ಶ್ರೇಯಸ್ಸ್ ಕೆ ಮಂಜು ಅಭಿನಯದ, ನಂದ ಕಿಶೋರ್ ನಿರ್ದೇಶನದ ನೂತನ ಚಿತ್ರಕ್ಕೆ ಜುಲೈ 7ರಂದು ಮುಹೂರ್ತ.

Published on

278 Views

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ನಂದ ಕಿಶೋರ್(ಪೊಗರು) ನಿರ್ದೇಶಿಸುತ್ತಿದ್ದಾರೆ.

ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.
ಮುಹೂರ್ತಕ್ಕೂ ಮುನ್ನ ಜುಲೈ 1 ರಂದು ಶೀರ್ಷಿಕೆ ಅನಾವರಣ ಮಾಡಿವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.
ಬೆಂಗಳೂರು, ಬೆಳಗಾವಿ, ಹೊಸಪೇಟೆ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ.

ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಕರ್ನಾಟಕದ ಅನೇಕ ಊರುಗಳಲ್ಲಿರುವ ಪ್ರತಿಭೆಗಳನ್ನು ಆನ್ ಲೈನ್ ಆಡಿಷನ್ ಮೂಲಕ ಆರಿಸಿಕೊಳಲಾಗಿದೆಯಂತೆ.
ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು “ಟಗರು” ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು.

ಇದು ಪುರುಷೋತ್ತಮ್ ಅವರು ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.

ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Copyright ©2024 . All Rights Reserved. privacy | terms Whatsapp: 9538193653 Email: hello@flixoye.com