ಉದಯ ಟಿವಿಯ ಹೊಸ ಧಾರಾವಾಹಿ “ಕಾವ್ಯಾಂಜಲಿ”

Published on

569 Views
Advertisement

ಉದಯ ಟಿವಿಯ ಹೊಸ ಧಾರಾವಾಹಿ “ಕಾವ್ಯಾಂಜಲಿ”
ಆಗಸ್ಟ್ 3ರಿಂದ ಸೊಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ

ಉದಯ ಟಿವಿ ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡಲು ತಯಾರಾಗಿದೆ. ನಂದಿನಿ, ಕಸ್ತೂರಿ ನಿವಾಸ, ಸೇವಂತಿ, ಮನಸಾರೆಯಂತಹ ಕೌಟುಂಬಿಕ ಧಾರವಾಹಿಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ಈಗ ಒಂದು ನವಿರಾದ ಪ್ರೇಮ ಕಥಾಹಂದರವಿರುವ ಹೊಸಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ. ಅದೇ ಕಾವ್ಯಾಂಜಲಿ. ಕಾವ್ಯಾಂಜಲಿ ಹೆಸರು ಕೇಳಿದಾಕ್ಷಣ ವೀಕ್ಷಕರಿಗೆ ಕುತೂಹಲ ಹುಟ್ಟುವುದಂತೂ ಗ್ಯಾರಂಟಿ, ಅದರಲ್ಲೂ ಅತಿಹೆಚ್ಚು ಜನಪ್ರಿಯತೆ ಮತ್ತು ಮೆಚ್ಚುಗೆಗೆ ಪಾತ್ರವಾದ ಧಾರಾವಾಹಿ ಅಂದ್ರೆ ಸುಳ್ಳಲ್ಲ.

Advertisement

ಈ ಕಾವ್ಯಾಂಜಲಿ ಧಾರಾವಾಹಿಯು ಒಂದು ಪರಿಪೂರ್ಣ ಮನರಂಜನೆಯೆ ಜೊತೆಗೆ ಪರಿಶುದ್ದ ಪ್ರೀತಿಯ ಸವಿಯನ್ನು ನಿಮ್ಮ ಮುಂದಿಡಲಿದೆ. ಹೊಸ ಕಲ್ಪನೆಯ ತ್ರಿಕೋನ ಪ್ರೇಮಕಥೆಗೆ ಮ್ಯೂಸಿಕ್‍ನ ಮ್ಯಾಜಿಕ್ ಟಚ್ ನೀಡಿ ಮೋಡಿ ಮಾಡಲು ಬರ್ತಿದೆ ಅಕ್ಕ ತಂಗಿ ಬಾಂಧವ್ಯದ ಕಥೆ ಕಾವ್ಯಾಂಜಲಿ. ಜಗತ್ತಿನಲ್ಲಿ ಪ್ರೀತಿಗೆ ಅತಿಹೆಚ್ಚು ಮಹತ್ವವಿದೆ, ಆದ್ರೆ ಪ್ರಾಣ ಉಳಿಸೊ ಅಮೃತದಂತಹ ಪ್ರೀತಿ ಕೆಲವೊಮ್ಮೆ ಉಸಿರು ಕಟ್ಟಿಸುತ್ತೆ. ಇಂತಹದೇ ಪ್ರೀತಿಯಲ್ಲಿ ಉಸಿರು ಕಟ್ಟಿರೊ ನಾಯಕನಿಗೆ ನಿಷ್ಕಲ್ಮಶ ಪ್ರೀತಿಯ ತಂಪೆರೆಯೋ ನಾಯಕಿ ಹೇಗೆ ಜೊತೆಯಾಗ್ತಾಳೆ ಅನ್ನೋದನ್ನ ಕಾದು ನೋಡಬೇಕಾಗಿದೆ.

ಲಾಕ್ ಡೌನ್ ನಂತರ ಹೊಸ ಹುರುಪಿನಿಂದ ಶ್ಯಾಕ್ ಸ್ಟುಡಿಯೊ ಸಂಸ್ಥೆಯಡಿ ಶಂಕರ್ ವೆಂಕಟರಾಮನ್ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಅನುಭವಿ ನಿರ್ದೇಶಕ ಆದರ್ಶ್ ಹೆಗಡೆ ಹೊತ್ತುಕೊಂಡಿದ್ದಾರೆ. ಈ ಹಿಂದೆ ಹಿಟ್ ಧಾರಾವಾಹಿಗಳಲ್ಲಿ ತಮ್ಮ ಕ್ಯಾಮರಾ ಕೈ ಚಳಕ ತೋರಿದ ನಿಪುಣ ಛಾಯಾಗ್ರಾಹಕ ರುದ್ರಮುನಿ ಬೆಳೆಗೆರೆ ಈ ತಂಡದ ಮತ್ತೊಬ್ಬ ಸದಸ್ಯ. ಇನ್ನಷ್ಟು ನುರಿತ ತಂತ್ರಜ್ಞರನ್ನು ಒಳಗೊಂಡಿರುವ ಕಾವ್ಯಾಂಜಲಿ ತಂಡವು ಜಬರ್ದಸ್ತ್ ಮನರಂಜನೆ ನೀಡುವ ಭರವಸೆಯಲ್ಲಿದೆ.

Advertisement

ಕಾವ್ಯಾಂಜಲಿಯ ಮತ್ತೊಂದು ವಿಶೇಷತೆ ಏನಂದರೆ ಅಂಜಲಿ ಪಾತ್ರದ ಮೂಲಕ ಸುಷ್ಮಿತ ಅನ್ನೋ ಹೊಸ ಪ್ರತಿಭೆ ಕನ್ನಡ ಕಿರುತೆರೆಗೆ ಪರಿಚಯವಾಗ್ತಿದೆ. ವಿದ್ಯಾಶ್ರಿ ಜಯರಾಂ ಕಾವ್ಯ ಪಾತ್ರ ನಿರ್ವಹಿಸುತ್ತಿದ್ದು, ಪವನ್ ರವೀಂದ್ರ ಇವರಿಬ್ಬರ ನಡುವಿನ ಕೇಂದ್ರಬಿಂದು. ಕಣ್ಮಣಿ ಖ್ಯಾತಿಯ ದರ್ಶಕ್ ಗೌಡ ಕೂಡ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಿಥುನ್ ತೇಜಸ್ವಿ, ರವಿ ಭಟ್, ಮಹಾಲಕ್ಷ್ಮಿ, ಮರಿನಾ ತಾರ, ರಾಮಸ್ವಾಮಿ, ನಿಸರ್ಗ, ಸಿಂಚನಾ ಕಾವ್ಯಾಂಜಲಿ ಧಾರಾವಾಹಿಯ ತಾರಬಳಗದಲ್ಲಿದ್ದಾರೆ.
ಮತ್ತೊಂದು ಪ್ರಮುಖ ಅಂಶ ಎಂದರೆ ಹಿರಿಯ ಕಲಾವಿದ ಶಂಕರ್ ಅಶ್ವಥ್ ಅವರು ವಿಶೇಷ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಕೋವಿಡ್ 19ಗೆ ಸಂಬಂಧಿಸಿದ ಹಾಗೆ ಶೂಟಿಂಗ ಸಮಯದಲ್ಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
“ಬದಲಾಗಿದೆ ಸಮಯ, ಬದಲಾಗ್ತಿದೆ ಉದಯ” ಅನ್ನೊ ಅಡಿಬರಹದೊಂದಿಗೆ ಪ್ರಸಾರವಾಗ್ತಿರೋ ಮೊದಲ ಹೊಸ ಧಾರಾವಾಹಿ ಅನ್ನೊ ಹೆಗ್ಗಳಿಕೆಗೆ ಕಾವ್ಯಾಂಜಲಿ ಪಾತ್ರವಾಗ್ತಿದೆ.
ಇದೇ ಆಗಸ್ಟ್ 3ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ಉದಯ ಟಿವಿಯಲ್ಲಿ ಕಾವ್ಯಾಂಜಲಿ ತನ್ನ ಓಟ ಶುರು ಮಾಡಲಿದ್ದು ಪ್ರೇಕ್ಷಕರ ಮನಗೆಲ್ಲುವ ಭರವಸೆಯಲ್ಲಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com