ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಆಕೃತಿ” ಆಗಸ್ಟ್ 24ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 9.30ಕ್ಕೆ

Published on

580 Views
Advertisement

“ಆಕೃತಿ” ಉದಯಟಿವಿಯಲ್ಲಿ ಆಗಸ್ಟ್ 24ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸದಾಗಿ ಪ್ರಾರಂಭವಾಗುತ್ತಿರವ ಹೊಚ್ಚ ಹೊಸ ಧಾರವಾಹಿ. ಕನ್ನಡದ ಮೊದಲ ಸ್ಯಾಟಿಲೇಟ್ ವಾಹಿನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉದಯ ಟಿವಿ ಕಾಲಕ್ಕೆ ತಕ್ಕಂತೆ ಕ್ರಿಯೇಟಿವಿಟಿ ಮತ್ತು ಟೆಕ್ನಾಲಜಿಯಲ್ಲಿ ಹೆಸರುವಾಸಿಯಾಗಿ ಈಗ ಮತ್ತೊಂದು ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಕೌಟಂಬಿಕದ ಜೊತೆಗೆ ಹಾರಾರ್‍ಗೆ ಸಂಬಂಧ ಪಟ್ಟ ಕಥೆಯನ್ನು ಹೆಣೆದು ಮತ್ತಷ್ಟು ಮನರಂಜಿಸಲು ಬರುತ್ತಿರುವ ಕಥೆಯೇ ಆಕೃತಿ.

ದಿವ್ಯ ಮಹಾತ್ವಾಕಾಂಕ್ಷಿ ಹೆಣ್ಣು. ಅವಳ ತಂದೆ ಪ್ರಜ್ವಲ್, ತಾಯಿ ಚೈತ್ರ ಮತ್ತು ತಮ್ಮ ಸುಜಯ್. ಇವರ ಕುಟುಂಬ ಚಿಕ್ಕದಾಗಿದ್ದು, ಇವರ ಮನೆಯಲ್ಲಿ ಸಂತೋಷ ಮನೆಮಾಡಿದೆ. ದಿವ್ಯಾಳ ಕುಟುಂಬ ಸಕಲೇಶಪುರದಲ್ಲಿ ಒಂದು ಹಳೆ ಫಾರ್ಮ್ ಹೌಸ್ ಕೊಂಡುಕೊಳ್ಳುತ್ತಾರೆ. ಆ ಮನೆಯ ಅಂಗಳದಲ್ಲಿ ಒಂದು ಮರ, ಆ ಮರದಲ್ಲಿ ಒಂದು ಆಕೃತಿ, ಅದಕ್ಕೆ ಒಂದು ಹಿನ್ನಲೆ ಇದೆ. ಆ ಆಕೃತಿಯಿಂದ ಸಂತೋಷತುಂಬಿದ್ದ ಕುಟುಂಬ ನಾನಾ ವಿಚಿತ್ರ ಘಟನೆಗಳನ್ನು ಎದುರಿಸುತ್ತಾ ಹಲವಾರು ಅನಿರೀಕ್ಷಿತ ತಿರುವುಗಳಿಗೆ ಗುರಿಯಾಗುತ್ತದೆ. ಇದು ಕಾಕತಾಳಿಯ ಅಲ್ಲ. ಇದಕ್ಕೆ ಕಾರಣ ಇದೆ. ಆ ಕಾರಣ ಏನು? ಆ ಆಕೃತಿಯ ಹಿನ್ನಲೆ ಏನು? ಇವರ ಕುಟುಂಬಕ್ಕೂ ಮನೆಗೂ ಏನೂ ಸಂಬಂಧ? ದಿವ್ಯಾ ಅಪಾಯಗಳಿಂದ ತನ್ನ ಕುಟುಂಬವನ್ನು ಹೇಗೆ ಕಾಪಾಡುತ್ತಾಳೆ ಎಂಬುದೇ “ಆಕೃತಿ” ಕಥೆಯ ಹಂದರ.

ಇದೊಂದು ವಿಭಿನ್ನ ಕಥೆಯಾಗಿದ್ದು, ಇದುವರೆಗೂ ಕಿರುತೆರೆಯಲ್ಲಿ ನೋಡಿರದಂತಹ ಚಿತ್ರಕಥೆಯ ಶೈಲಿ ಕಿರುತೆರೆ ಲೋಕಕ್ಕೆ ಹೊಸದಾಗಿದೆ ಅμÉ್ಟೀ ಅಲ್ಲದೆ ಸಕಲೇಶಪುರ ಸುತ್ತಮುತ್ತ ಪ್ರದೇಶಗಳಲ್ಲಿ ಅದ್ಭುತವಾಗಿ ಚಿತ್ರೀಕರಿಸಲಾಗಿದೆ. ಈ ಧಾರಾವಾಹಿಗೆ ಹೊಸಪರಿಚಯವಾಗಿ ತನ್ವಿರಾವ್, ನೇತ್ರಾವತಿ ಜಾದವ್, ಬಾಬಿ, ನಟಿಸುತ್ತಿದ್ದಾರೆ. ಕಿರುತೆರೆ ನಟ ಪವನ್, ಪ್ರಖ್ಯಾತ್, ‌ತನುಜ, ಇವರುಗಳು ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದು ಇವರ ಜೊತೆ ಪ್ರಮುಖ ಪಾತ್ರದಲ್ಲಿ ಶ್ರೀಧರ್, ಉμÁ ಭಂಡಾರಿ ಹೀಗೆ ಹಲವಾರು ಜನಪ್ರಿಯ ತಾರೆಗಳ ಸಮಾಗಮ ಮಾಡಲಾಗಿದೆ.
ಈ ಧಾರವಾಹಿಯನ್ನು ಪ್ರಖ್ಯಾತ ಸಿನಿಮಾ ನಿರ್ದೇಶಕರಾದ ಕೆ.ಎಂ. ಚೈತನ್ಯ ನಿರ್ಮಾಣ ಮಾಡುತ್ತಿದ್ದಾರೆ ಅವರಜೊತೆಯಾಗಿ ಹರಿದಾಸ್.ಪಿ ಕೆ.ಜಿ.ಎಫ್ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಛಾಯಾಗ್ರಹಣ ಮತ್ತು ನಿರ್ದೇಶನ – ಎಂ. ಕುಮಾರ್, ಕಥೆ ಮತ್ತು ಚಿತ್ರಕಥೆ – ಸಿಧ್ಧಾರ್ಥ, ಸಂಭಾಷಣೆ – ಮೃಗಶಿರ ಶ್ರೀಕಾಂತ್, ಶೀರ್ಷಿಕೆಗೀತೆ–ಗುರುಕಿರಣ್. ಸಾಹಿತ್ಯ–ಕವಿರಾಜ್. ಗಾಯಕರು–ಅನುರಾಧಾಭಟ್, ಸಂಕಲನ–ಗುರುರಾಜ್ ಬಿ ಕೆ ಹೀಗೆ ಹಲವಾರು ನಿಪುಣರ ತಂಡ ಈ ಧಾರಾವಾಹಿಯಲ್ಲಿದೆ.
“ಆಕೃತಿ” ಧಾರಾವಾಹಿಯು ಇದೇ ಅಗಷ್ಟ್ 24ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 9.30ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com