ಸದ್ಯದಲ್ಲೇ ತೆರೆಗೆ `ಕನ್ನಡಕ್ಕಾಗಿ ಒಂದನ್ನು ಒತ್ತಿ’

Published on

263 Views

ಸದ್ಯದಲ್ಲೇ ತೆರೆಗೆ `ಕನ್ನಡಕ್ಕಾಗಿ ಒಂದನ್ನು ಒತ್ತಿ’

ಎದಬಿಡಂಗಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಕನ್ನಡಕ್ಕಾಗಿ ಒಂದನ್ನು ಒತ್ತಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ಚಿತ್ರದ ಹಾಡುಗಳನ್ನು ಯೂಟ್ಯೂಬ್‍ನಲ್ಲೂ 5ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಸೀಡಿಗಳನ್ನು ಯೋಗರಾಜ್ ಭಟ್ ಅವರು ತಮ್ಮ ಪಂಚರಂಗಿ ಆಡಿಯೋ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

ಕುಶಾಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಿಷಿಕೇಶ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಯೋಗರಾಜ್ ಭಟ್, ಕುಶಾಲ್ ಬರೆದಿದ್ದಾರೆ. ಅವಿನಾಶ್ ಎಸ್ ಶತಮರ್ಷಣ, ಕೃಷಿ ತಾಪಂಡ, ಚಿಕ್ಕಣ್ಣ, ದತ್ತಣ್ಣ, ಮಿಮಿಕ್ರಿ ಗೋಪಿ, ಸುಚೇಂದ್ರ ಪ್ರಸಾದ್, ಜಯಶ್ರೀ, ರಂಗಾಯಣ ರಘು, ಉಮೇಶ್, ಹೆಚ್.ಎಂ.ಟಿ ವಿಜಯ್, ರವಿ(ಟಾಮಿ) ಸತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com