ತಲ್ವಾರ್ ಪೇಟೆಗೆ ಬಂದಿಳಿದ “ಸೀರಿಯಲ್ ಸೆಟ್ ಚಂದ್ರಪ್ಪ”!!

Published on

426 Views
Advertisement

ಶ್ರೀ ನಾಗಬ್ರಹ್ಮ ಕ್ರಿಯೇಷನ್ಸ್ನಲ್ಲಿ , ಡಾ. ಶೈಲೇಶ್ ಕುಮಾರ್.ಬಿ.ಎಸ್ರ ವರು ನಿರ್ಮಾಣ ಮಾಡುತ್ತಿರುವ ಅದ್ದೂರಿ ಚಿತ್ರ “ತಲ್ವಾರ್ ಪೇಟೆ “.

ಸದ್ದಿಲ್ಲದೆ ಸೆಟ್ ಏರಿದ ಈ ಚಲನಚಿತ್ರದ ಚಿತ್ರೀಕರಣ‌ ಬಿರುಸಿನಿಂದ ಸಾಗಿದೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಬಹುದೊಡ್ಡ ತಾರಾಬಳಗವಿದೆ.
ಈಗ ಕಲಾವಿದರ ಬಳಗಕ್ಕೆ ಭರ್ಜರಿ ಎಂಟ್ರಿ ಕೊಡ್ತಾ ಇರೋದು ನಟ ರವಿ ಶಂಕರ್ ಉರುಫ್ ಸೀರಿಯಲ್ ಸೆಟ್ ಚಂದ್ರಪ್ಪ !!

Advertisement


ವೃತ್ತಿಯಲ್ಲಿ ನ್ಯೂರೋಸರ್ಜನ್ ಆಗಿರುವ ನಿರ್ಮಾಪಕ ಡಾ.ಶೈಲೇಶ್ ಕುಮಾರ್. ಬಿ.ಎಸ್ ರವರು ಅತ್ಯಂತ ಪ್ರೀತಿಯಿಂದ ಕನ್ನಡಿಗರಿಗಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನುರಿತ ಕಲಾವಿದರುಬೇಕೆಂಬ ಉದ್ದೇಶದಿಂದ ಉತ್ತಮ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.‌ ಇದಕ್ಕೆ ನಿದರ್ಶನವಾಗಿ ರವಿಶಂಕರ್ರ ವರು “ತಲ್ವಾರ್ ಪೇಟೆ”ಗೆ ಬಂದಿಳಿದಿದ್ದಾರೆ. ನಾಯಕ ನಟನಾಗಿ ವಸಿಷ್ಠ ಸಿಂಹ , ನಾಯಕಿ ಪಾತ್ರದಲ್ಲಿ ಸೋನಾಲ್ ಮಂಟೆರಿಯೊ ಅವರೊಂದಿಗೆ ಈಗಾಗಲೇ ಚತುರ್ಭಾಷಾ ಕಲಾವಿದ ಹರೀಶ್ ಉತ್ತಮನ್, ಯಶ್ವಂತ್ ಶೆಟ್ಟಿ, ಆಶಾಲತಾ, ವೀಣಾ ಪೊನ್ನಪ್ಪ, ಲಿಂಗರಾಜ್ ಬಲವಾಡಿ, ಸುರೇಶ್ ಚಂದ್ರ ಪ್ರದೀಪ್ ಪೂಜಾರಿ, ರಜನಿ ಕಾಂತ್, ಮನು ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

ನವೆಂಬರ್ 28 ರವಿಶಂಕರ್ ಅವರ ಹುಟ್ಟುಹಬ್ಬವಿದ್ದು, ಮುಂಚಿತವಾಗಿಯೇ ಚಿತ್ರತಂಡ ಅವರಿಗೆ‌ ಶುಭಕೋರಿದೆ.
ಈ ಚಿತ್ರವನ್ನು ಕೆ.ಲಕ್ಷ್ಮಣ್ ಶ್ರೀ ರಾಮ್ ನಿರ್ದೇಶಿಸುತ್ತಿದ್ದಾರೆ.
ಮಫ್ತಿ, ಉಗ್ರಂ ಚಿತ್ರಗಳಿಗೆ ಕಥೆ, ಸಂಭಾಷಣಾ ಹಾಗೂ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದ ಕೆ.ರಾಮ್ ಶ್ರೀಲಕ್ಷ್ಮಣ್ ಹಾಗೂ ಈ ಚಿತ್ರದ ನಿರ್ದೇಶಕ ಕೆ. ಲಕ್ಷ್ಮಣ್ ಶ್ರೀ ರಾಮ್ ಇಬ್ಬರು ಸಹೋದರರು.

Advertisement

ಇವರಿಬ್ಬರು ಜಂಟಿಯಾಗಿ ತಲ್ವಾರ್ ಪೇಟೆಗೂ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ.
ಕೆ ಲಕ್ಷ್ಮಣ್ ಶ್ರೀ ರಾಮ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆ.ರಾಮ್ ಶ್ರೀ ಲಕ್ಷ್ಮಣ್ ಸಹಕಾರ ನಿರ್ದೇಶನ ಮಾಡುತ್ತಿದ್ದಾರೆ.

ಎಂ.ಯು.ನಂದಕುಮಾರ್ ಛಾಯಾಗ್ರಹಣ, ಶ್ರೀಕಾಂತ್ (ಉಗ್ರಂ, ಕೆ.ಜಿ.ಎಫ್) ಸಂಕಲನ, ಡಿಫರೆಂಟ್ ಡ್ಯಾನಿ, ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ, ಮುರಳಿ, ಮೋಹನ್, ಧನು, ಗೀತ ನೃತ್ಯ ನಿರ್ದೇಶನ ಹಾಗೂ ಆರ್ಟ್ ರಘು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಜಯಂತ್ ಕಾಯ್ಕಿಣಿ ಹಾಗೂ ಕೆ.ರಾಮ್ ಶ್ರೀಲಕ್ಷ್ಮಣ್ ಈ ಚಿತ್ರದ ಹಾಡುಗಳನ್ನು ರಚಿಸಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡುತ್ತಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com