ಸೈರನ್’ ಮೊಳಗಿಸುತ್ತಾ ಬಂತು ಎಣ್ಣೆ ಹೊಡೆಯೋ ಟೈಮಲ್ಲಿ ಸಾಂಗ್

Published on

878 Views
Advertisement

ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ!
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್‌ನ್ನು ಮಂಗ್ಲಿ ಹಾಡಿದ್ದಾರೆ. ಲಹರಿ ಯೂಟ್ಯೂಬ್‌ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಹರಿ ವೇಲು ‘ಇದು ಪ್ರವೀರ್ ಶೆಟ್ಟಿ ಅವರ ಮೊದಲ ಸಿನಿಮಾ ಆಗಿದ್ದು, ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದಾರೆ. ಹಾಡು ಚನ್ನಾಗಿ ಬಂದಿದೆ. ಜಾನಪದ ಸೊಗಡಿನ ಮೂಲದಿಂದ ಬಂದಂತ ಸಿಂಗರ್‌ಗಳು ಹಾಡಿರುವ ಗೀತೆಗಳು ಚನ್ನಾಗಿರುತ್ತವೆ. ಹಾಗೆಯೇ ಮಂಗ್ಲಿ ಕೂಡ ಜಾನಪದ ಮೂಲದಿಂದ ಬಂದವರು. ತಾಂತ್ರಿಕವಾಗಿ ಸಿನಿಮಾ ಸ್ಟ್ರಾಂಗ್ ಆಗಿ ಬಂದಿದೆ’ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬನಕಾರ ತಂಡಕ್ಕೆ ಶುಭ ಹಾರೈಸಿದರು.

Advertisement

ಅಂದಂಗೆ ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ರಾಜಾ ವೆಂಕಯ್ಯ ಕನ್ನಡ ಕಲೆತು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿರುವುದು ವಿಶೇಷ. ಇದು ಅವರು ನಿರ್ದೇಶನದ ಮೊದಲ ಕನ್ನಡ ಸಿನಿಮಾ. “ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರಕ್ಕೆ ‘ಡೆಕ್ಕನ್ ಕಿಂಗ್’ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಿರುವ ಬಿಜ್ಜು ಶಿವಾನಂದ್ ತುಂಬಾ ಸಪೋರ್ಟ ಮಾಡಿದ್ದಾರೆ. ಮೂಲತಃ ನಾನು ಸಂಕಲನಕಾರನಾಗಿ ಸಾಕಷ್ಟು ಸಿನಿಮಾಗೆ ಕೆಲಸ ಮಾಡಿದ್ದೇನೆ. ಇದೊಂದು ಇನ್ವೆಸ್ಟಿಕೇಶನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಯನರ್ಜಿ ಇರುವ ಇನ್ವೆಸ್ಟಿಕೇಶನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು.

Advertisement

ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ ‘ನಾನು ಇದರಲ್ಲಿ ಪೋಲಿಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೇನಿಂಗ್ ಸ್ಕೋಲ್‌ನಲ್ಲಿ ಟ್ರೇನಿಂಗ್ ಪಡೆದಿದ್ದು, ಈ ಚಿತ್ರದಲ್ಲಿ ಯಂಗ್ ಇನ್ವಸ್ಟಿಕೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು. ಮಲಯಾಳಂ ಮೂಲದ ನಾಯಕಿ ಲಾಸ್ಯ ‘ಇದು ನನ್ನ ಅಭಿನಯದ ಮೊದಲ ಸಿನಿಮಾ. ಚಿತ್ರತಂಡ ಒಳ್ಳೆ ಅವಕಾಶ ಕೊಟ್ಟಿದ್ದು, ಇದರಲ್ಲಿ ನಾನೂ ಕೂಡ ಪೋಲಿಸ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎನ್ನುವರು. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜ್ಜು ಶಿವಾನಂದ್ ಮಾತನಾಡಿ ‘ಈ ಚಿತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ, ನಾಗೇಶ್ ಆಚಾರ್ ಛಾಯಾಗ್ರಹಣ, ಕಲೈ ಮಾಸ್ಟರ್ ನೃತ್ಯವಿದೆ. ಚಿತ್ರವನ್ನು ಲಿಖಿತ್ ಫಿಲ್ಮಸ್‌ನ ರಮೇಶ್ ಬಾಬು ವಿತರಣೆ ಮಾಡಲಿದ್ದಾರೆ.

Advertisement

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com