ಸ್ಯಾಂಡಲ್ ವುಡ್ ನಲ್ಲಿ ಕೊಲೆ ಸದ್ದು – ನಟ ದರ್ಶನ್ ತನ್ನ ಅಭಿಮಾನಿಗೆ ಮಾಡಿದ್ದೇನು?

Published on

179 Views

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಅರೆಸ್ಟ್ ಆಗಿದ್ದು, ಅವರ ಅಭಿಮಾನಿಗಳು ಶಾಕ್ ಅಲ್ಲಿದ್ದಾರೆ. ಈ ಪ್ರಕರಣದ ಕುರಿತು ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಹಾಗೂ ಈ ಕೊಲೆ ಕುರಿತು ಏನೇಲ್ಲ ಹೊಸ ಅಪ್ಡೇಟ್ಸ್ ಬಂದಿದೆ ಎಂಬುದನ್ನು ನೋಡೋಣ..

 

ಜೂನ್ 9ರ ಶನಿವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿರ ಶವ ಪತ್ತೆಯಾಗಿತ್ತು. ತನಿಖೆ ವೇಳೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿ ಎಂದು ಗೊತ್ತಾಗಿದೆ. ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ನಟನ ಪತ್ನಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದು, ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಹೋಟೆಲ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲು ಆಗಲ್ಲ ಎಂದು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದರು.

ಉದ್ಯಮಿ ವಿನಯ್ ಕಾರ್ ಶೆಡ್‌ನಲ್ಲಿ ಕೊಲೆ?

ದರ್ಶನ್ ಆಪ್ತ ಮೈಸೂರಿನ ಬ್ಲ್ಯೂ ರಾಡಿಸನ್ ಹೋಟೆಲ್ ಮಾಲೀಕ, ಉದ್ಯಮಿ ವಿನಯ್ ಕಾರ್ ಶೆಡ್‌ನಲ್ಲಿ ಕೊಲೆ ನಡೆದಿದೆ ಎಂಬ ಮಾಹಿತಿ ಸಧ್ಯ ಲಭ್ಯವಾಗಿದೆ. ಕೊಲೆಯಾದ ರೇಣುಕಾಸ್ವಾಮಿ, ದರ್ಶನ್ ಫ್ಯಾನ್ ಅಸೋಸಿಯೇಷನ್ ಸದಸ್ಯನೂ ಆಗಿದ್ದನು.

ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದರಿಂದ ಕೋಪಗೊಂಡ ದರ್ಶನ್, ಚಿತ್ರದುರ್ಗದ ಫ್ಯಾನ್ ಅಸೋಶಿಯೇಷನ್ ಅಧ್ಯಕ್ಷ ರಾಘವೇಂದ್ರ ಮೂಲಕ ರೇಣುಕಾಸ್ವಾಮಿಯನ್ನು ಕರೆಸಿಕೊಳ್ಳಲಾಗಿತ್ತು. ಕಾರ್ ಶೆಡ್‌ನಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹೊಡೆಯಲಾಗಿದೆ. ಹಲ್ಲೆಯ ತೀವ್ರತೆಗೆ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ. ಈ ಸಂದರ್ಭದಲ್ಲಿ ದರ್ಶನ್ ಅಲ್ಲೇ ಇದ್ದರು ಎಂದು ತಿಳಿದು ಬಂದಿದೆ. ದರ್ಶನ್ ಆಪ್ತ ವಿನಯ್‌ನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ವರ್ಷದ ಹಿಂದೆ ಮದುವೆಯಾಗಿದ್ದ ರೇಣುಕಾಸ್ವಾಮಿ

ಕೊಲೆಯಾದ ರೇಣುಕಾಸ್ವಾಮಿ ವರ್ಷದ ಹಿಂದೆಯೇ ಮದುವೆಯಾಗಿದ್ದನು. ರೇಣುಕಾಸ್ವಾಮಿ ಪತ್ನಿ ಗರ್ಭಿಣಿಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶನಿವಾರ ಕೆಲಸಕ್ಕೆ ಮಗ ಮನೆಗೆ ಹಿಂದಿರುಗಿ ಬಂದಿಲ್ಲ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು ಹಾಕಿದರು. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ. ನಿನ್ನೆ ಬೆಂಗಳೂರು ಪೊಲೀಸರು ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವ ಮಾಹಿತಿಯನ್ನು ಕುಟುಂಬಸ್ಥರಿಗೆ ನೀಡಲಾಗಿತ್ತು.

ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಏನಿದೆ?

ಘಟನೆ ಸಂಬಂದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶವವನ್ನು ಮೊದಲ ಬಾರಿ ನೋಡಿದ್ದ ಅನುಗ್ರಹ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸೆಕ್ಯುರಿಟಿ ಗಾರ್ಡ್ ಈ ಸಂಬಂಧ ದೂರು ದಾಖಲಿಸಿದ್ದರು. ಅಪಾರ್ಟ್ಮೆಂಟ್ ಮುಂಭಾಗ ಗಸ್ತು ಮಾಡುತ್ತಿದ್ದಾಗ ಪತ್ತೆಯಾಗಿತ್ತು. 35 ವರ್ಷ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಮುಖ ಹಾಗೂ ತಲೆಗೆ ಮತ್ತು ಕಿವಿಗೆ ರಕ್ತದ ಗಾಯ ಆಗಿರೋದು ಕಂಡು ಬಂದಿತ್ತು.

 

ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ

More Buzz

Buzz 3 hours ago

ಕೇವಲ ಮೋಷನ್ ಪೋಸ್ಟರ್ ಮೂಲಕವೇ ದೊಡ್ಡ ಕ್ರೇಜ಼್ ಹುಟ್ಟಿಸಿದ ‘ಕೆಂಡ’- ಟೀಸರ್ ಇಲ್ಲಿದೆ ನೋಡಿ

Buzz 1 day ago

ಎರಡನೇ ದಿನವೂ ಪ್ರಭಾಸ್ ನಟನೆಯ ಕಲ್ಕಿ 2898AD ಕಮಾಲ್ – ಎರಡೇ ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು ಗೊತ್ತಾ?

BuzzTollywood Buzz 1 day ago

ಈ ಓಟಿಟಿಯಲ್ಲಿ ಶೀಘ್ರವೇ ಬರಲಿದೆ Kalki 2898 AD – ಆದರೂ‌ ಚಿತ್ರದ ಥಿಯೇಟರ್ ಅನುಭವವೇ ಬೇರೆ

Buzzfilm of the dayGalleryTollywood Buzz 3 days ago

ಕಲ್ಕಿ 2898 AD ಟಿಕೆಟ್‌ಗೆ ರಾಜಮೌಳಿ ಕ್ಯೂ ನಿಂತ ಫೋಟೋ ವೈರಲ್ – ಮೂವೀ ಪವರ್ ಎಂದ ನೆಟ್ಟಿಗರು

Buzzfilm of the dayFull MoviesTollywood Buzz 3 days ago

ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಕಲ್ಕಿ 2898 AD ಚಿತ್ರ ಹೇಗಿದೆ? – ಇಲ್ಲಿದೆ ನೋಡಿ ಚುಟುಕು ವಿಮರ್ಶೆ

Buzz 4 days ago

ತರುಣ್‌ ಸುಧೀರ್‌ ಜೊತೆ ಹಸೆಮಣೆ ಏರಲಿದ್ದಾರೆಯೇ ರಾಬರ್ಟ್‌ ಬೆಡಗಿ ಸೋನಲ್!? – ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು

BuzzGalleryTrailers 5 days ago

ಕಲ್ಕಿ 2898 AD ಚಿತ್ರದ ಬುಜ್ಜಿ ಚಲಾಯಿಸಿದ ರಿಷಭ್ ಶೆಟ್ಟಿ – ಇಲ್ಲಿದೆ ನೋಡಿ ಎಕ್ಸ್’ಕ್ಲೂಸಿವ್ ವಿಡಿಯೋ

Buzz 5 days ago

“ಹಾಯ್‌ ಟೈಗರ್, ಹಾಯ್‌ ಬಾಸ್”!!!! – ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ್ದು ಯಾರು?

Buzzfilm of the dayFull Movies 1 week ago

ಲವ್ಲಿ ಆಗಿ ಜನರ ಮನಸ್ಸು ಗೆದ್ದ ವಸಿಷ್ಟ ಸಿಂಹರ ಲವ್…ಲಿ

Buzz 3 weeks ago

ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನಕ್ಕೆ ಕೊನೆಗೂ ಬಯಲಾಯ್ತು ಕಾರಣ – ಇಲ್ಲಿದೆ ನೋಡಿ ಸತ್ಯ

Buzz 3 weeks ago

ಯುವರಾಜ್‌ ಕುಮಾರ್‌ ದಂಪತಿಗಳ ವಿಚ್ಛೇದನಕ್ಕೆ ಸಪ್ತಮಿ ಗೌಡ ಕಾರಣ!!? ಏನಿದು ವಿವಾದ?

Buzz 3 weeks ago

ಯುವರಾಜ್ ಕುಮಾರ್ ಜೊತೆ ವಿಚ್ಛೇದನದ ಬಗ್ಗೆ ಶ್ರೀದೇವಿಯವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ!! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Copyright ©2024 . All Rights Reserved. privacy | terms Whatsapp: 9538193653 Email: hello@flixoye.com