ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.

Published on

464 Views
Advertisement

ಬೆಂಗಳೂರು( ನ. 13) ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

Advertisement

ರಾತ್ರಿ 12 ಗಂಟೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ.

ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು
ಅಪರಾಧ ಜಗತ್ತಿನ ಬಗ್ಗೆ ಅವರು ಬರೆದ ಪುಸ್ತಕಗಳು ಲೆಕ್ಕವೇ ಇಲ್ಲ.

Advertisement

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.

Advertisement

ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ

1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.

ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.

Advertisement

ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರರ್ಥಾನ ಶಾಲೆಯ ಸಂಸ್ಥಾಪಕರು .

ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿದ್ದರು..

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com