ಬಿಡುವು ಇರುತ್ತದೆ!.. ಆಗೆಲ್ಲ ಒಳ್ಳೆಯದನ್ನು ಕುರಿತು ಮಾತನಾಡುವ,, ಚರ್ಚೆಮಾಡಲು ಯಾರಾದರೂ ಸಿಕ್ಕದಿದ್ದರೆ ಅವನು ಬೋರ್ ಆಗುವುದಂತೂ ಗ್ಯಾರಂಟಿ ..ನನಗೆ ಕೆಲವೇ ಕ್ಷಣಗಳಲ್ಲಿ ಈ ವ್ಯಕ್ತಿ ಆಪ್ತನಾಗಿ ಬಿಟ್ಟರು. ಅವರ ಮಾತುಗಳಿಂದ ವಿಚಾರಗಳಿಂದ , ಸಾಧನೆಗಳಿಂದ, ಸಾಧ್ಯತೆಗಳಿಂದ ಪ್ರಭಾವಿತನಾದೆ ಆ ವ್ಯಕ್ತಿ ಕನ್ನಡದ ಹೆಮ್ಮೆಯ ಬಹುಮುಖ ಪ್ರತಿಭೆಯ #ಮಿಮಿಕ್ರಿ #ದಯಾನಂದ !
ಈ ಟಿವಿಯಲ್ಲಿ ಅವರು ನಡೆಸಿಕೊಡುತ್ತಿದ್ದ ಏಕವ್ಯಕ್ತಿ ಪ್ರದರ್ಶನಗಳು ಮತ್ತು ರಾಜಕುಮಾರ್ ಅಪಹರಣವಾದಾಗ ಅವರು ಸೃಷ್ಟಿಸಿದ ಸಿ .ಡಿ, ಅವರ ಅನೇಕ ವಿಚಾರಪೂರ್ಣ ಮತ್ತು ಆಕರ್ಷಕ ಗುಣಗಳು ಎರಡು ಮೇಳವಿಸಿದ ಅಪರೂಪದ ಮಿಮಿಕ್ರಿ ಕಾರ್ಯಕ್ರಮಗಳು,ಮಜಾ ಟಾಕೀಸ್ ಒಡನಾಟ ,ಆಸ್ಟ್ರೇಲಿಯಾ ಪ್ರವಾಸ.. ನನ್ನನ್ನುಮತ್ತಷ್ಟು ಹತ್ತಿರಕ್ಕೆ ಸೆಳೆಯಲು ಕಾರಣವಾದವು.
ಗುರು ಕಾರಂತರು ಮಿಮಿಕ್ರಿ ಎಂದರೆ ಅಷ್ಟೇನೂ ಹತ್ತಿರಕ್ಕೆ ಬಿಟ್ಟು ಕೊಂಡವರಲ್ಲ !ಆದರೆ ಈ ವ್ಯಕ್ತಿಯ ಮಿಮಿಕ್ರಿ ಗಳು ಇತರರಿಗಿಂತ ಭಿನ್ನವಾಗಿದ್ದವು ಆ ಕಾರಣಕ್ಕಾಗಿ ದಯಾನಂದರದೆ ಒಂದು ವಿಶಿಷ್ಟ ಶೈಲಿ ಇತ್ತು.
ನಟನ ಕಟ್ಟುವ ಆರಂಭದ ದಿನಗಳಲ್ಲಿ ಹಣದ ತೊಂದರೆಯಾಗಿ ನಾನು ಒದ್ದಾಡುತ್ತಿದ್ದ ನೋಡಿ ಒಮ್ಮೆ ಸಾಲ ಕೊಟ್ಟಿದ್ದರು! ಅದನ್ನು ಮರಳಿಸಿದೆ. ಪ್ರತಿವರ್ಷ ನಮ್ಮ ಮಕ್ಕಳ ಬೇಸಿಗೆ ರಂಗ ಶಿಬಿರ ರಜಾ-ಮಜಾಕ್ಕೆ ಆಗಮಿಸಿ, ಶಿಬಿರದ ಮಕ್ಕಳಿಗೆ ಧ್ವನಿಯ ಬಳಕೆ, ಏರಿಳಿತಗಳು, ಮಾತನಾಡುವ ಕಲೆಯನ್ನು ಕುರಿತು ವೈಶಿಷ್ಟ್ಯಪೂರ್ಣವಾಗಿ ತರಬೇತು ಗೊಳಿಸಿದರು.


ಇವತ್ತಿಗೂ ಅವರೊಂದಿಗೆ ಮಾತನಾಡುತ್ತಿದ್ದರೆ, ಕಲಾವಿದನೊಬ್ಬನ ಯಾನವೊಂದನ್ನು ನವಿರಾದ ನಿರೂಪಣೆಯೊಂದಿಗೆ ಮನದಣಿಯೆ ಸವಿಯಬಹುದು. ಸಾವಿರಾರು ಕಾರ್ಯಕ್ರಮಗಳು, ಅಸಂಖ್ಯ ವಿದೇಶ ಪ್ರವಾಸಗಳು, ಲಕ್ಷಾಂತರ ಅಭಿಮಾನಿಗಳು, ಎಲ್ಲವನ್ನು ಮೀರಿ ಮಾನವೀಯ ನೆಲೆಯಲ್ಲಿಯೇ ಮನದಣಿಯೆ ಅನುಭವಿಸುವ ಕಥನ ನಮ್ಮ ಮುಂದೆ ಅನಾವರಣಗೊಳ್ಳುತ್ತದೆ.
ಕಾರ್ಯಕ್ರಮಗಳಿಗೆ ಸುತ್ತಿ ಸುತ್ತಿ ಸುಸ್ತಾಗಿದ್ದಾರೆ, ಚೈತನ್ಯ ಬತ್ತಿಲ್ಲ!
“ಮನೆಗೆ ಬಾ” ಅಂತ ಫೋನಾಯಿಸಿದರು!
ಇವತ್ತು ಹೋದೆ,
ಅವರನ್ನು ಜನಪ್ರೀತಿ ಮಾಡಿರುವ ರೀತಿ ನೋಡಿ ಬೆರಗಾದೆ .
ನಟನದ ನಾಟಕಗಳಿಗೆ ಸಹಾಯವಾಗುವ ಅನೇಕ ಕೋಟು, ವಿಗ್ ಗಳನ್ನು ಕಾರಿನ ತುಂಬೆಲ್ಲ ಭರ್ತಿ ತುಂಬಿ ಬಿಟ್ಟರು.!
ಸ್ನೇಹಕ್ಕೆ, ಮಾತು ಬಾರದಾಯಿತು!
ಎದ್ದು ಬರುವ ಮುಂಚೆ “ಏನು ಬೇಕು”? ಎಂದರು . ಮೇಲಂತಸ್ತಿನಲ್ಲಿ #ಬಾಬಾಸಾಹೇಬರು ನಿಂತಿದ್ದರು.
ಅಪರೂಪದ ಮೂರ್ತಿ.”ಅದು ಬೇಕು” ಅಂದೆ ಪ್ರೀತಿಯಿಂದ “ತೆಗೆದುಕೋ” ಅಂತ ಕೊಟ್ಟರು.
ಮರಳಿ ಬರುವಾಗ ಶಿಷ್ಯ ಜಗ್ಗಿ “ಅದೇನು ಸರ್ ಅಂಬೇಡ್ಕರ್ ತೆಗೆದುಕೊಂಡಿದ್ದು” ಅಂದ.
“ನೀನ್ ಇವತ್ತು ನನ್ನ ಪಕ್ಕದಲ್ಲಿ ಇರೋದಕ್ಕೆ ಅವರೇ ಕಾರಣ”
ಅಂದೆ ನಗುತ್ತಾ !
‘ನಟನ’ ದಲ್ಲಿ ಈಗಾಗಲೇ ಗಾಂಧಿ ಕೂತಿದ್ದಾರೆ.ಈಗ ನಿಂತ ಅಂಬೇಡ್ಕರ್ ಬಂದರು .ಒಳಗೆ ಬುದ್ಧ- ಬಸವಣ್ಣ ವಿವೇಕಾನಂದ ,ಕುವೆಂಪು- ಕಾರಂತರು ಇದ್ದಾರೆ ..”ಇವರ ಘರ್ಷಣೆಗಳಲ್ಲಿ- ಹೊಂದಾಣಿಕೆಯಲ್ಲಿ
ನಾವು ಬದುಕಬೇಕು” ಅಂದೆ!
ಮಗ ಶಿಶಿರ “ಕಷ್ಟ” ಅಂದ !.
“ಗೊತ್ತು” ಎಂದು ನಕ್ಕೆ!
‘#ದಯೆ’ಯಲ್ಲಿ ‘#ಆನಂದ’ವಿದೆ !🙏

Advertisement

More Buzz

Buzz 5 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 7 days ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com