Sada Nimmondige and Sawalige sai Reality show in Udaya Tv

Published on

370 Views

ಉದಯ ಟಿವಿಯಲ್ಲಿ ಡಬಲ್ ಧಮಾಕಾ
ಜುಲೈ 14ರಿಂದ “ಸವಾಲ್ ಗೆ ಸೈ” 15 ರಿಂದ “ಸದಾ ನಿಮ್ಮೋಂದಿಗೆ”
ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ

25ನೇ ವರ್ಷದಲ್ಲಿ ಕಾಲಿಟ್ಟ ಉದಯ ಟಿವಿ ಕರುನಾಡ ಜನತೆಯ ಹೆಮ್ಮೆಯ ಚಾನಲ್. ಮನಸೂರೆಗೋಂಡ ಧಾರಾವಾಹಿಗಳನ್ನು ಮತ್ತು ಮನ ಮೆಚ್ಚುವ ರಿಯಾಲಿಟಿ ಶೋಗಳನ್ನು ಅಂದಿನಿಂದ ಇಂದಿನ ವರೆಗೆ ವೀಕ್ಷಕರ ಮಡಿಲಲ್ಲಿ ಹಾಕಿ ಸೈ ಎನಿಸಿಕೊಂಡ ಏಕೈಕ ಕನ್ನಡದ ಮೊದಲ ವಾಹಿನಿ ಎಂದು ಹೇಳಬಹುದು.
ಇತ್ತಿಚಗಷ್ಟೆ “ಮಾಯಾ” ಎಂಬ ವಿಭಿನ್ನ ರೀತಿಯ ಧಾರಾವಾಹಿಯನ್ನು ಬಿತ್ತರಿಸಿದ ಬೆನ್ನ ಹಿಂದೆ ಈಗ ಅಧ್ಬುತ ಕಾನ್ಸೆಪ್ಟ್‍ನೊಂದಿಗೆ ಎರಡು ರೀಯಾಲಿಟಿ ಶೋವನ್ನು ವೀಕ್ಷಕರ ಮಡಲಿಗೆ ಹಾಕಲು ನಿರ್ಧರಿಸಿದೆ. ಎರಡೂ ಕೂಡಾ ಸೆಲೆಬ್ರಿಟಿಗಳಿಂದ ಕೂಡಿದ ಕಾರ್ಯಕ್ರಮವಾದರೂ ಒಂದು ಶೋ ಸೆಲಬ್ರಿಟಿಗಳಿಂದ ಮನರಂಜನೆ ಕೊಡುವ ಶೋ ಆದರೆ ಮತ್ತೊಂದು ಸೆಲಬ್ರಿಟಿಗಳಿಂದ ಸಮಾಜ ಕಳಕಳಿಯನ್ನು ಇಟ್ಟುಕೊಂಡ ಕಾರ್ಯಕ್ರಮ. ಇದೇ ಜುಲೈ 14ಕ್ಕೆ(ಶನಿವಾರ)”ಸವಾಲ್ ಗೆ ಸೈ” ಮತ್ತು 15ಕ್ಕೆ(ಭಾನುವಾರ)”ಸದಾ ನಿಮ್ಮೊಂದಿಗೆ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

ಸೆಲಬ್ರಿಟಿಗಳಿಂದ ಪಕ್ಕಾ ಮನರಂಜನೆಯ ಶೋ “ಸವಾಲ್‍ಗೆ ಸೈ”
ಇದೇ ಶನಿವಾರದಿಂದ ರಾತ್ರಿ 9ಕ್ಕೆ

ಮನರಂಜನೆಯೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸವಾಲು ಜವಾಬುಗಳ ಜುಗಲ್ಬಂದಿಯಾಗಿ ತೆರೆಯಮೇಲೆ ಇದೊಂದು ಹೊಸ ರೀತಿಯ, ವಿನೂತನ ರಿಯಾಲಿಟಿ ಶೋ ಆಗಿ ಮೂಡಿಬರಲಿದೆ. ಸವಾಲ್ ಗೆ ಸೈ ಕಾರ್ಯಕ್ರಮದಲ್ಲಿ ಹಿರಿತೆರೆ ಮತ್ತು ಕಿರುತೆರೆಯ ತಾರೆಯರ ದಂಡು ಭಾಗವಹಿಸಲಿದ್ದಾರೆ.
ಆಟದಲ್ಲಿ ಎರಡು ತಂಡವಿದ್ದು, ಪ್ರತಿ ತಂಡದಿಂದ ನಾಲ್ಕು ಜನ ಸ್ಪರ್ಧಿಸುತ್ತಾರೆ. ಸವಾಲುಗಳಿಗೆ ಜವಾಬು ಕೊಡಲು ತಾರೆಯರ ಪರದಾಟ, ಸೆಣೆಸಾಟ, ಜೊತೆಗೆ ಒಂದಿಷ್ಟು ಹುಡುಗಾಟವನ್ನೂ ನಾವು ನೋಡಬಹುದು. ಜವಾಬು ನೀಡಲಾಗದಿದ್ದರೆ ಅನಿರೀಕ್ಷಿತವಾದರೂ ಮಜ ನೀಡುವಂತ ಸಜೆಗಳನ್ನು ನೀಡಲಾಗುವುದು. ಗೆಲುವು ಸೋಲಿಗಿಂತ ಇಲ್ಲಿ ಕೊಡುವ ಕ್ರಿಯಾಶೀಲ ಸವಾಲುಗಳನ್ನು ಎದುರಿಸಲು ತಾರೆಯರು ಬರುತ್ತಿರುವುದು ಒಂದು ವಿಶೇಷ. ಹಿರಿಯರಿಂದ ಕಿರಿಯರವರೆಗೂ ಮನೆಮಂದಿಯೆಲ್ಲಾ ಕೂತು ನೋಡುವಂತ ಶೋ “ಸವಾಲ್ ಗೆ ಸೈ”.
ಹಿರಿತೆರೆ ಮತ್ತು ಕಿರುತೆರೆ, ಎರಡರಲ್ಲೂ ತನ್ನ ನಟನೆಯಿಂದ ಮನೆಮಾತಾಗಿರೋ ನಿತ್ಯ ರಾಂ, ಇದೇ ಮೊದಲ ಬಾರಿಗೆ “ಸಾವಲ್ ಗೆ ಸೈ” ಕಾರ್ಯಕ್ರಮದಿಂದ ನಿರೂಪಕಿಯಾಗಲಿದ್ದಾರೆ. ಜೊತೆಗೆ ತನ್ನ ಮಾತಿನಿಂದಲೇ ನಗುವಿನ ಹೊಳೆ ಹರಿಸುವ ನಿರಂಜನ್ ದೇಶಪಾಂಡೆ ಸಹ ನಿರೂಪಕನಾಗಿ ಕಾರ್ಯ ವಹಿಸಲಿದ್ದಾರೆ.
ವಾರಾಂತ್ಯದಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಜನಕ್ಕೆ ತಮ್ಮ ನೆಚ್ಚಿನ ತಾರೆಯರ ಪರಿಚಯ, ಮತ್ತಷ್ಟು ಹತ್ತಿರದಿಂದ ಆಗುವುದರಲ್ಲಿ ಅನುಮಾನವೇ ಇಲ್ಲ. ಹಾಗೆ ಮಸ್ತಿ ಮತ್ತು ಮನರಂಜನೆ ಅನಿಯಮಿತವಾಗಿ ದೊರೆಯಲಿದೆ ಎಂಬುದು ಉದಯ ಟಿವಿಯ ಆಶಯ.


ಸೆಲಬ್ರಿಟಿಗಳಿಂದ ಸಮಾಜಿಕ ಕಳಕಳಿ “ಸದಾ ನಿಮ್ಮೊಂದಿಗೆ”
ಮೊದಲ ಸಂಚಿಕೆಯಲ್ಲಿ ಬಹದ್ದೂರ್ ಎಂಟ್ರಿ
ಇದೇ ಭಾನುವಾರದಿಂದ ರಾತ್ರಿ 9ಕ್ಕೆ

ಕನ್ನಡ ಕಿರುತೆರೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾಜ ಕಾಳಜಿ ಇಟ್ಟುಕೊಂಡು ಸಾಮಾನ್ಯ ಜನರಿಗೆ ಅನಕೂಲವಾಗಲು ಸೆಲಬ್ರಿಟಿಗಳು ಸಾಮನ್ಯ ಜನರಂತೆ ಕೆಲಸವನ್ನು ಮಾಡಿ ನೊಂದ ಮನಸ್ಸಿಗೆ ಸಹಾಯ ಮಾಡುವ ಏಕೈಕ ಶೋ “ಸದಾ ನಿಮ್ಮೊಂದಿಗೆ” ಇದೇ ಭಾನುವಾರದಿಂದ ರಾತ್ರಿ 9ಕ್ಕೆ ಉದಯಟಿವಿಯಲ್ಲಿ ಪ್ರಸಾರವಾಗುತ್ತಿದೆ.

ಪ್ರತಿ ಒಂದು ವಾರ ಅಸಹಾಯಕರಿಗೆ ಅವರ ಅವಶ್ಯಕತೆಗೆ ಚಿತ್ರರಂಗದ ದಿಗ್ಗಜರು ಸಾಮಾನ್ಯ ಜನರಂತೆ ಸಾರ್ವಜನಿಕರ ಮುಂದೆ ಕೆಲಸವನ್ನು ಮಾಡಿ ಹಣವನ್ನು ಸಂಗ್ರಹಿಸುತ್ತಾರೆ. ಆ ಸಂದರ್ಭದಲ್ಲಿ ಬಂದ ಹಣಕ್ಕೆ ಉದಯ ಟಿವಿ ಆ ಒಟ್ಟು ಹಣಕ್ಕೆ 100ರಷ್ಟು ಸೆರಿಸಿ ಅವರ ಜೀವನಕ್ಕೆ ಅನುಕೂಲವನ್ನು ಮಾಡಿಕೊಡುವ ಸಮಾಜ ಕಳಕಳಿಯ ಕಾರ್ಯಕ್ರಮ ಇದಾಗಿದೆ. ಹೂವು ಮಾರುವುದು, ಏಳೆನೀರು ಮಾರುವುದು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವುದು,ಆಟೋ ಓಡಿಸುವುದು, ಗೋಲಿ ಸೋಡಾ ಮಾರುವುದು,ಸೊಪ್ಪು ಮಾರುವುದು ಪಾನಿ ಪುರಿ,ಕಬ್ಬಿನ ಹಾಲು ಮಾರುವುದು ಹೀಗೆ ಇನ್ನೂ ಅನೇಕ ಕೆಲಸವನ್ನು ಸಾರ್ವಜನಿಕರ ನಡುವೆ ಮಾಡಿ ಈ ಶೋಗೆ ಕೈ ಜೋಡಿಸಿದ್ದಾರೆ ಸ್ಯಾಂಡಲ್‍ವುಡ್ ತಾರೆಯರು.

“ಸದಾ ನಿಮ್ಮೊಂದಿಗೆ” ಯ ಮುಂಚುಣಿಯನ್ನು ಪಂಚಭಾಷಾ ತಾರೆ, ಕನ್ನಡದ ಹೆಸರಾಂತ ನಟಿ, ಚಿತ್ರರಂಗದಲ್ಲಿ 50 ವರ್ಷವನ್ನು ಯಶಸ್ವಿಯಾಗಿ ಪೂರೈಸಿದ “ಜೂಲಿಲಕ್ಮೀ”ಯವರು ವಹಿಸಿಕೊಂಡಿದ್ದಾರೆ. ಲಕ್ಷ್ಮೀಯವರು ಈ ಕಾರ್ಯಮದಲ್ಲಿ ತಮ್ಮ ಜೀವನಾನುಭವದಲ್ಲಿ ನೋಡಿರುವ ಘಟನೆಗಳನ್ನು ಉದಾಹರಣೆಗೆ ತೆಗೆದುಕೊಂಡು ಬಹಳ ಘನತೆಯಿಂದ ನಡೆಸಿಕೊಡುತ್ತಿದ್ದಾರೆ.

“ಎಷ್ಟೋ ಸಲ ನಮಗೆ ಅಸಹಾಯಕರಿಗೆ ಸಹಾಯ ಮಾಡಬೇಕು ಅನಿಸುತ್ತೆ ಆದರೆ ಯಾವುದೋ ಸಂದರ್ಭದಲ್ಲಿ ಅದನ್ನು ನಾವು ಮರೆತು ಬಿಡುತ್ತೇವೆ. ಆದರೆ ಉದಯ ಟಿವಿ ಈ ಕಾರ್ಯವನ್ನು ಕರ್ತವ್ಯ ಎಂದು ಭಾವಿಸಿ ದುರ್ಬಲರಿಗೆ ಬಲವನ್ನು ಕೊಡುವ ಅದ್ಭುತ ಕಾರ್ಯವನ್ನು ಮಾಡುತ್ತಿದೆ.ಇದಕ್ಕೆ ಸ್ಯಾಂಡಲ್‍ವುಡ್‍ನ ನಟನಟಿಯರು ಕೈ ಜೋಡಿಸಿದ್ದಾರೆ ಎಂಬುದು ಸಂತಸದ ವಿಷಯ. ಕನ್ನಡ ಕಿರುತೆರೆಯ ಇತಿಹಾದಲ್ಲಿಯೇ ಮೊದಲ ಬಾರಿಗೆ ಉದಯ ಟಿವಿ ಇಂತಹ ಕಾರ್ಯಕ್ರಮವನ್ನು ನಡೆಸಸುತ್ತಿರುವುದು ಅಭಿನಂದನಾರ್ಹ” ಎಂದು ಜುಲಿ ಲಕ್ಷ್ಮೀ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

“ಸದಾ ನಿಮ್ಮೊಂದಿಗೆ” ಕಾರ್ಯಕ್ರಮದಲ್ಲಿ ಮೊದಲ ಸಂಚಿಕೆಯಲ್ಲಿ ಅದ್ಧೂರಿಯಾಗಿ ಎಂಟ್ರಿ ಕೊಟ್ಟು ಬಹದ್ದೂರ್ ಆಗಿ ಮಿಂಚಿರೋ ಸರ್ಜಾ ಫ್ಯಾಮಿಲಿಯ ಭರ್ಜರಿ ಹುಡ್ಗ ಧ್ರುವ ಸರ್ಜಾ. ಇವರು ನರೇಂದ್ರ ಕುಮಾರ್ ಎಂಬ ಒಬ್ಬ ಆಟೋ ಡ್ರೈವರ್‍ಗೆ ಸಹಾಯ ಮಾಡಿದ್ದಾರೆ. ಧ್ರುವ ಸರ್ಜಾ ಅವರು ನರೇಂದ್ರ ಕುಮಾರ್‍ರ ಹಾಗೆ ಆಟೋ ಓಡಿಸಿ ಅವರಿಗೆ ಸಹಾಯವನ್ನು ಮಾಡಿದ್ದಾರೆ.

ಅಟೋ ಓಡಿಸುವ ಮೊದಲು ಆಟೋರಾಜ ಶಂಕ್ರಣ್ಣನ ಪ್ರತಿಮೆಗೆ ಹೂವಿನಹಾರ ಹಾಕಿ ನಮಸ್ಕರಿಸಿ ಶ್ರದ್ಧೆಯಿಂದ ಆಟೋ ಹತ್ತಿದರು. ಇವರಿಗೆ ಸಿಕ್ಕ ಮೊಟ್ಟ ಮೊದಲ ಕಸ್ಟಮರ್ ಗರ್ಭಿಣಿ ಅವರನ್ನು ಕರೆದುಕೊಂಡು ಹೋಗಿ ಶ್ರೀನಗರ ಆಸ್ಪತ್ರೆಗೆ ಬಿಟ್ರು. ಆ ಗರ್ಭಿಣಿ ಹತ್ರ ದುಡ್ಡು ತೆಗೆದುಕೊಳ್ಳದೇ ತಾವೇ ಆ ದುಡ್ಡನ್ನ ತಮ್ಮ ಜೇಬಿನಿಂದ ಕೊಟ್ಟಿದ್ದಾರೆ. ನಂತರ ವಿದ್ಯಾರ್ಥಿಗಳನ್ನು ವಾಸವಿ ಕಾಲೇಜ್‍ಗೆ ಬಿಟ್ಟು ಅಲ್ಲಿ ಸ್ಟೂಡೆಂಟ್ಸ್ ಜೊತೆ ಕುಣಿದು ಕುಪ್ಪಳಿಸಿ, ಮೋಜು ಮಸ್ತಿ ಮಾಡಿ ಮತ್ತೆ ಆಟೋ ಹತ್ತಿದರು. ಹೀಗೆ ದಿನ ಪೂರ್ತಿ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ಧ ದಂಪತಿಗಳ ವರೆಗೂ ಬೆಂಗಳೂರಿನಾದ್ಯಂತ ಎಲ್ಲ ಕಡೆ ಆಟೋ ಓಡಿಸಿದರು ಬಂದ ಹಣದಿಂದ ನರೇಂದ್ರ ಕುಮಾರ್ ಅವರ ಸ್ವಂತ ಆಟೋ ಮಾಡಿಕೊಳ್ಳೋ ಆಸೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಶೋನಲ್ಲಿ ಪ್ರತಿ ವಾರವೂ ಒಬ್ಬೊಬ್ಬ ಸೆಲಬ್ರಿಟಿಗಳು ಬಂದಿದ್ದಾರೆ ಅವರುಗಳಲ್ಲಿ ಶ್ರೀ ಮುರಳಿ,ಲವ್ಲಿ ಸ್ಟಾರ್ ಪ್ರೇಮ್,ಪ್ರೀಯಾಂಕ ಉಪೇಂದ್ರ,ಪಾರೂಲ್ ಯಾದವ್,ವಿಜಯ ರಾಘವೇಂದ್ರ,ಸೃಜನ್ ಲೋಕೇಶ್,ಮಾನ್ವಿತಾ ಹರೀಶ್,ಪ್ರೀಯಾಮಣಿ,ರಶ್ಮೀಕಾ ಮಂದಣ್ಣ,ರ್ಧನಂಜಯ್,ಚಿರಂಜೀವಿ ಸರ್ಜಾ, ಹೀಗೆ ಇನ್ನೂ ಅನೇಕರು ಭಾಗವಹಿಸಿದ್ದಾರೆ.

ಇನ್ನು ಈ ಕಾರ್ಯಕ್ರಮ ಸೃಜನ್ ಲೋಕೇಶ್ ನೇತೃತ್ವದ ಪ್ರತಿಷ್ಠಿತ”ಲೋಕೇಶ್ ಪ್ರೊಡಕ್ಷನ್” ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿದೆ.

ಆರ್ಥಿಕ ದುರ್ಭಲರಿಗೆ ಬೆಂಬಲ ನೀಡಿ, ಬಲಹೀನರಿಗೆ ದೈರ್ಯತುಂಬುವ ಶಕ್ತಿ ನೀಡುವ, ಕಷ್ಟದ ಕಗ್ಗತ್ತಲೆಯಲ್ಲಿ ಮುಳಗಿದವರಿಗೆ ಬೆಳಕಿನ್ನು ಕೊಡುವ, ನೊಂದ ಬೆಂದ ಮನಸ್ಸಿಗೆ ಸೆಲಬ್ರಿಟಿಗಳಿಂದ ಸಾಂತ್ವನ ಹೆಳುವ ಉದಯ ಟಿವಿಯ ರೀಯಾಲಿಟಿ ಅಲ್ಲ್ಲ ರೀಯಲ್ ಶೋ “ಸದಾ ನಿಮ್ಮೊಂದಿಗೆ” ಪ್ರತಿ ಭಾನುವಾರ(15.7.2018) 9ಕ್ಕೆ ಪ್ರಸಾರವಾಗಲಿದೆ.

Sorry, no posts matched your criteria.

More Buzz

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

BuzzShort Films 10 months ago

Kanjoos Kubera Short Film Official Video: ಕಂಜ್ಯೂಸ್ ಕುಬೇರ ಕನ್ನಡ ಕಿರುಚಿತ್ರ ನೋಡಿ.

Copyright ©2025 . All Rights Reserved. privacy | terms Whatsapp: 9538193653 Email: hello@flixoye.com