ರೆಬೆಲ್ ಸ್ಟಾರ್ ಜೀವನ ಚಿತ್ರಣ

Published on

2263 Views
Advertisement

ರೆಬೆಲ್ ಸ್ಟಾರ್ ಜೀವನ ಚಿತ್ರಣ

Advertisement

ಬೆಂಗಳೂರು: ಸ್ಯಾಂಡಲ್ ವುಡ್ ನ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಹುಚ್ಚೇಗೌಡ ಅಮರನಾಥ್ (ಅಂಬರೀಶ್) ಅವರು ಭಾರತೀಯ ಚಿತ್ರರಂಗದ ನಟರು ಹಾಗೂ ರಾಜಕಾರಣಿಯು ಆಗಿದ್ದರು. ಇವರು ಜನಿಸಿದ್ದು 29 ಮೇ 1952 ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಇವರ ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ.  ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಅಂಬರೀಶ್ 1991 ರಲ್ಲಿ ಕನ್ನಡದಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.

1972 ರಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಅಂಬರೀಶ್ ಅವರನ್ನು ಗುರುತಿಸಿ ಕನ್ನಡ ಚಿತ್ರ ರಂಗಕ್ಕೆ ಕರೆತಂದರು. ಇವರು ಮೊಟ್ಟ ಮೊದಲ ಚಿತ್ರವಾದ “ನಾಗರಾಹಾವು” ಸಿನಿಮಾದಲ್ಲಿ ಖಳ ನಾಯಕನ ಪಾತ್ರಕ್ಕೆ ಬಣ್ಣ ಹಚ್ವುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು.

Advertisement

ಪಡುವಾರಳ್ಳಿ ಪಾಂಡವರು, ಮಸಣದ ಹೂವು, ಶುಭಮಂಗಳ, ರಂಗನಾಯಕಿ ಹೀಗೆ ನೂರಾರು ಕನ್ನಡ ಚಿತ್ರಗಳಲ್ಲಿ ನಾಯಕನ ನಟಿಸಿ ಅಭಿಮಾನಿಗಳ ಪಾಲಿಗೆ ರೆಬೆಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಕನ್ನಡ ಚಿತ್ರ ರಂಗದ ರೆಬೆಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ಅಂಬರೀಶ್ ಅವರಿಗೆ ಮಂಡ್ಯದ ಗಂಡು, ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಹೀಗೆ ಹತ್ತು ಹಲವು ಬಿರುದುಗಳನ್ನು ಪಡೆದು ಕನ್ನಡ ಚಿತ್ರ ರಂಗದಲ್ಲಿ ಮಿಂಚಿದ್ದರು.

ಕನ್ನಡ ಸಿನಿಮಾರಂಗದಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Advertisement

ಅಂಬರೀಶ್ ಅವರ ರಾಜಕೀಯ ಕ್ಷೇತ್ರ
ಕನ್ನಡ ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡು ರಾಜಕೀಯ ರಂಗವನ್ನು ಪ್ರವೇಶ ಮಾಡಿದರು. ಇವರು ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ್ದ ಅಭಿಮಾನಿಗಳನ್ನು ರಾಜಕೀಯ ಕ್ಷೇತ್ರದಲ್ಲೂ ಸಹ ಅಭಿಮಾನಿಗಳನ್ನು ಹೊಂದಿದ್ದರು.
ಅಂಬರೀಶ್ ಅವರು ಸಂಸದರು, ಕೇಂದ್ರ , ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
೨೦೧೮ ವಿಧಾಸಭೆ ಚುನಾವಣಾಯಲ್ಲಿ ಪಕ್ಷ ಟಿಕೆಟ್ ನೀಡಿದರು ಕಣದಿಂದ ಹಿಂದೆ ಸರಿದಿದ್ದರು.

* 1998-99: 12ನೇ ಲೋಕಸಭಾ ಸದಸ್ಯರು.
* 1999-04: 13ನೇ ಲೋಕಸಭಾ ಸದಸ್ಯರು.
* 2004-09: 14ನೇ ಲೋಕಸಭಾ ಸದಸ್ಯರು.
* 2006-08: ಕರ್ನಾಟಕ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರು.
* 2008 ರಲ್ಲಿ ಕಾವೇರಿ ನೀರಿನ ವಿವಾದದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
* 2012: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು.
* 2013 ರ ಚುನಾವಣೆಯಲ್ಲಿ ಗೆದ್ದು ಕರ್ನಾಟಕ ರಾಜ್ಯ ವಸತಿ ಸಚಿವರಾಗಿದ್ದರು.


ಇವರಿಗೆ ಲಭಿಸಿದ ಪ್ರಶಸ್ತಿಗಳು:

* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ನಟ – 1982.
* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ಸಹಾಯ ನಟ – ಮಸಣದ ಹೂವು(1985-86)
* ಫಿಲ್ಮ್ ಫೇರ್ ಪ್ರಶಸ್ತಿ – ಅತ್ಯುತ್ತಮ ನಟ – ಒಲವಿನ ಉಡುಗೊರೆ.
* ಎನ್.ಟಿ.ಆರ್ ನ್ಯಾಷನಲ್ ಪ್ರಶಸ್ತಿ – 2005.
* ಜೀವಮಾನ ಫಿಲ್ಮ್ ಫೇರ್ ಪ್ರಶಸ್ತಿ – 2009.
* ನಂದಿ ಪ್ರಶಸ್ತಿ( ಆಂದ್ರಸರ್ಕಾರ) – 2009.
* ಟಿವಿ9 ಸ್ಯಾಂಡಲ್ ವುಡ್ ಸ್ಟಾರ್ ಪ್ರಶಸ್ತಿ – 2012.
* ವಿಷ್ಣುವರ್ದನ್ ಪ್ರಶಸ್ತಿ (ಕರ್ನಾಟಕ ಸರ್ಕಾರ) – 2011.
* ಗೌರವ ಡಾಕ್ಟರೇಟ್ ಕರ್ನಾಟಕ ವಿವಿ) – 2013.
ಅಪಾರ ಸಾಧನೆ ಮಾಡಿ ಕನ್ನಡದ ಚಿತ್ರರಂಗದ ಹಿರಿಮೆಗೆ ಕಾರಣರಾದ ಅಂಬಿ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ ನಾವಿಕನಿಲ್ಲದ ದೋಣಿಯಂತಾಗಿದೆ.

Advertisement

More Buzz

Buzz 15 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com