ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ನಾಯಕಿ”

Published on

655 Views
Advertisement

ನಟಿ “ಹರಿಪ್ರಿಯ” ಈ ಸೀರಿಯಲ್ ಪ್ರಚಾರಕಿ
ಜೂನ್ 17ರಿಂದ ಸೋಮವಾರದಿಂದ ಶುಕ್ರವಾರ ಸಂಜೆ 7ಕ್ಕೆ

ಕನ್ನಡದ ಮನರಂಜನಾ ಕ್ಷೇತ್ರದಲ್ಲಿ ಇಪ್ಪತ್ತೈದು ಯಶಸ್ವಿ ವರ್ಷಗಳನ್ನು ಸದ್ಯದಲ್ಲಿಯೇ ಪೂರೈಸುತ್ತಿರುವ ಉದಯ ಟಿವಿಯು ಅಮೋಘ 25 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ “ನಾಯಕಿ” ಎಂಬ ಹೊಸ ಧಾರಾವಾಹಿಯನ್ನು ವೀಕ್ಷಕರ ಮಡಲಿಗೆ ಹಾಕಲಿದೆ. ಅತ್ತೆ ಸೊಸೆ ಜಗಳದ ಕಥೆ ಅಲ್ಲಾ, ಹೀರೋಗೊಸ್ಕರ ಅಳೊ ಹೀರೋಯಿನ್ ಕಥೆ ಅಲ್ಲಾ, ಹೀರೋಯಿನ್‍ಗೆ ಕಷ್ಟ ಕೊಡೋ ಕಥೆ ಖಂಡಿತಾ ಅಲ್ಲಾ, ಇದು ಒಬ್ಬ ದಿಟ್ಟ ಹುಡುಗಿಯ ಕಥೆ “ನಾಯಕಿ” ಇದೇ ಜೂನ್ 17ರಿಂದ ಸೋನವಾರದಿಂದ ಶುಕ್ರವಾರದವರೆಗೆ ಸಂಜೆ 7ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಈ ನಾಯಕಿ ಕಷ್ಟಗಳನ್ನು ಕೇವಲ ಎದರಿಸುವುದಲ್ಲ, ಹೆದರಿಸುವ ದಿಟ್ಟೆ. ಸೌಂದರ್ಯ ಎಂಬ ಬಡ ಹುಡುಗಿ ತನ್ನ ಕುಡುಕ ಅಪ್ಪನನ್ನ ಸಾಕಲು ಮತ್ತು ತಮ್ಮನನ್ನು ಓದಿಸಲು ಪಡುವ ಕಷ್ಟಗಳ ಸುತ್ತ ಹೆಣೆದ ಕಥೆ. ಆದರೆ ನಾಯಕಿ ಮೂಲತಃ ಶ್ರೀಮಂತ ಕುಟುಂಬದವಳಾಗಿರುತ್ತಾಳೆ.

Advertisement

ಸೂರ್ಯವರ್ಧನ್ ಎಂಬುವನು ಹಣಕ್ಕಾಗಿ ಆಕೆಯ ಹೆತ್ತವರನ್ನ ಕೊಂದು ಅವರ ಸ್ವತ್ತನ್ನು ತನ್ನದಾಗಿಸಿಕೊಂಡಿರುತ್ತಾನೆ. ಆದರೆ ಈ ವಿಷಯ ನಾಯಕಿ ಸೌಂದರ್ಯಳಿಗೆ ತಿಳಿದಿರುವುದಿಲ್ಲ. ವಿಚಿತ್ರವೆಂದರೆ ಸೌಂದರ್ಯ ಆತನ ಕಂಪನಿಯಲ್ಲಿಯೇ ಕೆಲಸ ಮಾಡುತ್ತಿರುತ್ತಾಳೆ. ಸೂರ್ಯವರ್ಧನನಿಗೆ ತಾನು ಆಳುತ್ತಿರುವ ಆಸ್ತಿಯ ಒಡತಿ ಜೀವಂತವಾಗಿರುವ ವಿಷಯ ತಿಳಿದು, ಅವಳನ್ನು ಹುಡುಕಿ ಸಾಯಿಸಲು ಹೊಂಚು ಹಾಕಿರುತ್ತಾನೆ. ಇತ್ತ ಅದೇ ಸಮಯಕ್ಕೆ ಸೌಂದರ್ಯಳಿಗೆ ಸೂರ್ಯವರ್ಧನ್ ಮಗ ಸಿದ್ಧಾರ್ಥ್ ನ ಮೇಲೆ ಪ್ರೀತಿ ಚಿಗುರಿರುತ್ತದೆ. ಸೂರ್ಯವರ್ಧನನಿಗೆ ತಾನು ಹುಡುಕುತ್ತಿರುವುದು ಸೌಂದರ್ಯ ಎಂದು ತಿಳಿಯುತ್ತಾ? ಸಿದ್ಧಾರ್ಥನಿಗೆ ತನ್ನ ಅಪ್ಪನ ನಿಜ ಮುಖ ಗೊತ್ತಾಗುತ್ತಾ? ಸೌಂದರ್ಯಾಳಿಗೆ ತನ್ನ ಹುಟ್ಟು ರಹಸ್ಯ ತಿಳಿಯುತ್ತಾ? ಎಂಬ ಕುತೂಹಲವನ್ನು ಇಟ್ಟುಕೊಂಡು ಬರುತ್ತಿರುವ ಧಾರಾವಾಹಿ “ನಾಯಕಿ”
ಕನ್ನಡ ಚಿತ್ರರಂಗದ ಹೆಸರಾಂತ ನಟಿ, ಕಿರುತೆರೆಯ ಪಾಪ್ಯುಲರ್ ಅತ್ತೆ ಹೇಮಾ ಚೌಧÀರಿ ಕಿರುತೆರೆಗೆ ಮತ್ತೆ ಮರಳಿ ಬರುತ್ತಿದ್ದಾರೆ ಬಡ್ಡಿ ಎಣಿಸೋ ಬಂಗಾರಮ್ಮನಾಗಿ, “ನಾಯಕಿ” ಧಾರಾವಾಹಿಯ ಮೂಲಕ.

Advertisement

ಇನ್ನು ಉದಯ ಟಿವಿಯ “ಅವಳು” ಧಾರಾವಾಹಿಯಲ್ಲಿ ಪಾತ್ರ ಮಾಡಿದ್ದ ಕಾವ್ಯ ನಾಯಕಿಯಲ್ಲಿ ಸೌಂದರ್ಯಳಾಗಿ ನಟಿಸುತ್ತಿದ್ದಾರೆ. ದೇಶದ ಮೇಲೆ ಪ್ರೀತಿ ಮತ್ತು ಮಾನವೀಯತೆಯ ಮೇಲೆ ಅತಿಯಾದ ನಂಬಿಕೆ ಇಟ್ಟು ಸಾಮಾಜಿಕ ಸೇವೆ ಮಾಡುತ್ತಿರುವ ಯುವಕ ಸಿದ್ಧಾರ್ಥ. ಹುಟ್ಟಲ್ಲಿ ಶ್ರೀಮಂತಿಕೆ ಇದ್ರು, ಎಲ್ಲರೂ ಸಮಾನರು ಎಂದು ಭಾವಿಸಿ ಅನ್ಯಾಯಕ್ಕೆ ಧ್ವನಿ ಏರಿಸಿ ಅದಕ್ಕೆ ಪರಿಹಾರ ಹುಡುಕುವ ಪಾತ್ರ ಈತನದು. ಇಂಥಹ ಸಿದ್ಧಾರ್ಥನ ಪಾತ್ರದಲ್ಲಿ ಕಿರುತರೆಯ ಖ್ಯಾತ ನಟ ದೀಪಕ್ ಕಾಣಿಸಿಕೊಳ್ಳಲಿದ್ದಾರೆ.

Advertisement

ಕನ್ನಡ ಚಿತ್ರರಂಗದ ಹೆಸರುವಾಸಿಯಾದ ನಟಿ ಹರಿಪ್ರೀಯ ಬ್ಯೂಸಿ ಶೆಡ್ಯೂಲ್‍ನಲ್ಲೂ “ನಾಯಕಿ” ಕಥೆಯನ್ನು ಕೇಳಿ ಸಂತಸದಿಂದ ಮೊದಲಬಾರಿಗೆ ಈ ಧಾರಾವಾಹಿಯ ಪ್ರಚಾರಕ್ಕೆ ಬಂದಿದ್ದಾರೆ. ಇವರು ಈ ಧಾರಾವಾಹಿಯ ಕೆಲವು ಪ್ರೋಮೋಗಲಲ್ಲಿ ಅಭಿನಯಿಸಿ ಮತ್ತು “ನಾಯಕಿ” ಧಾರಾವಾಹಿಯ ಪ್ರಚಾರಕ್ಕಾಗಿ ಉದಯ ಟಿವಿಯ ಜೊತೆ ಕೈ ಜೋಡಿಸಿದ್ದಾರೆ.

Advertisement

“ನಾಯಕಿ” ಧಾರಾವಾಹಿಯ ಶ್ರೀ ಅನಘ ಕ್ರಿಯೇಷನ್ ಅಡಿಯಲ್ಲಿ ತಯಾರಾಗುತ್ತಿದ್ದು, ಶಶಿಧರ್ ಕೆ. ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸಚಿನ್ ಕ್ಯಾಮರಾ ಹಿಡಿಯುತ್ತಿದ್ದರೆ, ಕಲಾ ನಿರ್ದೇಶಕರಾಗಿ ಸತೀಶ್ ನಿರ್ವಹಿಸುತ್ತಿದ್ದಾರೆ. ವಿಶ್ವನಾಥ ಈ ಧಾರಾವಾಹಿಗೆ ಸಂಕಲನಕಾರರಾಗಿದ್ದಾರೆ.
ಕ್ಷಣ ಕ್ಷಣಕ್ಕೂ ರೋಚಕ ತಿರುವುಗಳು, ಪಂಚ್ ಕೊಡೋ ಸಂಭಾಷಣೆ, ಸಸ್ಪೆನ್ಸ್ ತುಂಬಿದ ಕಥೆ “ನಾಯಕಿ”, ಜೂನ್ 17 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com