ಚಿತ್ರರಂಗವನ್ನಗಲಿದ ಖ್ಯಾತ ನಿರ್ದೇಶಕ:‌ ಮತ್ತೆ ಶೋಕಸಾಗರದಲ್ಲಿ ಕನ್ನಡ ಚಿತ್ರರಂಗ

Published on

505 Views

ಎಂತಹ ಕಾಲವನ್ನು ಕಾಣುತ್ತಿದ್ದೇವೆ. ಕನ್ನಡ ಚಿತ್ರರಂಗ ಕಳೆದ ಎರಡು ಮೂರು ವರ್ಷಗಳಿಂದ ದಿಗ್ಗಜರನ್ನೇ ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದೆ. ಕೋವಿಡ್ ಕಾರಣದಿಂದ ಕೆಲವರಾದರೆ, ಇನ್ನು ಕೆಲವರು ಅನಿರೀಕ್ಷಿತ-ಅಸಹಜವೋ ಎನ್ನುವಂತೆ ರಾಜ್ಯಕ್ಕೆ ರಾಜ್ಯವೇ ಶೋಕಿಸುವಂತೆ ಅಗಲಿದ್ದಂತೂ ಸುಳ್ಳಲ್ಲ.

ಆ ನೋವುಗಳು ಆರದಂತೆಯೇ ಕನ್ನಡ ಚಿತ್ರರಂಗ ಮತ್ತೊಬ್ಬ ಸ್ಟಾರ್ ನಿರ್ದೇಶಕನನ್ನು ಕಳೆದುಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ನಾಲ್ಕು ದಶಕಗಳ ಕಾಲ ನಿರ್ದೇಶಕ, ನಟ, ನಿರ್ಮಾಪಕ ಮತ್ತು ಡಬ್ಬಿಂಗ್ ಕಲಾವಿದರಾಗಿಯೂ ಸೇವೆ ಸಲ್ಲಿಸಿದ ಕಟ್ಟೆ ರಾಮಚಂದ್ರ, ತನ್ನ ಪತ್ನಿವಿಯೋಗದ 5 ದಿನಗಳ ನಂತರ, ಇಹಲೋಕ ತ್ಯಜಿಸಿದ್ದಾರೆ.

75 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ವಿಶ್ರಾಂತಿ ಪಡೆಯುತ್ತಿದ್ದರು.

ಡಾ.ವಿಷ್ಣುವರ್ಧನ್ ನಟನೆಯ. ವೈಶಾಖದ ದಿನಗಳು ಹಿಟ್ ಚಿತ್ರವನ್ನು ನಿರ್ದೇಶಿಸಿದ್ದ ರಾಮಚಂದ್ರ ಅವರು, ಮಹಾಲಕ್ಷ್ಮಿ, ಅರಿವು ಮುಂತಾದ ಚಿತ್ರಗಳನ್ನು, ಸಮರ್ಥವಾಗಿ ನಿರ್ದೇಶಿಸಿದ್ದರು.

ಕೇವಲ ನಿರ್ದೇಶಕರಾಗಿ ಅಷ್ಟೇ ಅಲ್ಲದೆ, ‌ನಿರ್ಮಾಪಕರಾಗಿಯೂ ಕಟ್ಟೆ ರಾಮಚಂದ್ರ ಅವರ ಕೊಡುಗೆ ಅಮೋಘ. ಪನಿಯಮ್ಮ ಚಿತ್ರದಲ್ಲಿ ನಿರ್ಮಾಣ ವ್ಯವಸ್ಥಾಪಕರಾಗಿ ಕೆಲಸ ಮಾಡಿದ್ದ ರಾಮಚಂದ್ರ ಅವರು ಅಲೆಗಳು, ಮನೆ ಮನೆ ಕಥೆ ಧಾರಾವಾಹಿಗಳಿಗೆ ನಿರ್ಮಾಪಕರಾಗಿದ್ದರು.

ಪರಭಾಷೆಗಳಲ್ಲೂ ಕಮಾಲ್ ಮಾಡುತ್ತಿರುವ ʼಕಥೆಯೊಂದು ಶುರುವಾಗಿದೆʼ ಖ್ಯಾತಿಯ ಕನ್ನಡ ನಿರ್ದೇಶಕ ಸೆನ್ನಾ ಹೆಗ್ಡೆ

ನಟರಾಗಿ ಬಣ್ಣ ಹಚ್ಚಿದ್ದ ಇವರು, ಗನ್, ಬಿಂಬ, ಕಾಡಿನ ಬೆಂಕಿ, ಬ್ಯಾಂಕರ್ ಮಾರ್ಗಯ್ಯ, ಅಂತರಾಳ, ಪ್ರೇಮ ಮತ್ಸರ, ಗ್ರಹಣ, ನಮ್ಮಮ್ಮ ತಾಯಿ ಅಣ್ಣಮ್ಮ, ಒಂದು ಪ್ರೇಮದ ಕಥೆ, ತಬ್ಬಲಿಯು ನೀನಾದೆ ಮಗನೆ ಮುಂತಾದ ಚಿತ್ರಗಳಲ್ಲಿ ನಟನಾ ಕೌಶಲ್ಯವನ್ನು ಪ್ರದರ್ಶಿಸಿದ್ದರು.

ಮಾರ್ಚ್ 3 ರಿಂದ ಆರಂಭವಾಗಲಿದೆ 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಕಟ್ಟೆ ರಾಮಚಂದ್ರ ಒಬ್ಬ ಸವ್ಯಸಾಚಿ ಕಲಾವಿದ ಎನ್ನುವುದಕ್ಕೆ ಅವರ ಸರ್ವಾಂಗೀಣ ಪ್ರತಿಭೆಗಳೇ ಸಾಕ್ಷಿ. ಹುಲಿಯ ‍ಚಿತ್ರಕ್ಕೆ ವಸ್ತ್ರಾಲಂಕಾರ ಕಲಾವಿದರಾಗಿದ್ದ ಇವರು ಒಬ್ಬ ಅತ್ಯುತ್ತಮ ಕಂಠದಾನ ಕಲಾವಿದರಾಗಿದ್ದರು. ಗೀಜಗನ‌ ಗೂಡು, ಚೋಮನ ದುಡಿ, ಘಟಶ್ರಾದ್ಧ ಮುಂತಾದ ಚಿತ್ರಗಳಿಗೆ ಡಬ್ಬಿಂಗ್ ಆರ್ಟಿಸ್ಟ್ ಆಗಿ ದುಡಿದಿದ್ದ ಇವರು, ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದರು ಎನ್ನುವುದು ಕನ್ನಡ ಚಿತ್ರರಂಗಕ್ಕೇ ಹೆಮ್ಮೆಯ ವಿಚಾರ.

ಇಂತಹ ಪರಿಪೂರ್ಣ ಕಲಾವಿದನ ಅಗಲುವಿಕೆಯು ಕನ್ನಡ ಚಿತ್ರರಂಗವನ್ನು ನೋವಿನ ಸಾಗರದಲ್ಲಿ ಮುಳುಗಿಸಿದ್ದು, ಖ್ಯಾತ ನಟರು, ನಿರ್ದೇಶಕರು, ನಿರ್ಮಾಪಕರು ಈ ಹಿರಿಯ ಕಲಾವಿದರ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ.

ಇಂತಹ ಹಿರಿಯ ದಿಗ್ಗಜ ಕಲಾವಿದರ ನೆನಪು ಕನ್ನಡ ಚಿತ್ರರಂಗದಲ್ಲಿ ಚಿರವಾಗಿರಲಿ, ಅಗಲಿದ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸೋಣ.

More Buzz

Buzz 5 days ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com