ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಕಸ್ತೂರಿ ನಿವಾಸ” ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರ ಸಂಜೆ 6.30ಕ್ಕೆ

Published on

452 Views
Advertisement

“ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ” ಎಂದು ಶ್ರೀ ಡಿ.ವಿ.ಜಿಯವರು ಮಂಕುತಿಮ್ಮನ ಕಗ್ಗದಲ್ಲಿ ಹೇಳಿರುವಂತೆ, ಹಳೆ ತತ್ವಗಳಿಗೆ ಹೊಸ ಯುಕ್ತಿ ಸೇರಬೇಕು ಹಾಗೆ ಹೊಸದಾಗಿ ಚಿಗುರು ಬರುವುದು ಹಳೆ ಬೇರಿನಿಂದಲೇ ಎನ್ನುವುದು ಎಲ್ಲರಿಗೂ ಮನನವಾಗಬೇಕು. ಪ್ರಾಚೀನಕತೆಗೆ ಧಕ್ಕೆ ಬಾರದಂತೆ ಆಧುನಿಕತಗೆ ಪರಿವರ್ತಿಸುವ ವಿಷಯವನ್ನು ಇಟ್ಟುಕೊಂಡು ಜನಜೀವನಕ್ಕೆ ಉಪಯುಕ್ತವಾಗುವಂತಹ ಒಂದು ವಿನೂತನ ವಿಚಾರದ ಕುರಿತು “ಕಸ್ತೂರಿ ನಿವಾಸ” ಎಂಬ ಹೊಸ ಧಾರಾವಾಹಿಯನ್ನು ಉದಯ ಟಿವಿ ಇದೇ ಸೆಪ್ಟೆಂಬರ್ 9 ರಿಂದ ಸೊಮವಾರದಿಂದ ಶನಿವಾರದವರೆಗೆ ಸಂಜೆ 6.30ಕ್ಕೆ ಪ್ರಾರಂಬಿಸುತ್ತಿದೆ.

ಈಗಾಗಲೇ ನಂದಿನಿ, ಕಾವೇರಿ, ನಾಯಕಿ, ಕ್ಷಮಾ, ನಾನು ನನ್ನ ಕನಸು ಎಂಬ ವಿಭಿನ್ನ ಕಥೆಗಳ ಧಾರಾವಾಹಿಗಳನ್ನು ನೀಡುತ್ತಾ ಬಂದಿರುವ ಉದಯ ಟಿವಿ ಈಗ ಮತ್ತೊಂದು ವಿನೂತನ ಕಥೆಯ ‘’ಕಸ್ತೂರಿ ನಿವಾಸ’’ ಎಂಬ ಧಾರಾವಾಹಿಯನ್ನು ಪ್ರಾರಂಬಿಸುತ್ತಿದೆ. ಮನೆತನ , ಸಂಪ್ರಾದಾಯ , ಸಂಸ್ಕøತಿ ಅಂತ ನಂಬಿರೋ ಪಾರ್ವತಿ ಒಂದ್ಕಡೆ ಆದ್ರೆ , ಕಟ್ಟು ಪಾಡುಗಳಲ್ಲಿ ನಂಬಿಕೆ ಇಲ್ಲದೆ, ಹಕ್ಕಿಯಂತೆ ಹಾರಾಡಬೇಕು ಅನ್ನೋ ಮೃದುಲಾ ಇನ್ನೋಂದ್ಕಡೆ. ಈ ಬೇರೆ ಬೇರೆ ಆಲೋಚನೆಗಳಿರೋ ಈ ಇಬ್ಬರನ್ನ ವಿಧಿ ಒಂದೆ ದಾರಿಯಲ್ಲಿ ನೆಡೆಯೋ ಹಾಗೆ ಮಾಡಿದರೆ ಹೇಗಿರುತ್ತದೆ ಎಂಬುದೆ ಈ ಧಾರಾವಾಹಿಯ ಕಥಾ ಹಂದರ.

Advertisement

ಹಿಂದಿನ ಕಾಲದ ಆಲೋಚನೆಗಲಿಗೆ ಆಧುನಿಕತೆಯನ್ನು ಅಳವಡಿಸಿಕೊಂಡು ನಡೆಯುವದರಲ್ಲಿ ತಪ್ಪೇನಿದೆ ಎಂಬ ವಾದ ಧಾರಾವಾಹಿಯ ನಾಯಕಿ ಮೃದಲಾಳವಾದವಾದರೆ, ಹೆಣ್ಣು ಅಡುಗೆ ಮಾಡಬೇಕು , ತಗ್ಗಿ ಬಗ್ಗಿ ನಡೆಯಲೇಬೇಕು, ಮೈ ಮುಚ್ಚುವಹಾಗೆ ಉಡುಗೆ ತೊದುಗೆಗಲನ್ನ ಧರಿಸ ಬೆಕು ಎಂಬುದು ಪಾರ್ವತಿಯವಾದ. ಇವರುಗಳ ಮದ್ಧ್ಯೆ ತನ್ನ ಅಮ್ಮನ ಮಾತನ್ನು ಮೀರೋಕಾಗ್ದೆ, ಫ್ಯಾಶನ್ ಡಿಸೈನರ್ ಆಗೋ ಕನಸು ಕಾಣ್ತಿರೋ ನಾಯಕ ತನ್ನ ಮನಸ್ಸಿನ ಮಾತನ್ನು ಧಿಕ್ಕರಿಸೊಕೆ ಆಗ್ದೆ ಒದ್ದಾಡ್ತಿರೋ ಕಥೆ “ಕಸ್ತೂರಿ ನಿವಾಸ” ಧಾರಾವಾಹಿಯನ್ನು ಅದ್ಭುತವಾಗಿ ನಿರ್ದೇಶಿಸುತ್ತಿದ್ದಾರೆ ಮುಸ್ಸಂಜೆ ಮಹೆಶ್.

Advertisement

ನಾಯಕಿ ಮೃದಲಾ ಪಾತ್ರವನ್ನು ನಟಿ ವರ್ಷಾ ಮಾಡುತ್ತಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಹೆಸರಾಂತ ನಟಿ ಆಶಾ ರಾಣಿ ಪಾರ್ವತಿಯ ಪಾತ್ರವನ್ನು ನೀರ್ವಹಿಸುತ್ತಿದ್ದಾರೆ. ನಾಯಕ ನಟನಾಗಿ ದೀಲಿಪ್ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಹಾಗೆ ರಾಜಗೋಪಾಲ ಜೋಶಿ , ರುತು , ಶಿಲಶ್ರೀ , ಸಿತಾರಾ ಹೀಗೆ ಹಲವಾರು ಪ್ರತಿಭಾವಂತ ಕಲಾವಿದರ ತಂಡು ಈ ಧಾರಾವಾಹಿಯಲ್ಲಿದೆ.

ದೇವಿ ಸ್ಟುಡಿಯೋಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ. ಕಿರುತೆರೆಯ ಜನಪ್ರಿಯ ನಟಿ ಜಯಶ್ರೀ ಈ ಧಾರಾವಾಹಿಯನ್ನ ಉದಯ ಟಿವಿಯ ವೀಕ್ಷಕರಿಗೆ ಅರ್ಪಿಸುತ್ತಿದ್ದಾರೆ. ಮಾಣಿ ಛಾಯಾಗ್ರಹಣ ಮಾಡುತ್ತಿದ್ದಾರೆ.
ವಿನೂತನ ಪ್ರಯತ್ನದ “ಕಸ್ತೂರಿ ನಿವಾಸ” ಉದಯ ಟಿವಿಯಲ್ಲಿ ಇದೇ ಸೆಪ್ಟಂಬರ್ 09 ರಿಂದ ಸಂಜೆ 6.30ಕ್ಕೆ ಪ್ರಸಾರವಾಗಲಿದೆ.

Advertisement

More Buzz

Buzz 13 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com