ನಂದಿನಿಯಲ್ಲಿ ಮಾಸ್ಟರ್ ಪೀಸ್ “ಸಾನ್ವಿ ಶ್ರೀವಾತ್ಸವ್

Published on

707 Views
Advertisement

ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ “ನಂದಿನಿ” ಧಾರಾವಾಹಿಯು 700 ಕಂತುಗಳತ್ತ ಸಾಗುತ್ತಿದ್ದರೂ, ಇನ್ನೂ ಹೊಚ್ಚ ಹೊಸ ಕಥೆಯಂತೆ ತನ್ನ ಪ್ರೇಕ್ಷಕರನ್ನು ರಂಜಿಸುತ್ತಾ ಹಿಡಿದಿಡುವುದರಲ್ಲಿ ಯಶಸ್ವಿಯಾಗಿದೆ. ನಂದಿನಿ ಧಾರಾವಾಹಿಯು ಸದಾ ಅದ್ಭುತ ದೃಶ್ಯಗಳು, ಭವ್ಯ ತಾರಾಗಣ ಮತ್ತು ರೋಚಕ ತಿರುವುಗಳೊಂದಿಗೆ ಹೊರಹೊಮ್ಮುತ್ತಲೇ ಇದೆ. ಇದೀಗ ನಂದಿನಿ ಕಥೆಯು ಅಂತಹುದೇ ಒಂದು ಕುತೂಹಲಕಾರಿ ಘಟ್ಟ ತಲುಪಿದೆ.
ಕಥಾನಾಯಕಿ ಜನನಿ ತಾನು ಇಷ್ಟ ಪಡುತ್ತಿರುವುದು ನಾಯಕ ವಿರಾಟ್‍ನನ್ನು, ಆದರೆ ಅವಳ ಮದುವೆ ನಿಶ್ಚಯ ಆಗುತ್ತಿರುವುದು ಮಾತ್ರ ಖಳನಾದ ಡಾಕ್ಟರ್ ರಾಮ್ ಎಂಬುವನ ಜೊತೆ. ಸೋಜಿಗವೆಂದರೆ ಇದು ಸ್ವತ: ಜನನಿಗೇ ತಿಳಿದಿಲ್ಲ. ಜನನಿ ಇಷ್ಟ ಪಡುತ್ತಿರುವುದು ರಾಮ್‍ನನ್ನು ಎಂದು ಭಾವಿಸಿ ಮನೆಯವರು ಅದ್ದೂರಿಯಾಗಿ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸಿದ್ದಾರೆ.

ಕಥೆಯು ರೋಚಕವಾಗುವುದೇ ಇಲ್ಲಿ. ಮಾಯಾಂಗಿನಿಯಾದ ಶರಭಾ ಜನನಿಯ ರೂಪ ತಳೆದು, ಜನನಿಯಾಗಿ ರಾಮ್ ನನ್ನು ಪ್ರೀತಿಸುವಂತೆ ನಟಿಸಿ, ಕಡೆಗೆ ತನ್ನ ಚಿಕ್ಕಪ್ಪನಾದ ಪುರುಷೋತ್ತಮನ ಬಳಿ ತನ್ನ ಮನದಾಸೆಯನ್ನು ಹೇಳಿಕೊಂಡು ಮದುವೆಯನ್ನೂ ನಿಶ್ಚಯಿಸಿಕೊಂಡಿರುತ್ತಾಳೆ. ಇದಾವುದರ ಅರಿವೂ ಇಲ್ಲದ ಜನನಿ ತಾನು ಕಥಾನಾಯಕನಾದ ವಿರಾಟ್‍ನನ್ನು ಪ್ರೀತಿಸುತ್ತಿದ್ದಾಳೆ. ತನ್ನ ಮದುವೆಯ ಬಗ್ಗೆ ಪುರುಷೋತ್ತಮ ಮಾತನಾಡಿದಾಗ, ಸಹಜವಾಗಿಯೇ ಅದು ವಿರಾಟ್ ಜೊತೆಗೆಂದು ತಿಳಿದಿರುವ ಜನನಿಗೆ, ಶರಭಾ ಸೃಷ್ಟಿಸಿರುವ ಮಾಯಾಜಾಲದ ಅರಿವೇ ಇಲ್ಲ. ಶರಭಾ ಮತ್ತು ಡಾ. ರಾಮ್ ಇಬ್ಬರೂ ಸೇರಿ ಜನನಿಯ ಬಳಿಯಿರುವ ನಾಗಮಣಿಯನ್ನು ವಶಪಡಿಸಿಕೊಳ್ಳಬೇಕೆಂಬ ಹುನ್ನಾರವೇ ಇದಕ್ಕೆಲ್ಲ ಮೂಲ ಕಾರಣ. ನಿಶ್ಚಿತಾರ್ಥದ ಕಂತುಗಳಲ್ಲಿ ತೆರೆಯ ಮೇಲೆ ಇಬ್ಬಿಬ್ಬರು ಜನನಿಯರು ಬರುವ ರೋಮಾಂಚನ ದೃಶ್ಯಗಳು ವೀಕ್ಷಕರನ್ನು ರಂಜಿಸುವುದರಲ್ಲಿ ಸಂಶಯವೇ ಇಲ್ಲ.
ಈಗ ಶರಭಾ ಅಂದುಕೊಂಡಂತೆ, ಜನನಿ ಮತ್ತು ಡಾಕ್ಟರ್ ರಾಮ್‍ನ ನಿಶ್ಚಿತಾರ್ಥದ ದಿನ ಬಂದಿದೆ. ಆದರೆ ಖಳನಾಯಕಿ ನೀಲಿ ನಾಯಕ ವಿರಾಟ್‍ನನ್ನು ಬಲವಂತವಾಗಿ ಮದುವೆಯಾಗುವ ಆಸೆಯಲ್ಲಿ ಅವನ್ನು ಕಿಡ್ನಾಪ್ ಮಾಡಿಸಿ ಬಂಧಿಸಿಟ್ಟಿದ್ದಾಳೆ. ಒಂದೆಡೆ ಜನನಿ ತಾನು ತಾನಿಷ್ಟ ಪಟ್ಟ ವಿರಾಟ್‍ನನ್ನೇ ಮಾದುವೆಯಾಗುತ್ತೇನೆಂಬ ಆಸೆಯಲ್ಲಿ ನಿಶ್ಚಿತಾಥಕ್ಕೆ ಸಿದ್ಧವಾಗುತ್ತಿದ್ದರೆ, ಕಿಡ್ನಾಪ್ ಆಗಿರುವ ನಾಯಕ ವಿರಾಟ್ ಬಂಧನದಿಂದ ಬಿಡಿಸಿಕೊಳ್ಳುವ ಸಾಹಸದಲ್ಲಿದ್ದಾನೆ.

ಜನನಿ ಮತ್ತು ಡಾ.ರಾಮ್‍ನ ನಿಶ್ಚಿತಾರ್ಥ ನಿಜವಾಗಿಯೂ ನಡೆದೇ ಬಿಡುತ್ತದೆಯೇ ಎಂಬ ಕುತೂಹಲಕಾರಿ ಸನ್ನಿವೇಶದಲ್ಲಿ, ಕಥೆಗೆ ತಿರುವು ಕೊಡಲೆಂದೇ ಕನ್ನಡ ಸಿನೆಮಾ ನಟಿ, ಮಾಸ್ಟರ್‍ಪೀಸ್ ಖ್ಯಾತಿಯ “ಸಾನ್ವಿ ಶ್ರೀವಾತ್ಸವ್” ಎಂಟ್ರಿ ಕೊಟ್ಟಿದ್ದಾರೆ.
ವಾರಣಾಸಿ ಮೂಲದ ಈ ಚೆಲುವೆ, ಕನ್ನಡದಲ್ಲಿ ʼಚಂದ್ರಲೇಖʼದಲ್ಲಿ ನಾಯಕಿಯಾಗಿ ಎಂಟ್ರಿ ಕೊಟ್ಟು ತನ್ನ ನಟನೆಯಿಂದ ಜನಮನ ಸೆಳೆದು ಸತತವಾಗಿ ನಟಿಸುತ್ತಿರುವ ಈ ಮೋಹಕ ನಟಿ, ʼಮಾಸ್ಟರ್ ಪೀಸ್ʼನ ಡ್ಯುಯಟ್ ಟಪಾಂಗುಚಿ ʼಐ ಕಾಂಟ್ ವೈಟ್ ಬೇಬಿʼ ಮೂಲಕ ತಮ್ಮ ನೃತ್ಯ ಸಾಮಥ್ರ್ಯವನ್ನೂ ತೋರಿಸಿಕೊಟ್ಟಿದ್ದಾರೆ.

Advertisement

ಕತೆಯಲ್ಲಿ ಡಾ.ರಾಮ್ ಕುಟುಂಬಕ್ಕೆ ಹತ್ತಿರವಿರುವ ಶಾನ್ವಿ, ತನ್ನ ಮೋಹಕ ಚೆಲುವಿಂದ, ಸಖತ್ ಸ್ಮೈಲಿನಿಂದ, ತಮ್ಮ ಹಾಡು ಕುಣಿತದಿಂದ ಇಡೀ ನಿಶ್ಚಿತಾರ್ಥದ ಕಳೆಯನ್ನೇ ಇಮ್ಮಡಿಗೊಳಿಸಲಿದ್ದಾರೆ. ಇದಷ್ಟೇ ಅಲ್ಲದೆ, ಕಥೆಯ ಒಂದು ಮುಖ್ಯವಾದ ತಿರುವಿಗೆ ಕಾರಣವಾಗಲಿದ್ದಾರೆ ಶಾನ್ವಿ. ತೆರೆಯ ಮೇಲೆ ಅದ್ದೂರಿಯಾಗಿ ತಯಾರಾಗಿರುವ ವೇದಿಕೆ, ಡ್ಯಾನ್ಸ್ ಪರ್‍ಫಾರ್‍ಮೆನ್ಸ್‍ಗಳು ಮತ್ತು ಹೈಡ್ರಾಮಾ ಸನ್ನಿವೇಶಗಳೊಂದಿಗೆ “ನಂದಿನಿ” ಧಾರಾವಾಹಿಯ ಕಂತುಗಳು ನಿಮ್ಮ ಮುಂದೆ ಬರಲಿದೆ

ನಂದಿನಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8.30ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com