ಗ್ರಾಹಕರ ಮನಗೆದ್ದ ವನಸ್ಥಾ ಆಹಾರ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

Published on

548 Views
Advertisement

ಕಲಬೆರಕೆ ಹಾಗೂ ರಾಸಾಯನಿಕ ಮುಕ್ತ, ಕೃತಕ ಬಣ್ಣ, ಸಂರಕ್ಷಕಗಳನ್ನು ಬಳಸದೆ; ಗ್ರಾಹಕರ ಆರೋಗ್ಯದ ಏಕನಿಷ್ಠ ಕಾಳಜಿಯೊಂದಿಗೆ ನೈಸರ್ಗಿಕವಾಗಿ ಆಹಾರ ಪದಾರ್ಥಗಳು ಹಾಗೂ ಮಸಾಲೆಗಳನ್ನು ಉತ್ಪಾದಿಸುವ ಉದ್ದೇಶದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಕರಾವಳಿ ಸೊಗಡಿನ ಸಂಸ್ಥೆಯೇ ವನಸ್ಥಾ ಆಗ್ರೋ ಫುಡ್ ಪ್ರೈ.ಲಿ..ಈ ಸಂಸ್ಥೆಯು 19.12.2020 ರ ಶನಿವಾರ ಮಧ್ಯಾಹ್ನ ಗಂಟೆ 12.00 ಕ್ಕೆ ಬೆಂಗಳೂರು ಮಹಾನಗರದ ರಾಜಭವನ ರಸ್ತೆ, ವಸಂತನಗರದಲ್ಲಿರುವ “ದ ಕ್ಯಾಪಿಟಲ್” ಹೋಟೇಲಿನಲ್ಲಿ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭವನ್ನು ಏರ್ಪಡಿಸಿತ್ತು.

Advertisement

ನಾಡಿನಾದ್ಯಂತ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವನಸ್ಥಾ ಉತ್ಪನ್ನಗಳನ್ನು ಒದಗಿಸುವ ದೃಷ್ಟಿಯಿಂದ ಆಹಾರ – ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರುವ ಬಿಗ್_ಬಾಸ್ ಸೀಝನ್-7ರ ವಿಜೇತ ಹಾಗೂ ಉದಯೋನ್ಮುಖ ಚಲನಚಿತ್ರ ನಟ ಶ್ರೀಯುತ ಶೈನ್ ಶೆಟ್ಟಿ ಅವರನ್ನು ‘’ವನಸ್ಥಾ’’ ಉತ್ಪನ್ನಗಳ ರಾಯಭಾರಿಯಾಗಿ ನಿಯೋಜಿಸಲಾಗಿದೆ. ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ನಟ ಶೈನ್‌ ಶೆಟ್ಟಿಯವರು,ನಂತರ ಅಧಿಕೃತವಾಗಿ ಆಹಾರೋತ್ಪನ್ನಗಳನ್ನು ಬಿಡುಗಡೆ ಮಾಡಿದರು..ಅಲ್ಲದೆ ರಾಯಭಾರಿಯಾ ಸಂಸ್ಥೆಯೊಂದಿಗಿನ ಒಪ್ಪಂದಕ್ಕೆ ಇಂದು ಸಹಿ ಹಾಕಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರೀಯುತ ಶೈನ್ ಶೆಟ್ಟಿಯವರೊಂದಿಗೆ ಕಿರುತೆರೆ ನಟಿಯರಾದ ಭೂಮಿ ಶೆಟ್ಟಿ ಮತ್ತು ಚಂದನ ಅವರೂ ಭಾಗವಹಿಸಿದ್ದಾರೆ.

Advertisement

ಅವಧೂತ ಶ್ರೀ ಶ್ರೀ ವಿನಯ ಗುರೂಜಿಯವರು ಈ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿದ್ದು, “ಫಾಸ್ಟ್‌ ಫುಡ್‌ ಲೈಪ್‌ ನಲ್ಲಿ ಮರೆಯಾಗುತ್ತಿರುವ ಪಾರಂಪರಿಕ ರುಚಿಯನ್ನು ಮತ್ತೆ ಜನರ ಮುಂದೆ ತರುವ ವನಸ್ಥಾ ಸಂಸ್ಥೆಯ ಪ್ರಯತ್ನ ಮೆಚ್ಚುವಂಥದ್ದು. ಸಂಸ್ಥೆಯು ರಾಸಾಯನಿಕ ಮುಕ್ತವಾದಂತಹ ಅನೇಕ ಬಗೆ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವುದರಿಂದ ಸಮಾಜದ ಆರೋಗ್ಯದ ದೃಷ್ಟಿಯಿಂದ ಉತ್ತಮ ಕೆಲಸವಾಗಿದೆ” ಎಂದು ಮೆಚ್ಚುಗೆಯ ಮಅಉಗಳನ್ನಾಡಿದ್ದಾರೆ. ಇನ್ನು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ|| ಬೇಳೂರು ರಾಘವೇಂದ್ರ ಶೆಟ್ಟಿ (ಅಧ್ಯಕ್ಷರು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ) ಅವರು ಭಾಗವಹಿಸಿದ್ದಾರೆ.

Advertisement

ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಂಸ್ಥಾಪಕ ಶ್ರೀಯುತ ನಟರಾಜ್ ಕಲ್ಯಾಣಿ ಮತ್ತು ನಿರ್ದೇಶಕರಾದ ಶ್ರೀಯುತ ರಾಮ್_ಪ್ರದೀಪ್ ಆಚಾರ್, ಆರ್ಥಿಕ ಸಲಹೆಗಾರರಾದ ಶ್ರೀಯುತ ಆನಂದ ಪಿ. ಎಸ್., ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕರಾದ ಶ್ರೀಯುತ ವಿಶ್ವಜ್ಞಾಚಾರ್, ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಯುತ ಧನಂಜಯ್ ನೆಲ್ಯಾಡಿ ಹಾಗೂ ವಿತರಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com