ಸೈರನ್’ ಮೊಳಗಿಸುತ್ತಾ ಬಂತು ಎಣ್ಣೆ ಹೊಡೆಯೋ ಟೈಮಲ್ಲಿ ಸಾಂಗ್

Published on

858 Views
Advertisement

ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ!
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್‌ನ್ನು ಮಂಗ್ಲಿ ಹಾಡಿದ್ದಾರೆ. ಲಹರಿ ಯೂಟ್ಯೂಬ್‌ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಹರಿ ವೇಲು ‘ಇದು ಪ್ರವೀರ್ ಶೆಟ್ಟಿ ಅವರ ಮೊದಲ ಸಿನಿಮಾ ಆಗಿದ್ದು, ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದಾರೆ. ಹಾಡು ಚನ್ನಾಗಿ ಬಂದಿದೆ. ಜಾನಪದ ಸೊಗಡಿನ ಮೂಲದಿಂದ ಬಂದಂತ ಸಿಂಗರ್‌ಗಳು ಹಾಡಿರುವ ಗೀತೆಗಳು ಚನ್ನಾಗಿರುತ್ತವೆ. ಹಾಗೆಯೇ ಮಂಗ್ಲಿ ಕೂಡ ಜಾನಪದ ಮೂಲದಿಂದ ಬಂದವರು. ತಾಂತ್ರಿಕವಾಗಿ ಸಿನಿಮಾ ಸ್ಟ್ರಾಂಗ್ ಆಗಿ ಬಂದಿದೆ’ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬನಕಾರ ತಂಡಕ್ಕೆ ಶುಭ ಹಾರೈಸಿದರು.

Advertisement

ಅಂದಂಗೆ ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ರಾಜಾ ವೆಂಕಯ್ಯ ಕನ್ನಡ ಕಲೆತು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿರುವುದು ವಿಶೇಷ. ಇದು ಅವರು ನಿರ್ದೇಶನದ ಮೊದಲ ಕನ್ನಡ ಸಿನಿಮಾ. “ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರಕ್ಕೆ ‘ಡೆಕ್ಕನ್ ಕಿಂಗ್’ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಿರುವ ಬಿಜ್ಜು ಶಿವಾನಂದ್ ತುಂಬಾ ಸಪೋರ್ಟ ಮಾಡಿದ್ದಾರೆ. ಮೂಲತಃ ನಾನು ಸಂಕಲನಕಾರನಾಗಿ ಸಾಕಷ್ಟು ಸಿನಿಮಾಗೆ ಕೆಲಸ ಮಾಡಿದ್ದೇನೆ. ಇದೊಂದು ಇನ್ವೆಸ್ಟಿಕೇಶನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಯನರ್ಜಿ ಇರುವ ಇನ್ವೆಸ್ಟಿಕೇಶನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು.

Advertisement

ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ ‘ನಾನು ಇದರಲ್ಲಿ ಪೋಲಿಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೇನಿಂಗ್ ಸ್ಕೋಲ್‌ನಲ್ಲಿ ಟ್ರೇನಿಂಗ್ ಪಡೆದಿದ್ದು, ಈ ಚಿತ್ರದಲ್ಲಿ ಯಂಗ್ ಇನ್ವಸ್ಟಿಕೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು. ಮಲಯಾಳಂ ಮೂಲದ ನಾಯಕಿ ಲಾಸ್ಯ ‘ಇದು ನನ್ನ ಅಭಿನಯದ ಮೊದಲ ಸಿನಿಮಾ. ಚಿತ್ರತಂಡ ಒಳ್ಳೆ ಅವಕಾಶ ಕೊಟ್ಟಿದ್ದು, ಇದರಲ್ಲಿ ನಾನೂ ಕೂಡ ಪೋಲಿಸ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎನ್ನುವರು. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜ್ಜು ಶಿವಾನಂದ್ ಮಾತನಾಡಿ ‘ಈ ಚಿತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ, ನಾಗೇಶ್ ಆಚಾರ್ ಛಾಯಾಗ್ರಹಣ, ಕಲೈ ಮಾಸ್ಟರ್ ನೃತ್ಯವಿದೆ. ಚಿತ್ರವನ್ನು ಲಿಖಿತ್ ಫಿಲ್ಮಸ್‌ನ ರಮೇಶ್ ಬಾಬು ವಿತರಣೆ ಮಾಡಲಿದ್ದಾರೆ.

Advertisement

More Buzz

Buzz 8 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com