IKEA” ದಲ್ಲಿ ಬಿಡುಗಡೆಯಾಯಿತು “ಶಿವಾಜಿ ಸುರತ್ಕಲ್ 2” ಟೀಸರ್.

Published on

481 Views
Advertisement

ನಾಯಕ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಚಿತ್ರತಂಡದ ಒಲವಿನ ಉಡುಗೊರೆ.
ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯಲ್ಲಿರುವ ಅತೀ ದೊಡ್ಡ ಮಳಿಗೆ “IKEA”ದಲ್ಲಿ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು.

Advertisement

ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ ಚೆನ್ನಾಗಿ ಓಡುತ್ತಿರುವ ಸಂದರ್ಭದಲ್ಲೇ ಲಾಕ್ ಡೌನ್ ಆಯಿತು..ಆನಂತರದ ವಿಷಯ ಎಲ್ಲರಿಗೂ ಗೊತ್ತು. ಆಮೇಲೆ ರಮೇಶ್ ಅರವಿಂದ್ ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಚಾಲನೆ ದೊರೆಯಿತು. ಎರಡನೇ ಭಾಗ ಮಾಡುವುದು ಅಷ್ಟು ಸುಲಭವಲ್ಲ. ಈಗ ಮೊದಲ ಹಾಗಲ್ಲ. ಎಲ್ಲರ ಬಳಿ ಮೊಬೈಲ್ ಇರುವುದರಿಂದ ಸಣ್ಣಸಣ್ಣ ವಿಷಯಗಳನ್ನು ಪ್ರೇಕ್ಷಕ ಗಮನಿಸುತ್ತಿರುತ್ತಾನೆ. ಈ ರೀತಿಯ ತಪ್ಪಾಗಿದೆ ಎಂದು ಆ ತಕ್ಷಣವೇ ತಿಳಿಸುತ್ತಾನೆ. ಅದನೆಲ್ಲಾ ಗಮನಿಸಿ ಚಿತ್ರ ಮಾಡುವ ಜವಾಬ್ದಾರಿ ನಿರ್ದೇಶಕನ ಮೇಲಿರುತ್ತದೆ. “ಶಿವಾಜಿ ಸುರತ್ಕಲ್ 2” ಕಥೆ ಸಹ ಚೆನ್ನಾಗಿದೆ. ಎಲ್ಲರಿಗೂ ಮೆಚ್ಚುಗೆಯಾಗಲಿದೆ. ರಮೇಶ್ ಅರವಿಂದ್ ಸರ್ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೀವಿ. ಇದು ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.
“ಶಿವಾಜಿ ಸುರತ್ಕಲ್” ಸಿಕ್ಕ ಗೆಲುವಿನಿಂದ ಭಾಗ 2 ಮಾಡಲು ಮುಂದಾದ್ದೆವು. ಅದರಲ್ಲೂ ರಮೇಶ್ ಅರವಿಂದ್ ಅವರ ಸಹಕಾರ ಅಪಾರ ಎಂದ ನಿರ್ಮಾಪಕ ಅನೂಪ್ ಗೌಡ, ನಿರ್ದೇಶಕರು ಸೇರಿದಂತೆ ಎಲ್ಲಾ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಧನ್ಯವಾದ ತಿಳಿಸಿದರು.

Advertisement

ನನ್ನ ನಿಮ್ಮ ಸ್ನೇಹಕ್ಕೆ ಮೂರು ದಶಕಗಳಾಗಿದೆ. ಈ ಮೂವತ್ತು ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದೇನೆ. ಆದರೆ ಒಂದೇ ಪಾತ್ರವನ್ನು ಎರಡನೇ ಬಾರಿ ಮಾಡುತ್ತಿರುವುದು “ಶಿವಾಜಿ ಸುರತ್ಕಲ್ 2” ಚಿತ್ರದಲ್ಲಿ ಮಾತ್ರ. ನನಗೆ ನಿರ್ದೇಶಕ ಆಕಾಶ್ ಶ್ರೀವತ್ಸ ಹದಿನೈದು ವರ್ಷಗಳಿಂದ ಪರಿಚಯ. “ಆಕ್ಸಿಡೆಂಟ್” ಚಿತ್ರದಲ್ಲಿ ನನ್ನೊಟ್ಟಿಗೆ ಕೆಲಸವನ್ನೂ ಮಾಡಿದ್ದಾರೆ. ಅದ್ಭುತ ನಿರ್ದೇಶಕ. ಒಳ್ಳೆಯ ತಂಡ. “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು‌ ನಾಯಕ ರಮೇಶ್ ಅರವಿಂದ್.

ಎಲ್ಲಾ ಸಾಕ್ಷಿಗಿಂತ ಮನಸಾಕ್ಷಿಯೇ ದೊಡ್ಡದು ಎಂದು ಸಾರುವ “ದಿ ಲಾಸ್ಟ್ ಕೇಸ್”

Advertisement

ನಾನು “ಶಿವಾಜಿ ಸುರತ್ಕಲ್” ಚಿತ್ರದಲ್ಲಿ ರಮೇಶ್ ಸರ್ ಪತ್ನಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಹಾಗಾಗಿ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಭಾಗ ಎರಡು, ಮೂರು ಹೀಗೆ ಮಾಡುತ್ತಿರಿ ಎಂದು ಹೇಳಿದ್ದೀನಿ ಎನ್ನುತ್ತಾರೆ ನಟಿ ರಾಧಿಕಾ ನಾರಾಯಣ್.
ನನಗೆ ಕೊರೋನ ನಂತರ ಇದು ಮೊದಲ ಪತ್ರಿಕಾಗೋಷ್ಠಿ. ರಮೇಶ್ ಸರ್ ಜೊತೆ ಅಭಿನಯ ಮಾಡುವುದು ನನ್ನ ಬಹು ದಿನಗಳ ಕನಸು. ಅದು ಈಗ ಈಡೇರಿದೆ. ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ ಎಂದರು ನಟಿ ಮೇಫನ ಗಾಂವ್ಕರ್.

ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಆಚರಣೆ ಸಹ ನಡೆಯಿತು.
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ದರ್ಶನ್ – ಗುರುಪ್ರಸಾದ್ ಛಾಯಾಗ್ರಹಣ ಹಾಗೂ ಆಕಾಶ್ ಶ್ರೀವತ್ಸ ಸಂಕಲನ ಈ ಚಿತ್ರಕ್ಕಿದೆ.
.
ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ನಾಜರ್, ಆರಾಧ್ಯ, ರಮೇಶ್ ಭಟ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ವಿದ್ಯಾಮೂರ್ತಿ, ವೀಣಾ ಸುಂದರ್, ರಘು ರಮಣಕೊಪ್ಪ, ಮಧುರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com