ಹೊಸ ವರ್ಷದಲ್ಲಿ ಕರುನಾಡ ಮನೆಗಳಲ್ಲಿ “ಅಮ್ನೋರು” ಆಗಮನ

Published on

456 Views
Advertisement

ಉದಯ ಟಿವಿಯಲ್ಲಿ ಹೊಸ ಧಾರಾವಾಹಿ
ಜನವರಿ 20ರಿಂದ ಸೋಮವಾರದಿಂದ ಶನಿವಾರ ರಾತ್ರಿ 7ಕ್ಕೆ

ಉದಯ ಟಿವಿ ದಿನದಿಂದ ದಿನಕ್ಕೆ ಹೊಸ ಕಥಾನಕಗಳಿಂದ ಜನರಮನಸ್ಸನ್ನು ಗೆಲ್ಲಲು ಹೊಸ ಪ್ರಯತ್ನಗಳನ್ನು ನಿಮ್ಮ ಮುಂದೆ ಹೊತ್ತು ತರುತ್ತಿದೆ. ಪುಟಾಣಿ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಜನರಿಗೆ ಹತ್ತಿರವಾಗುವ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಿಂದ ಕೌತುಕಗಳ ಜೊತೆ ಸೃಜನಾತ್ಮಕ ಥೀಮ್‍ಗಳಿಂದ ವೀಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದೆ. ಜನಪ್ರಿಯ ಧಾರಾವಾಹಿಗಳಾದ ನಂದಿನಿ, ನಾನು ನನ್ನ ಕನಸು, ಕಸ್ತೂರಿ ನಿವಾಸ, ಸೇವಂತಿ, ನಾಯಕಿ, ಜೀವನದಿ, ಕಾವೇರಿ ಧಾರವಾಹಿಗಳಿಂದ ಪ್ರೇಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಇದೀಗ ದೇವಿಯ ಮಹಾತ್ಮೆ ಸಾರಿ, ಜನರ ಮನಗೆಲ್ಲಲು ತಯಾರಾಗಿರುವ ಹೊಸ ಸೂಪರ್ ನ್ಯಾಚುರಲ್ ಧಾರಾವಾಹಿಯೇ ‘ಅಮ್ನೋರು’.

Advertisement

ಹೊಸ ವರುಷಕ್ಕೆ ಹೊಸ ಹುರುಪಿನಿಂದ ಫ್ರೇಮ್ಸ್ ನಿರ್ಮಾಣ ಸಂಸ್ಥೆ ‘ಅಮ್ನೋರು’ ಎಂಬ ಶೀರ್ಷಿಕೆಯನ್ನು ಹೊತ್ತು ದೈವ ಮತ್ತು ದುಷ್ಟ ಶಕ್ತಿಯಾಧಾರಿತ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಜ್ಜಾಗಿದೆ.
ಈ ಕಥೆಯು ಅಮ್ನೋರ ಪರಮಭಕ್ತರಾದ ಶಂಕರ ಹಾಗೂ ದಾಕ್ಷಾಯಣಿ ಹಿಂದಿನ ಜನ್ಮದಲ್ಲಿ ಅಮ್ನೋರ ವಿಗ್ರಹ ಮತ್ತು ರುದ್ರಾಕ್ಷಿಯನ್ನು ದುಷ್ಟರಿಂದ ಕಾಪಾಡುವ ಸಲುವಾಗಿ, ಮಾಟಗಾತಿ ಧನಶೇಖರಿ ಮತ್ತು ಶಂಕರನ ಸಹೋದರ ವರದಪ್ಪನಿಂದಲೇ ಪ್ರಾಣವನ್ನು ಕಳೆದುಕೊಂಡಿರುವ ದಂಪತಿಗಳು. ರುದ್ರ ಎನ್ನುವ ಆತ್ಮ 27 ವರ್ಷಗಳಿಂದ ಕೊಳದಲ್ಲಿರುವ ರುದ್ರಾಕ್ಷಿಮಾಲೆ ಮತ್ತು ಅಮ್ನೋರ ವಿಗ್ರಹವನ್ನು ಕಾಪಾಡುತ್ತಾ, ಮತ್ತೆ ಪುನರ್ಜನ್ಮ ಪಡೆದುಕೊಂಡು ಬರುವ ಜೋಡಿಗಾಗಿ ಕಾಯುತ್ತಿರುತ್ತದೆ. ಘೋರ ಮಾಟಗಾತಿ ಧನಶೇಖರಿ ವರದಪ್ಪನ ಜೊತೆ ಸೇರಿ ರುದ್ರಾಕ್ಷಿ ಮಾಲೆ ಹಾಗೂ ಅಮ್ನೋರ ವಿಗ್ರಹವನ್ನು ತನ್ನದಾಗಿಸಿಕೊಳ್ಳಲು ಸಂಚು ರೂಪಿಸಿಕೊಳ್ಳುತ್ತಿರುವರು.
ಶಂಕರ ಹಾಗೂ ದಾಕ್ಷಾಯಣಿ ಅಮ್ನೋರ ವಿಗ್ರಹವನ್ನು ಪ್ರತಿμÁ್ಟಪಿಸಲು ಪುನಃ ಹುಟ್ಟಿ ಬರುತ್ತಾರಾ? 27 ವರ್ಷ–ಕಾಯುತ್ತಿರುವ ರುದ್ರಾಳ ಆಸೆಯು ನೆರವೇರುತ್ತಾ? ತದ್ವಿರುದ್ಧ ಆಲೋಚನೆಗಳನ್ನು ಹೊಂದಿರುವ ನಾಯಕ ಮತ್ತು ನಾಯಕಿ ಜೊತೆಯಾಗಿ ದೇವಸ್ಥಾನ ಪುನಃಶ್ಚೇತನಗೊಳಿಸುತ್ತಾರ? ಅನ್ನೋದೆ ಈ ಕಥೆಯ ತಿರುಳಾಗಿದೆ.

ಈ ಧಾರಾವಾಹಿಯು ಮೇಲುಕೋಟೆ ಹಾಗೂ ಇನ್ನಿತರ ಸುತ್ತಮುತ್ತಲಿನ ಪ್ರಸಿದ್ಧ ಸ್ಥಳಗಳಲ್ಲಿ ಹಾಗೂ ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಹೊಸ ಬಗೆಯ ಅಉ ಮತ್ತು ತಂತ್ರಜ್ಞಾನ ಈ ಧಾರಾವಾಹಿಯಲ್ಲಿ ಪ್ರೇಕ್ಷಕರು ಕಣ್ತುಂಬಿಕೊಳ್ಳಬಹುದಾಗಿದೆ.
ಹಲವಾರು ಖ್ಯಾತ ದೇವಿ ಮಹಾತ್ಮೆ ಸಾರುವ ಧಾರಾವಾಹಿಗಳನ್ನು ನೀಡಿರುವ ರಮೇಶ್ ಇಂದ್ರ ನಿರ್ಮಾಣ ಮತ್ತು ನಿರ್ದೇಶನ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸೀಲಿಯನ್ ಕಥೆಗೆ ತಕ್ಕಂತೆ ಸಂಗೀತ ಸಂಯೋಜನೆ ಮಾಡಿದ್ದಾರೆ. ದಯಾಕರ್ ಛಾಯಾಗ್ರಹಣದಲ್ಲಿ ತಮ್ಮ ಕೈ ಚಳಕವನ್ನು ತೋರಿಸಿದ್ದಾರೆ. ನಾಯಕಿಯಾಗಿ ಹೊಸ ಪ್ರತಿಭೆ ಅಕ್ಷರ ನಟಿಸುತ್ತಿದ್ದು, ನಾಯಕನಾಗಿ ಶಶಿ ನಟಿಸುತ್ತಿದ್ದಾರೆ. ಕನ್ನಡ ಚಲನಚಿತ್ರರಂಗದ ಖ್ಯಾತ ಖಳನಾಯಕರಾದ ಕೀರ್ತಿರಾಜ್ ತಮ್ಮ ವಿಭಿನ್ನ ಪಾತ್ರದಿಂದ ಜನರ ಮನಸ್ಸಲ್ಲಿ ನೆಲೆಸುವುದರಲ್ಲಿ ಸಂಶಯವೇ ಇಲ್ಲ.

ರೇಖಾ ರಾವ್, ಹರ್ಷಿತಾ, ಸಂಗೀತ ಭಟ್, ಅನಂತ್ ವೇಲು, ಶರ್ಮಿಳಾ, ಮಧು ಹೆಗಡೆ, ರೋಹಿಣಿ, ವಿಜಯಲಕ್ಷ್ಮಿ, ವಿಕ್ರಮ್ ಹೀಗೆ ಹಲವಾರು ಕಲಾವಿದರನ್ನು ಒಳಗೊಂಡ ಧಾರಾವಾಹಿ ಅಮ್ನೋರು.
ಸುಂದರವಾಗಿ ಚಿತ್ರಿಸಲಾದ “ಅಮ್ನೋರು” ಧಾರಾವಾಹಿಯು ನೋಡುಗರ ಮನಸೆಳೆದು ಮನರಂಜಿಸುವುದಕ್ಕೆ ಇದೇ ಜನವರಿ 20 ರಿಂದ, ಸೋಮವಾರದಿಂದ ಶನಿವಾರ ರಾತ್ರಿ 7 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com