ವ್ಯೋಮಕಾಯ ಸಿದ್ದ ಶ್ರೀ “ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ.

Published on

536 Views
Advertisement

ಹನ್ನೆರಡನೆಯ ಶತಮಾನದ ಮಹಾಶರಣ ಶ್ರೀ ಅಲ್ಲಮಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ
“ಶ್ರೀ ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Advertisement

ನನಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನ ಕ್ಷೇತ್ರವೇ ಬೇರೆ. ಆದರೂ ನನ್ನನ್ನು ಏಕೆ ಕರೆದರೂ ಎಂದು ಯೋಚಿಸುತ್ತಿದೆ? ಅವರು ನನ್ನ ಮೇಲಿಟ್ಟಿರುವ ಪ್ರೀತಿ ಅಪಾರ. ಹಾಗಾಗಿ ಬಂದಿದ್ದೀನಿ. ಕಮರ್ಷಿಯಲ್ ಚಿತ್ರಗಳ ಪೈಪೋಟಿ ಇರುವ ಈ ಸಮಯದಲ್ಲಿ ಇಂತಹ ಕಥೆ ಆಯ್ದುಕೊಂಡಿರುವ ನಿರ್ಮಾಪಕರಿಗೆ ಮೊದಲು ಧನ್ಯವಾದ ತಿಳಿಸಬೇಕು. ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ಭಾರತಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾಪುರುಷರಾದ ಶ್ರೀಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದು ಪ್ರಮೋದ್ ಮುತಾಲಿಕ್ ಹಾರೈಸಿದರು.

Advertisement

ನಮ್ಮದು ಪುಣ್ಯಭೂಮಿ. ಹಿಂದೆ ಎಷ್ಟೋ ಜನ ನಮ್ಮ ದೇಶದ ಸಂಪತ್ತು ಲೂಟಿ ಹೊಡೆದರೂ, ಇನ್ನೂ ನಮ್ಮಲ್ಲಿ ಸಂಪತ್ತು ಇದೆ ಅಂದರೆ ಅದಕ್ಕೆ ಈ ಸಾಧು-ಸಂತರ ಆಶೀರ್ವಾದವೇ ಕಾರಣ. ಮಹಾಶರಣ ಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಒಳಿತಾಗಲಿ ಎಂದರು ನಟ ನೆನಪಿರಲಿ ಪ್ರೇಮ್.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಕೋರಿದರು.

Advertisement

ಅಲ್ಲಮಪ್ರಭುಗಳು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಬಳಿಗಾವಿಯಲ್ಲಿ. ಆದರೆ ಅವರ ಕಾರ್ಯಕ್ಷೇತ್ರ ಬಾಗಲಕೋಟೆ ಬಳಿಯ ತೇರಾದಾಳ. ಚಾಮರಸ ಕವಿ ಬರೆದಿರುವ ಪ್ರಭುಲಿಂಗ ಲೀಲೆ ಆದರಿಸಿ ಈ ಚಿತ್ರ ಮಾಡಿದ್ದೀವಿ.
ಹನ್ನೆರಡನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಮಾಡಿದ ಸಾಧನೆಗಳು ಅನಂತ. ಅನುಭವ ಮಂಟಪದ ಮೊದಲ ಆಧ್ಯಕ್ಷರು ಅವರು. ಅಂತಹ ಮಹಾಶರಣರ ಬಗ್ಗೆ ಸಿನಿಮಾ ಮಾಡಿರುವುದು ನಮ್ಮ ಪುಣ್ಯ ಎಂದು ತಿಳಿಸಿದ ನಿರ್ಮಾಪಕ ಮಾಧವಾನಂದ ಅವರು, ಮಹಾವೀರ ಪ್ರಭು ಅವರು ನಿರ್ಮಾಣಕ್ಕೆ ನನಗೆ ಜೊತೆಯಾಗಿದ್ದಾರೆ ಎಂದರು.

ನಾನು ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹನ್ನೆರಡನೆಯ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಗೆ ತರುವುದು ಅಷ್ಟು ಸುಲಭವಲ್ಲ. ಆ ಪ್ರಯತ್ನ ಮಾಡಿದ್ದೇವೆ. ತೇರದಾಳ, ಬನವಾಸಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಿದ್ದೇವೆ ಎನ್ನುತ್ತಾರೆ ನಿರ್ದೇಶಕ ಶರಣ್ ಗದ್ವಾಲ್.

Advertisement

ಸಂಕಲನಕಾರ‌ ಕೆಂಪರಾಜ್, ಛಾಯಾಗ್ರಾಹಕ ಗಿರಿ ಅವರು ಈ ಚಿತ್ರದ ಕುರಿತು ಮಾತನಾಡಿದರು.

ಸಚಿನ್ ಸುವರ್ಣ, ನೀನಾಸಂ ಅಶ್ವಥ್, ರಮೇಶ್ ಪಂಡಿತ್, ಶೃಂಗೇರಿ ರಾಮಣ್ಣ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com