ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ದೇವಯಾನಿ” ನವೆಂಬರ್ 12ರಿಂದ ಸಂಜೆ 7.00ಕ್ಕೆ

Published on

586 Views
Advertisement

ಕರ್ನಾಟಕದ ಮನೆ ಮನದ ಮನರಂಜನಾ ವಾಹಿನಿಯಾದ ಉದಯ ಟಿವಿ ತನ್ನ ಅಭೂತ ಪೂರ್ವ ಕಾರ್ಯಕ್ರಮಗಳಿಂದ ವೀಕ್ಷಕರ ಮನೆ ಮಾತಾಗಿದೆ. ಉದಯ ಟಿವಿ ದೀಪಾವಳಿಯ ಕೊಡುಗೆಯಾಗಿ ಹೊಸ ಧಾರಾವಾಹಿಯೊಂದನ್ನು ಪ್ರಾರಂಭಿಸಲಿದೆ. ಸಸ್ಪೇನ್ಸ್, ಥ್ರಿಲ್ಲರ್ ಹಾರರ್ ಮತ್ತು ಪ್ರೇಮಕಥೆಯನ್ನು ಒಳಗೊಂಡ ಹೊಸ ಕಥೆ “ದೇವಯಾನಿ” ಇದೇ ನವೆಂಬರ್ 12 ರಿಂದ ಸೋಮವಾರದಿಂದ ಶುಕ್ರವಾರ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ದೇವಯಾನಿ 8 ವರ್ಷದಿಂದ ಶ್ರೀವತ್ಸನನ್ನ ಪ್ರೀತಿಸಿರುತ್ತಾಳೆ. ಅವರ ಪ್ರೀತಿಗೆ ಎರಡು ಮನೆಯವರಿಂದ ವಿರೋಧವಿದೆ. 8 ವರ್ಷದ ನಂತರ ಅವರ ಮದುವೆಗೆ ಎರಡು ಕುಟುಂಬ ಒಪ್ಪಿಗೆ ಕೊಟ್ಟಿದೆ. ಹೀಗೆ ಮದುವೆ ಮಂಟಪವರೆಗೂ ಬಂದಾಗ ಅಲ್ಲಿಗೆ ಬರುವ ಪವಾಡ ಪುರುಷರೊಬ್ಬರು ಈ ಮದುವೆ ನಡೆದದ್ದೇ ಆದಲ್ಲಿ ದೇವಯಾನಿ ಸಾವಾಗುತ್ತದೆ ಎಂದು ಹೇಳುತ್ತಾರೆ.

Advertisement

ಅದಕ್ಕೆ ಪೂರಕವಾಗಿ, ಮದುವೆ ನಿಲ್ಲಿಸಲು ಪ್ರೇಮಿಗಳ ಸುತ್ತ ಹತ್ತಾರು ಶತ್ರುಗಳು ಸೇರುತ್ತಾರೆ. ದೇವಯಾನಿ ಮತ್ತು ಶ್ರೀವತ್ಸರನ್ನು ಕೊಲ್ಲುವ ಕುತಂತ್ರ ಮಾಡುತ್ತಾರೆ. ಈ ಎಲ್ಲಾ ಅಡ್ಡಿ ಆತಂಕಗಳಿಂದ ಪಾರಾಗುವ ಈ ಜೋಡಿ ಮದುವೆಯಾಗುತ್ತಾರೆ. ಮದುವೆ ಆದ ನಂತರವೂ ದೇವಯಾನಿ ಕಷ್ಟ ನಿಲ್ಲಲ್ಲ. ಶತಾಯ ಗತಾಯ ಶ್ರೀವತ್ಸ ದೇವಯಾನಿಂiÀi ಜೋಡಿಯನ್ನ ಬೇರ್ಪಡಿಸಲೇ ಬೇಕೆನ್ನುವ ಕೆಲ ಹಿತ ಶತ್ರುಗಳು.
ಸಾವನ್ನು ಗೆದ್ದು ಮತ್ತೆ ನಿನ್ನನ್ನ ಸೇರುವೆ ಎನ್ನುವ ದೇವಯಾನಿ ಕಥೆ ಏನಾಗುತ್ತೆ..? ದೇವಯಾನಿ ಸಾವನ್ನು ಹೇಗೆ ಗೆಲ್ಲುತ್ತಾಳೆ, ಶತ್ರುಗಳಿಂದ ಗಂಡನನ್ನ ಹೇಗೆ ರಕ್ಷಣೆ ಮಾಡ್ತಾಳೆ? ಎನ್ನುವ ಕುತೂಹಲ ಅಂಶದಿಂದ ಪ್ರತಿಯೊಂದು ಸಂಚಿಕೆಯಲ್ಲೂ ತಿರುವನ್ನು ಹೊಂದಿರುವ ಅಪರೂಪದ ಧಾರಾವಾಹಿ ದೇವಯಾನಿ.

ದೇವಯಾನಿ ಧಾರಾವಾಹಿಯನ್ನು ಸುಂದರೇಶ್ ಅವರು ಓಂ ಸಾಯಿರಾಂ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.ಆಕ್ಷನ್ ಕಟ್ ಜೊತೆಗೆ ಛಾಯಾಗ್ರಹಣ ನಿರ್ವಹಣೆಯನ್ನು ನಿರ್ದೇಶಕ ಜೊತೆಗೆ ಛಾಯಾಗ್ರಾಹಕ ಎಂ.ಕುಮಾರ್ ವಹಿಸಿಕೊಂಡಿದ್ದಾರೆ. ಕಥೆಯನ್ನು ಖ್ಯಾತ ಕಥೆಗಾರರಾದ ಗಿರಿಜಾ ಮಂಜುನಾಥ್ ಅವರು ಬರೆಯುತ್ತಿದ್ದು,ಸಂಭಾಷಣೆಯನ್ನು ಗೌತಮ್ ವಖಾರಿ ಬರೆಯುತ್ತಿದ್ದಾರೆ. ಮಾಮೂಲು ಅತ್ತೆ ಸೊಸೆಯ ಕಾಟ ಕಿರುಕುಳ ಕಥೆಯಿಂದ ಹೊರತಾಗಿರುವ ಈ ಹೊಸ ಧಾರಾವಾಹಿ ಪ್ರತಿಯೊಂದು ಕಂತಿನಲ್ಲೂ ಕುತೂಹಲ ತಿರುವುಗಳನ್ನು ನೀಡುತ್ತಾ ಮನರಂಜಿಸುವುದರಲ್ಲಿ ಸಂಶಯವಿಲ್ಲ ಎಂದು ತಂಡದವರು ಹೇಳುತ್ತಾರೆ.

Advertisement

“ದೇವಯಾನಿ” ಇದೇ ನವಂಬರ್ 12 ರಿಂದ ಸೋಮವಾರದಿಂದ ಶುಕ್ರವಾರ ಸಂಜೆ 7 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com