ಸರ್ಕಾರ್ ಪೋಸ್ಟರ್ ಅನಾವರಣ

Published on

563 Views
Advertisement

ರೌಡಿಸಂ ಎನ್ನುವುದು ನೀರಿನ ಮೇಲೆ ಗುಳ್ಳೆ ಇರುವಂತೆ. ಯಾವಾಗ ಏನಾಗುತ್ತದೆ ಎಂಬುದನ್ನು ಹೇಳಲಿಕ್ಕೆ ಆಗದು. ಇಂತಹ ಅಂಶಗಳನ್ನು ಹೊಂದಿರುವ ‘ಸರ್ಕಾರ್’ ಅಡಿಬರಹದಲ್ಲಿ ದಿ ಬುಲೆಟ್ ಅಂತ ಹೇಳಿಕೊಂಡಿರುವ ಸಿನಿಮಾವೊಂದು ಹುಬ್ಬಳ್ಳಿ, ಸಾತೋಡಿ ಜಲಪಾತ, ಉಡುಪಿ, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ. ಕಳೆದ ವರ್ಷ ಮೂರು ಸಾವಿರ ಮಠದ ಆವರಣದಲ್ಲಿ ಹಾಡುಗಳು ಬಿಡುಗಡೆಗೊಂಡಿತ್ತು. ಬೆಂಗಳೂರು ಯಲಹಂಕ ನಿವಾಸಿ ಎಸ್.ಮಂಜುಪ್ರೀತಮ್ ಅಪ್ಪಟ ಗಣೇಶ್ ಅಭಿಮಾನಿ. ಚಿಕ್ಕಂದಿನಿಂದಲೂ ಚಿತ್ರರಂಗಕ್ಕೆ ಬರಬೇಕೆಂಬ ಪಸೆಯಿಂದ ಹಲವರಲ್ಲಿ ಅವಕಾಶಕ್ಕಾಗಿ ಸೈಕಲ್ ಹೊಡೆದರೂ ಪ್ರಯೋಜನವಾಗಿಲ್ಲ. ಮುಂದೆ ಗಣೇಶ್ ಚಿತ್ರಗಳ ಕಾರ್ಯಕ್ರಮ, ಸೆಟ್‍ನಲ್ಲಿ ನಿರ್ದೇಶಕರ ಚಲನವಲನಗಳನ್ನು ತಿಳಿದುಕೊಂಡು ಮುಂದೆ ಸ್ವತಂತ್ರ ನಿರ್ದೇಶಕನಾಗಿ ಛಲವನ್ನು ಸಾಧಿಸಿದ್ದಾರೆ. ಅಲ್ಲದೆ ಮಹೂರ್ತ ಸಮಾರಂಭಕ್ಕೆ ಖುದ್ದು ಗಣೇಶ್ ದಂಪತಿಗಳು ಆಗಮಿಸಿ ಶುಭಕೋರಿದ್ದಾರಂತೆ. ಬಾಲಿವುಡ್‍ನ ಸರ್ಕಾರ್ ಇದಕ್ಕೂ ಸಂಬಂದ ಇರುವುದಿಲ್ಲ. ಚಿತ್ರದ ಕುರಿತು ಹೇಳುವುದಾದರೆ ಶೀರ್ಷಿಕೆಯನ್ನು ಶೋಭರಾಜ್ ಇಡಲಾಗಿದ್ದು, ಒಳ್ಳೆಯ ಕೆಲಸಗಳಿಗೆ ಮಾತ್ರ ರೌಡಿಯಾಗಿರುತ್ತಾನೆ. ನಾಯಕ ಇವರ ತಂಡಕ್ಕೆ ಸೇರಿಕೊಂಡು, ಆತನಂತೆ ಇರುವಾಗ ನಾಯಕಿ ಮಧ್ಯೆ ಪ್ರೀತಿ ಬೆಳಯುತ್ತದೆ.

Advertisement

ಇದಕ್ಕೂ ಮುನ್ನ ಕತೆಯು ಹುಬ್ಬಳ್ಳಿಯಲ್ಲಿ ತೆರೆದುಕೊಂಡು, ಆತ ಬೆಂಗಳೂರಿಗೆ ಬರಲು ಕಾರಣವೇನು. ಅಲ್ಲಿ ಇವರ ತಂಡಕ್ಕೆ ಹೇಗೆ ಸೇರಿಕೊಳ್ಳುತ್ತಾನೆ ಎಂಬುದನ್ನು ಸಿನಿಮಾ ನೋಡಿದರೆ ತಿಳಿಯುತ್ತದಂತೆ. ಹುಬ್ಬಳ್ಳಿಯ ಜಾಗ್ವಾರ್‍ಜಗ್ಗಿ ನಾಯಕನಾಗಿ ಹೊಸ ಅನುಭವ. ಡಾಕ್ಟರ್ ಪಾತ್ರದಲ್ಲಿ ಲೇಖಾಚಂದ್ರ ನಾಯಕಿ. ಇವರೊಂದಿಗೆ ಶೋಭರಾಜ್, ಧರ್ಮ, ಭ್ರಷ್ಟ ಪೋಲೀಸ್ ಅಧಿಕಾರಿಯಾಗಿ ಉಗ್ರಂಮಂಜು, ನಾಯಕನ ತಾಯಿ ಪಾತ್ರದಲ್ಲಿ ಯಮುನಾ ನಟನೆ ಇದೆ. ತಂದೆತಾಯಿ, ಪ್ರೀತಿ, ಸ್ನೇಹ, ನಂಬಿದವರು ಎಲ್ಲರೂ ರೌಡಿಸಂ ಮಾಡಿದಾಗ ಕಳೆದುಕೊಳ್ಳುವುದು ಖಚಿತವೆಂದು ಸಂದೇಶದ ಮೂಲಕ ಹೇಳಲಾಗಿದೆ. ಛಾಯಗ್ರಹಣ ರಾಚ್‍ಪುಟಿ ಅರುಣ್‍ಕುಮಾರ್, ಸಾಹಸ ಮಾಸ್‍ಮಾದ, ನೃತ್ಯ ಸ್ಟಾರ್‍ನಾಗಿ, ಸಂಕಲನ ತೇಜು.ಡಿ.ಕುಮಾರ್ ಅವರದಾಗಿದೆ. ಶಂಕರ್‍ಮಹದೇವನ್, ಚಂದನ್‍ಶೆಟ್ಟಿ ಗಾಯನದ ಐದು ಹಾಡುಗಳಿಗೆ ಸತೀಶ್‍ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ.

Advertisement

ಚಿತ್ರವು ತೆರೆಗೆ ಬರಲು ಸಮೀಪವಾಗಿರುವುದರಿಂದ ಪೋಸ್ಟರ್ ಅನಾವರಣ ನೆಪಮಾಡಿಕೊಂಡು ನಿರ್ಮಾಪಕರು ಸಣ್ಣದೊಂದು ಕಾರ್ಯಕ್ರಮವನ್ನು ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಏರ್ಪಾಟು ಮಾಡಿದ್ದರು. ನಿರ್ದೇಶಕ, ನಿರ್ಮಾಪಕರ ಹಿತೈಷಿಗಳು ಜಾಸ್ತಿ ಆಗಮಿಸಿದ್ದರಿಂದ ಸಮಾರಂಭವು ಒಡ್ರಾಸಿಯಲ್ಲಿ ನಡೆಯಿತು. ಇದರ ಮಧ್ಯೆ ಮೈಕ್ ಕೈಕೊಟ್ಟಿದ್ದರಿಂದ ಗಣ್ಯರುಗಳು ಪಾಠ ಒಪ್ಪಿಸುವಂತೆ ಚಿತ್ರಕ್ಕೆ ಶುಭ ಹಾರೈಸಿದರು. ಅದರಲ್ಲೂ ಹುಬ್ಬಳ್ಳಿಯಿಂದ ಬಂದವರೊಬ್ಬರು ನನ್ನ ಕಡೆಯಿಂದ 1000 ಟಿಕೆಟ್ ಖರೀದಿಸುವುದಾಗಿ ಹೇಳಿದರು. ಮಗ ನಾಯಕನಾಗುತ್ತಿರುವುದರಿಂದ ಅವನ ಸಲುವಾಗಿ ಪಾರ್ವತಿ.ಎಸ್. ನಿರ್ಮಾಣ ಮಾಡಿರುವ ಸಿನಿಮಾವು ಸದ್ಯದಲ್ಲೆ ಬಿಡುಗಡೆಯಾಗಲಿದೆ.

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 5 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 5 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com