ಉದಯ ಟಿವಿಯ ಹೊಸ ಧಾರಾವಾಹಿ “ಕಾವ್ಯಾಂಜಲಿ”

Published on

579 Views
Advertisement

ಉದಯ ಟಿವಿಯ ಹೊಸ ಧಾರಾವಾಹಿ “ಕಾವ್ಯಾಂಜಲಿ”
ಆಗಸ್ಟ್ 3ರಿಂದ ಸೊಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ

ಉದಯ ಟಿವಿ ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡಲು ತಯಾರಾಗಿದೆ. ನಂದಿನಿ, ಕಸ್ತೂರಿ ನಿವಾಸ, ಸೇವಂತಿ, ಮನಸಾರೆಯಂತಹ ಕೌಟುಂಬಿಕ ಧಾರವಾಹಿಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ಈಗ ಒಂದು ನವಿರಾದ ಪ್ರೇಮ ಕಥಾಹಂದರವಿರುವ ಹೊಸಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ. ಅದೇ ಕಾವ್ಯಾಂಜಲಿ. ಕಾವ್ಯಾಂಜಲಿ ಹೆಸರು ಕೇಳಿದಾಕ್ಷಣ ವೀಕ್ಷಕರಿಗೆ ಕುತೂಹಲ ಹುಟ್ಟುವುದಂತೂ ಗ್ಯಾರಂಟಿ, ಅದರಲ್ಲೂ ಅತಿಹೆಚ್ಚು ಜನಪ್ರಿಯತೆ ಮತ್ತು ಮೆಚ್ಚುಗೆಗೆ ಪಾತ್ರವಾದ ಧಾರಾವಾಹಿ ಅಂದ್ರೆ ಸುಳ್ಳಲ್ಲ.

Advertisement

ಈ ಕಾವ್ಯಾಂಜಲಿ ಧಾರಾವಾಹಿಯು ಒಂದು ಪರಿಪೂರ್ಣ ಮನರಂಜನೆಯೆ ಜೊತೆಗೆ ಪರಿಶುದ್ದ ಪ್ರೀತಿಯ ಸವಿಯನ್ನು ನಿಮ್ಮ ಮುಂದಿಡಲಿದೆ. ಹೊಸ ಕಲ್ಪನೆಯ ತ್ರಿಕೋನ ಪ್ರೇಮಕಥೆಗೆ ಮ್ಯೂಸಿಕ್‍ನ ಮ್ಯಾಜಿಕ್ ಟಚ್ ನೀಡಿ ಮೋಡಿ ಮಾಡಲು ಬರ್ತಿದೆ ಅಕ್ಕ ತಂಗಿ ಬಾಂಧವ್ಯದ ಕಥೆ ಕಾವ್ಯಾಂಜಲಿ. ಜಗತ್ತಿನಲ್ಲಿ ಪ್ರೀತಿಗೆ ಅತಿಹೆಚ್ಚು ಮಹತ್ವವಿದೆ, ಆದ್ರೆ ಪ್ರಾಣ ಉಳಿಸೊ ಅಮೃತದಂತಹ ಪ್ರೀತಿ ಕೆಲವೊಮ್ಮೆ ಉಸಿರು ಕಟ್ಟಿಸುತ್ತೆ. ಇಂತಹದೇ ಪ್ರೀತಿಯಲ್ಲಿ ಉಸಿರು ಕಟ್ಟಿರೊ ನಾಯಕನಿಗೆ ನಿಷ್ಕಲ್ಮಶ ಪ್ರೀತಿಯ ತಂಪೆರೆಯೋ ನಾಯಕಿ ಹೇಗೆ ಜೊತೆಯಾಗ್ತಾಳೆ ಅನ್ನೋದನ್ನ ಕಾದು ನೋಡಬೇಕಾಗಿದೆ.

ಲಾಕ್ ಡೌನ್ ನಂತರ ಹೊಸ ಹುರುಪಿನಿಂದ ಶ್ಯಾಕ್ ಸ್ಟುಡಿಯೊ ಸಂಸ್ಥೆಯಡಿ ಶಂಕರ್ ವೆಂಕಟರಾಮನ್ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಅನುಭವಿ ನಿರ್ದೇಶಕ ಆದರ್ಶ್ ಹೆಗಡೆ ಹೊತ್ತುಕೊಂಡಿದ್ದಾರೆ. ಈ ಹಿಂದೆ ಹಿಟ್ ಧಾರಾವಾಹಿಗಳಲ್ಲಿ ತಮ್ಮ ಕ್ಯಾಮರಾ ಕೈ ಚಳಕ ತೋರಿದ ನಿಪುಣ ಛಾಯಾಗ್ರಾಹಕ ರುದ್ರಮುನಿ ಬೆಳೆಗೆರೆ ಈ ತಂಡದ ಮತ್ತೊಬ್ಬ ಸದಸ್ಯ. ಇನ್ನಷ್ಟು ನುರಿತ ತಂತ್ರಜ್ಞರನ್ನು ಒಳಗೊಂಡಿರುವ ಕಾವ್ಯಾಂಜಲಿ ತಂಡವು ಜಬರ್ದಸ್ತ್ ಮನರಂಜನೆ ನೀಡುವ ಭರವಸೆಯಲ್ಲಿದೆ.

Advertisement

ಕಾವ್ಯಾಂಜಲಿಯ ಮತ್ತೊಂದು ವಿಶೇಷತೆ ಏನಂದರೆ ಅಂಜಲಿ ಪಾತ್ರದ ಮೂಲಕ ಸುಷ್ಮಿತ ಅನ್ನೋ ಹೊಸ ಪ್ರತಿಭೆ ಕನ್ನಡ ಕಿರುತೆರೆಗೆ ಪರಿಚಯವಾಗ್ತಿದೆ. ವಿದ್ಯಾಶ್ರಿ ಜಯರಾಂ ಕಾವ್ಯ ಪಾತ್ರ ನಿರ್ವಹಿಸುತ್ತಿದ್ದು, ಪವನ್ ರವೀಂದ್ರ ಇವರಿಬ್ಬರ ನಡುವಿನ ಕೇಂದ್ರಬಿಂದು. ಕಣ್ಮಣಿ ಖ್ಯಾತಿಯ ದರ್ಶಕ್ ಗೌಡ ಕೂಡ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಿಥುನ್ ತೇಜಸ್ವಿ, ರವಿ ಭಟ್, ಮಹಾಲಕ್ಷ್ಮಿ, ಮರಿನಾ ತಾರ, ರಾಮಸ್ವಾಮಿ, ನಿಸರ್ಗ, ಸಿಂಚನಾ ಕಾವ್ಯಾಂಜಲಿ ಧಾರಾವಾಹಿಯ ತಾರಬಳಗದಲ್ಲಿದ್ದಾರೆ.
ಮತ್ತೊಂದು ಪ್ರಮುಖ ಅಂಶ ಎಂದರೆ ಹಿರಿಯ ಕಲಾವಿದ ಶಂಕರ್ ಅಶ್ವಥ್ ಅವರು ವಿಶೇಷ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಕೋವಿಡ್ 19ಗೆ ಸಂಬಂಧಿಸಿದ ಹಾಗೆ ಶೂಟಿಂಗ ಸಮಯದಲ್ಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
“ಬದಲಾಗಿದೆ ಸಮಯ, ಬದಲಾಗ್ತಿದೆ ಉದಯ” ಅನ್ನೊ ಅಡಿಬರಹದೊಂದಿಗೆ ಪ್ರಸಾರವಾಗ್ತಿರೋ ಮೊದಲ ಹೊಸ ಧಾರಾವಾಹಿ ಅನ್ನೊ ಹೆಗ್ಗಳಿಕೆಗೆ ಕಾವ್ಯಾಂಜಲಿ ಪಾತ್ರವಾಗ್ತಿದೆ.
ಇದೇ ಆಗಸ್ಟ್ 3ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ಉದಯ ಟಿವಿಯಲ್ಲಿ ಕಾವ್ಯಾಂಜಲಿ ತನ್ನ ಓಟ ಶುರು ಮಾಡಲಿದ್ದು ಪ್ರೇಕ್ಷಕರ ಮನಗೆಲ್ಲುವ ಭರವಸೆಯಲ್ಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com