ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಮನಸಾರೆ” ಫೆಬ್ರವರಿ 24ರಿಂದ ಸೋಮವಾರದಿಂದ ಶನಿವಾರ ರಾತ್ರಿ 9ಕ್ಕೆ

Published on

481 Views
Advertisement

ದಿನದಿಂದ ದಿನಕ್ಕೆ ಹೊಸ ಕಥೆಗಳ ಪ್ರಯೋಗ ನಡೆಯುತ್ತಿದ್ದೂ ಪ್ರೇಕ್ಷಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಉದಯ ಟಿವಿಯ ಕಥೆಗಳು ಯಶಸ್ವಿಯಾಗಿವೆ. ವೈವಿಧ್ಯಮಯ ಧಾರವಾಹಿಗಳನ್ನು ಎರಡುವರೆ ದಶಕಗಳಿಂದ ಪ್ರೇಕ್ಷಕರಿಗೆ ಉಣಬಡಿಸುತ್ತಿರುವ ಪ್ರಸಿದ್ಧ ಉದಯ ವಾಹಿನಿಯು ಮತ್ತೊಂದು ವಿಭಿನ್ನ ಕಥೆಯೊಂದಿಗೆ ಜನರ ಮುಂದೆ ಬಂದಿದೆ. ಎಲ್ಲರೂ ಮನಸಾರೆ ಒಪ್ಪಿಕೊಳ್ಳುವ ಧಾರಾವಾಹಿ “ಮನಸಾರೆ” ಫೆಬ್ರವರಿ 24ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

“ಮನಸಾರೆ” ಎಂಬ ಶೀರ್ಷಿಕೆಯಡಿ ಸಂಬಂಧಗಳ ಸುಂದರ ಕಥೆಯನ್ನು ಹೇಳ ಹೊರಟಿದೆ. ಅಪ್ಪನ ಪ್ರೀತಿಗೆ ಹವಣಿಸೋ ಹಿರಿಮಗಳು, ಪ್ರೀತಿಯ ಕಣಜ ಹೊತ್ತು ನಿಂತಿರೋ ಕಿರಿಮಗಳು, ಒಂಭತ್ತು ತಿಂಗಳು ಹೊತ್ತು ಹೆರದಿದ್ದರೂ ಕರುಳಬಳ್ಳಿಯಂತೆ ಕಾಪಾಡೋ ಮಲತಾಯಿ, ಅಕ್ಕ-ತಂಗಿಯರ ಒಡನಾಟ ಈ ಕಥೆಯ ಪ್ರಮುಖಾಂಶ. ವರ್ಷಗಳಿಂದ ತನ್ನ ಕನಸುಗಳ ಕೋಟೆಗೆ ಬಣ್ಣ ತುಂಬಿ ಅಪ್ಪನ ಪ್ರೀತಿಗೆ ಕಾಯ್ತಿರೋ ಹೂಮನಸ್ಸಿನ ಹುಡುಗಿ ಈ ಕಥೆಯ ನಾಯಕಿ. ಎಲ್ಲಾ ಧಾರಾವಾಹಿಗಳಂತೆ ಈ ಮನೆಯಲ್ಲಿ ಯಾವುದೇ ಖಳನಾಯಕಿಯರಿಲ್ಲ. ಯಾವುದೇ ಕಷ್ಟ – ಸವಾಲೆದುರಾದರೂ ಒಟ್ಟಾಗಿ ನಿಂತು ಎದುರಿಸುವ ಮಾದರಿ ಮಹಿಳಾಮಣಿಯರ ಘಟಕ ಈ ಧಾರಾವಾಹಿಯ ಜೀವಾಳ.

ಇನ್ನೂ ಈಗಾಗಲೇ ಉದಯ ಟಿವಿಯಲ್ಲಿ ‘ಅವಳು’ ಧಾರಾವಾಹಿಯನ್ನು ಜನರಿಗರ್ಪಿಸಿ ಮನರಂಜನೆಯ ರಸದೌತಣ ಉಣಬಡಿಸಿರುವ ಧ್ರುವ್ ಮೀಡಿಯಾ ಕ್ರಾಫ್ಟ್ ಸಂಸ್ಥೆಯ ನಿರ್ಮಾಪಕರಾದ ಗುರುರಾಜ್ ಕುಲಕರ್ಣಿ ಮತ್ತೊಮ್ಮೆ ಹೊಸ ಬಗೆಯ ಕಥೆಯ ಪ್ರಯೋಗಕ್ಕೆ ಮುಂದಾಗಿದ್ದಾರೆ. ಕ್ಯಾಮೆರಾ ಕೈ ಚಳಕದಲ್ಲಿ ಗೆದ್ದಿರುವ ರವಿಕಿಶೋರ್ ನಿರ್ದೇಶನ ಮಾಡುತ್ತಿದ್ದು, ಗಿರಿಧರ್ ದಿವಾನ್ ಶೀರ್ಷಿಕೆ ಗೀತೆಯ ಸಂಯೋಜನೆ ಮಾಡಿದ್ದಾರೆ.
ಧಾರಾವಾಹಿಯಲ್ಲಿ ತಾರೆಯರ ಸಮಾಗಮವೇ ಇದೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಚೇರಮನ್, ನಟ, ನಿರ್ದೇಶಕ, ನಿರ್ಮಾಪಕ ಸುನೀಲ್ ಪುರಾಣಿಕ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಿರಿಯ ರಂಗಭೂಮಿ ಕಲಾವಿದೆ ಜಯಲಕ್ಷ್ಮಿ, ನಟಿ ಯಮುನಾ ಶ್ರೀನಿಧಿ, ಮುದ್ದು ಮುಖದ ಸ್ವಾತಿ ವಿವಿಧ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಜೈ ಹನುಮಾನ್ ಧಾರಾವಾಹಿಯಲ್ಲಿ ಮಿಂಚಿದ್ದ ಚೆಲುವೆ ಪ್ರಿಯಾಂಕ ಚಿಂಚೋಳಿ ಕಥೆಯ ನಾಯಕಿಯಾಗಿದ್ದಾರೆ. ತುಂಟ ಹುಡುಗಿಯಾಗಿ ಪ್ರಕೃತಿ ಮತ್ತು ನಾಯಕನಾಗಿ ಸಾಗರ್ ಕಾಣಿಸಿಕೊಳ್ಳಲಿದ್ದಾರೆ. ಖಳನಾಯಕನಾಗಿ ಗುರುತಿಸಿಕೊಂಡಿರುವ ವಿಜಯ್ ಕೌಂಡಿಣ್ಯ ಹಾಗೂ ಕಿರುತೆರೆಯ ರಿಯಲ್ ಜೋಡಿಗಳಲ್ಲಿ ಒಂದಾದ ಸುನೇತ್ರಾ ಪಂಡಿತ್ ಮತ್ತು ರಮೇಶ್ ಪಂಡಿತ್ ಮನಸಾರೆ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿದ್ದಾರೆ.

ಮಗಳನ್ನು ದ್ವೇಷಿಸೋ ಅಪ್ಪ, ಅವನ ಪ್ರೀತಿಗೆ ಮನಸಾರೆ ಕಾಯುತ್ತಿರುವ ಮಗಳ ಕಥೆ “ಮನಸಾರೆ” ನೋಡುಗರ ಮನಸೆಳೆಯಲು ಇದೇ ಫೆಬ್ರವರಿ 24 ರಿಂದ, ಸೋಮವಾರದಿಂದ ಶನಿವಾರ ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com