ಸೋನುಸೂದ್ ನಟನ ಸಮಾಜಸೇವೆಯನ್ನು ಕಿರುಚಿತ್ರದ ಮೂಲಕ ತೋರಿಸಿದ ಯತಿರಾಜ್​​​…

Published on

440 Views

ಕಳೆದ 5-6 ತಿಂಗಳಿಂದ ಕಿರುಚಿತ್ರ ತಯಾರಿಕೆಯಲ್ಲಿ ಬ್ಯುಸಿ ಇರುವ ನಟ ಯತಿರಾಜ್ ಲಾಕ್ ಡೌನ್ ಸಮಯದಲ್ಲಿ ಸಾಮಾಜಿಕ ಸಂದೇಶವುಳ್ಳ ಕಿರುಚಿತ್ರ ಮಾಡಿ ತೋರಿಸಿದ್ದಾರೆ. ಇದು ಜನರಿಂದ ಸಾಕಷ್ಟು ಪ್ರಶಂಸೆ ಯನ್ನು ಪಡೆದಿತ್ತು. ಅದೇ ರೀತಿ ಈ ಬಾರಿ ಖ್ಯಾತ ನಟ ಸೋನುಸೂದ್ ರವರ ಸಮಾಜಸೇವೆಯನ್ನು ಕಿರುಚಿತ್ರದ ಮೂಲಕ ತೋರಿಸಿದ್ದಾರೆ. ‘ದೇವದೂತ’ ಹೆಸರಿನ ಈ ಕಿರುಚಿತ್ರವನ್ನು ತಮ್ಮ ಕಲಾವಿಧ ಯೂಟ್ಯೂಬ್​ ಚಾನೆಲ್​​​ನಲ್ಲಿ ಬಿಡುಗಡೆ ಮಾಡಿದ್ದಾರೆ.
ಕಡುಬಡತನದ ಕುಟುಂಬವೊಂದು ಬಹಳ ಕಷ್ಟಪಡುತ್ತಿರುತ್ತದೆ. ಒಂದಷ್ಟು ಭೂಮಿ ಇದ್ದರೂ ಉಳಲು ಎತ್ತುಗಳಿಲ್ಲ. ಅಪ್ಪನ ಚಿಂತೆಯನ್ನು ಹೋಗಲಾಡಿಸಲು ಹೆಣ್ಣು ಮಕ್ಕಳು ಧೈರ್ಯ ತುಂಬಿ ತಾವೇ ಎತ್ತುಗಳಂತೆ ಹೊಲ ಉಳುತ್ತಾರೆ. ಇವರೆಲ್ಲಾ ಕಷ್ಟ ಪಡುತ್ತಿರುವುದನ್ನು ಸ್ಥಳೀಯರೊಬ್ಬರು ವಿಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್​​​ಲೋಡ್ ಮಾಡುತ್ತಾರೆ.

ಈ ವಿಡಿಯೋ ವೈರಲ್ ಆಗಿ ಸೋನುಸೂದ್​ವರೆಗೂ ತಲುಪುತ್ತದೆ. ಆ ರೈತನ ಮೊಬೈಲ್ ನಂಬರ್ ಪಡೆದು ನಿಮಗೆ ಯಾವ ರೀತಿ ಸಹಾಯ ಬೇಕು ಎಂದು ಕೇಳಿದಾಗ ಎರಡು ಎತ್ತುಗಳನ್ನು ಕೊಡಿಸಿ ಎಂದು ಮನೆ ಒಡೆಯ ಕೇಳುತ್ತಾರೆ. ಆದರೆ ಸೋನು ಸೂದ್ ಒಂದು ಹೆಜ್ಜೆ ಮುಂದೆ ಹೋಗಿ ಎತ್ತುಗಳ ಬದಲಿಗೆ ಟ್ರ್ಯಾಕ್ಟರ್​​​​ ಕೊಡಿಸುತ್ತಾರೆ. ಸೋನುಸೂದ್ ಅವರ ಈ ಸಹಾಯಕ್ಕೆ ಕುಟುಂಬ ಅವರಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತದೆ.

ಯತಿರಾಜ್ ಈ ಕಿರುಚಿತ್ರವನ್ನು ಬಹಳ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ. ಸಾವನದುರ್ಗ, ಮಾಗಡಿ ಬಳಿ ಈ ಕಿರುಚಿತ್ರಕ್ಕೆ ಚಿತ್ರೀಕರಣ ಮಾಡಲಾಗಿದೆ. ಯತಿರಾಜ್ ಕಥೆ, ಚಿತ್ರಕಥೆ, ನಿರ್ದೇಶನ, ನಿರ್ಮಾಣದ ಜೊತೆಗೆ ರೈತನ ಪಾತ್ರ ಕೂಡಾ ಮಾಡಿದ್ದಾರೆ. ಯಶಿತ, ನಮಿತಾ, ಚಂದನ, ಭಗತ್ ಸಿಂಗ್ ಕೂಡಾ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com