ಧರ್ಮಗಿರಿ ಮಂಜುನಾಥನ ಸನ್ನಿಧಿಯಲ್ಲಿ “ವರ್ಣತರಂಗ” ಕ್ಕೆ ಚಾಲನೆ

Published on

838 Views
Advertisement

ಶ್ರೀ ಪಾಷಾಣಮೂರ್ತಿ ಸಿನಿ ಕ್ರಿಯೇಷನ್ಸ್ ಮೂಲಕ ಯುವ ಪಡೆಗಳು ಸೇರಿಕೊಂಡು ನಿರ್ಮಿಸುತಿರುವಂತಹ ಚಿತ್ರ “ವರ್ಣತರoಗ” ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ಬಹಳ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು , ದಿಯಾ ಚಿತ್ರದ ನಿರ್ಮಾಪಕರಾದ ಕೃಷ್ಣ ಚೈತನ್ಯ ಕ್ಲಾಪ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸ್ನೇಹಿತರು , ಕುಟುಂಬದ ಹಿತೈಷಿಗಳು ಕೂಡ ಹಾಜರಿದ್ದರು. ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶಿಸಿದ ತೀರ್ಥೇಶ್.ಕೆ. ಪ್ರಪ್ರಥಮ ಬಾರಿಗೆ ಬೆಳ್ಳಿ ಪರದೆಗೆ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಚಿತ್ರ ತಂಡ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು , ಚಿತ್ರದ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲು ಮುಂದಾಗಿದ್ದು ಚಿತ್ರದ ಕುರಿತು ನಿರ್ದೇಶಕ ತೀರ್ಥೇಶ್. ಕೆ . ಮಾತನಾಡುತ್ತಾ , ವರ್ಣತರಂಗ ಎಂದರೆ ಬಣ್ಣಗಳ ಅಲೆಗಳು ಎಂಬ ಅರ್ಥ ಬರುತ್ತದೆ ,

ಒಬ್ಬೊಬ್ಬ ಮನುಷ್ಯನಲ್ಲಿಯೂ ಒಂದೊಂದು ರೀತಿಯ ವರ್ಣಗಳು ಇರುತ್ತದೆ. ಅವನ ಆಲೋಚನೆ ಮನಸ್ಥಿತಿ ಎಲ್ಲವೂ ಒಳಗೊಂಡಿರುತ್ತದೆ. ಹಾಗಾಗಿಯೇ ಈ ಶೀರ್ಷಿಕೆ ನಮ್ಮ ಚಿತ್ರಕ್ಕೆ ಹೋಲುತ್ತದೆ , ಅಡಿಬರಹದಲ್ಲಿ ಎ ಲಾಸ್ಟ್ ಫೇಸ್ ಎಂದು ಕೂಡ ಹಾಕಿದ್ದೇವೆ. ಇದೊಂದು ಕ್ರೈಂ, ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡಿದೆ. ಪ್ರತಿ ಹಂತದಲ್ಲೂ ಏರಿಳಿತಗಳು ಕೂಡಿದೆ. ಈ ಚಿತ್ರದ ಮತ್ತೊಂದು ವಿಶೇಷ ಏನೆಂದರೆ , 1865 ರ ಕಾಲಘಟ್ಟದ ಎಳೆಯು ಕೊಡ ಕಾಣಸಿಗಲಿದೆಯಂತೆ. ಬ್ರಿಟಿಷರ ವಿರುದ್ಧ ಗುರೂಜಿಯೊಬ್ಬರು ಹೋರಾಡುವ ಅಂಶ ಚಿತ್ರದ ಹೈಲೈಟ್ ಆಗಲಿದೆ. ಇದಕ್ಕಾಗಿ ಸಿ.ಜಿ. ವರ್ಕ್ ಹಾಗೂ ಎಫೆಕ್ಟ್ ಕೆಲಸಗಳು ಮಾಡುತ್ತಿದ್ದೇವೆ. ಚಿತ್ರದಲ್ಲಿ ಸುಮಾರು 20% ರಷ್ಟು ಗ್ರಾಫಿಕ್ ಅಂಶವು ಕಾಣುತ್ತದೆ. 4 ಹಂತದಲ್ಲಿ ಚಿತ್ರೀಕರಣ ಮಾಡಲು ನಿರ್ಧರಿಸಿದ್ದು , ಸದ್ಯ ಕಂಠೀರವ ಸ್ಟುಡಿಯೋದಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭಿಸಲಿದೇವೆ. ನಾನು ಮೂಲತಃ ತ್ರಿಡಿ ಅನಿಮೇಟರ್ ಹಾಗೂ ಗ್ರಾಫಿಕ್ ಡಿಸೈನರ್ ಆಗಿರುವದರಿoದ ಬಹಳ ಸೂಕ್ಷ್ಮವಾಗಿ ಚಿತ್ರವನ್ನು ತೆರೆಗೆ ತರುವ ಆಲೋಚನೆ ಇದೆ. ನಾವು ಪೂರ್ವ ತಯಾರಿಯೊಂದಿಗೆ ಮುನ್ನುಗ್ಗಿದ್ದು , ಇಂದು ಮುಹೂರ್ತ ವನ್ನು ಆಚರಿಸಿಕೊಂಡಿದೆ. ನಿಮ್ಮೆಲ್ಲರ ಸಹಕಾರ ಇರಲಿ ಎಂದು ಕೇಳಿಕೊಂಡರು.

Advertisement

Advertisement

ಇನ್ನೂ ಈ ಚಿತ್ರದ ಪ್ರಮುಖ ಪಾತ್ರಧಾರಿ ತಿಲಕ್ ಮಾತನಾಡುತ್ತಾ ಇದೊಂದು ವಿಭಿನ್ನ ಚಿತ್ರವಾಗಲಿದೆ , ನಿರ್ದೇಶಕರು ಉತ್ತಮವಾಗಿ ಕತೆಯನ್ನ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಇದು ಕ್ರೈo ಹಾಗೂ ಸಸ್ಪೆನ್ಸ್ ಸುತ್ತ ನಡೆಯೋ ಕಥೆ. ಹೊಸ ಟೀo ಆದ್ರೂ ಪ್ಲನ್ ಚೆನ್ನಾಗಿ ಮಾಡಿಕೊಂಡಿದ್ದಾರೆ ನಮ್ಮ ತಂಡಕ್ಕೆ ಬೆoಬಲ ನೀಡಿ ಎoದರು.
ಮತ್ತೊಬ್ಬ ಯುವ ನಟ ವರ್ಧನ್ ಮಾತನಾಡುತ್ತಾ ಈ ಚಿತ್ರದಲ್ಲಿ ನನಗೆ ವಿಭಿನ್ನ ಪಾತ್ರವನ್ನು ನೀಡಿದ್ದಾರೆ ಎoದರು. ಇವರದ್ದು ಸೈಕ್ಯಟ್ರಿಸ್ಟ್ ಪಾತ್ರ ನಿರ್ವಹಿಸಲಿದ್ದಾರೆ ಎoದು ನಿರ್ದೇಶಕರು ಹೇಳಿದ್ದಾರೆ.
ಈ ಚಿತ್ರದಲ್ಲಿ ನಾಯಕಿಯಾಗಿ ಯುವ ನಟಿ ಮೇಘನಾ ಕಾಣಿಸಿಕೊಳ್ಳುತ್ತಿದ್ದಾರೆ. ಬಹಳ ವಿಶೇಷವಾದ ಪಾತ್ರವಾಗಿದ್ದು , ಚಿತ್ರದಲ್ಲಿ ಪತ್ರಕರ್ತೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಉಳಿದoತೆ ಅನುಭವಿ ಹಾಗೂ ಹೊಸ ಪ್ರತಿಭೆಗಳು ಕೂಡ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರoತೆ. ಶಿವಕುಮಾರ್ .ಬಿ. ರವರ ನಿರ್ಮಾಣದ ಈ ಚಿತ್ರಕ್ಕೆ ರಮೇಶ್ ರಾಜ್ ಛಾಯಾಗ್ರಹಣ , ವಿಜಯ್ ಯಾರ್ಡ್ಲಿ ಸಂಗೀತ ನೀಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ತಂಡ ಹಂತ ಹಂತವಾಗಿ ನೀಡಲಿದೆಯಂತೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com