ಜೀ ವಾಹಿನಿಯಲ್ಲಿ ಸಂಕ್ರಾಂತಿ ಸಂಭ್ರಮ

Published on

632 Views
Advertisement

ಜೀ ವಾಹಿನಿಯಲ್ಲಿ ಸಂಕ್ರಾಂತಿ ಸಂಭ್ರಮ

ಮನೋರಂಜನಾ ವಾಹಿನಿಯಾದ ಜೀ ಕನ್ನಡ ಹೊಸ ವರ್ಷದ ಆರಂಭವನ್ನು ನಾಡಿನ ರೈತ ಬಾಂಧವರೊಂದಿಗೆ ವಿನೂತನವಾಗಿ ಆಚರಿಸಲು ನಿರ್ಧರಿಸಿದೆ. ರೈತರು ನಮ್ಮ ದೇಶದ ಬೆನ್ನೆಲುಬಷ್ಟೇ ಅಲ್ಲದೆ ನಮ್ಮ ಬಂಧುಗಳು ಕೂಡ ಎಂಬುದನ್ನು ಹೇಳಲು ಜೀ ಕನ್ನಡ ವಾಹಿನಿ ‘ಸಂಕ್ರಾಂತಿ ಸಂಭ್ರಮ’ ಎಂಬ ವಿಶೇಷ ಕಾರ್ಯಕ್ರಮವನ್ನು ಇದೇ ಜನವರಿ 11ರಂದು ಮಂಡ್ಯ ಜಿಲ್ಲೆಯ ಮಂಗಲ ಗ್ರಾಮದಲ್ಲಿ ಆಯೋಜಿಸಿದೆ.

Advertisement

ಈ ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳ ತಂಡ ಮತ್ತು ರಿಯಾಲಿಟಿ ಶೋಗಳ ತಂಡಗಳು ಜೊತೆಯಾಗಿ ಭಾಗವಹಿಸಲಿವೆ. ಜೋಡಿಹಕ್ಕಿ, ಸುಬ್ಬಲಕ್ಷ್ಮಿ ಸಂಸಾರ, ಯಾರೇ ನೀ ಮೋಹಿನಿ, ವಿದ್ಯಾ ವಿನಾಯಕ, ನಾಗಿಣಿ ಮತ್ತು ಬ್ರಹ್ಮಗಂಟು ಧಾರಾವಾಹಿಗಳ ತಂಡಗಳ ಜೊತೆ ಸರಿಗಮಪ, ಕಾಮಿಡಿ ಕಿಲಾಡಿಗಳು ಮತ್ತು ಡಾನ್ಸ್ ಕರ್ನಾಟಕ ಡಾನ್ಸ್ ತಂಡಗಳು ಕೂಡ ಭಾಗವಹಿಸಲಿವೆ. ಈ ವಿಶೇಷ ಕಾರ್ಯಕ್ರಮವನ್ನು ಬಸವಟ್ಟಿ ಮತ್ತು ಕಾಮಿಡಿ ಕಿಲಾಡಿ ಖ್ಯಾತಿಯ ನಯನ ನಿರೂಪಣೆ ಮಾಡಲಿದ್ದಾರೆ.

Advertisement

ಈ ಸಂಭ್ರಮದ ಜೊತೆಗೆ ರಿಯಾಲಿಟಿ ಶೋ ತಂಡದಿಂದ ‘ಸಂಕ್ರಾಂತಿ ಗೋ ಉತ್ಸವ’ ಎಂಬ ವಿಶೇಷ ಕಾರ್ಯಕ್ರಮವನ್ನು ಎಲ್ಲ ರೈತರ ಕುಟುಂಬಗಳಿಗಾಗಿ ಜನವರಿ 14ರ ಭಾನುವಾರ ಹಮ್ಮಿಕೊಳ್ಳಲಾಗಿದೆ. ಸಂಕ್ರಾಂತಿ ಹಬ್ಬದ ಸಂಭ್ರಮದ ಸಡಗರದಲ್ಲಿ ಹಸುಗಳ ಅಲಂಕಾರ ಸ್ಪರ್ಧೆ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಸ್ಪರ್ಧೆಯಲ್ಲಿ ರೈತ ಕುಟುಂಬದವರು ತಾವು ಸಾಕಿರುವ ಹಸುವನ್ನು ವಿಶೇಷವಾಗಿ ಅಲಂಕಾರ ಮಾಡಿಕೊಂಡು ತರಬೇಕು. ಈ ಸ್ಪರ್ಧೆಯು ಹಾಸನ, ಚಾಮರಾಜ ನಗರ, ಶಿವಮೊಗ್ಗ ಮತ್ತು ತುಮಕೂರಿನ ಪ್ರಮುಖ ಹಳ್ಳಿಗಳಲ್ಲಿ ನಡೆಯಲಿದೆ. ಈ ಸ್ಪರ್ಧೆಯ ಮೂಲಕ ಗೋ ಮಾತೆಗೆ ನಮನ ಸಲ್ಲಿಸುವುದು ಜೀ ಕನ್ನಡದ ಮುಖ್ಯ ಉಸೀ್ದÉೀಶವಾಗಿದೆ.

ಹಳ್ಳಿಯ ಸೊಗಡಿನಲ್ಲಿ ಕಾರ್ಯಕ್ರಮ ನಡೆಸುವ ಖುಷಿಯೇ ಬೇರೆ. ಅಲ್ಲಿನ ರೈತಾಪಿ ಜನರನ್ನಷ್ಟೇ ಅಲ್ಲದೆ ಗ್ರಾಮೀಣ ಸಂಸ್ಕøತಿ, ಸಂಪ್ರದಾಯ, ಪ್ರಕೃತಿ, ಹಬ್ಬದ ವಾತಾವರಣ ಇವೆಲ್ಲವನ್ನೂ ಕಿರುತೆರೆ ವೀಕ್ಷಕರಿಗೆ ಪರಿಚಯಿಸುವುದು ಜೀ ಕನ್ನಡದ ಉದ್ದೇಶ ಕೂಡ ಎಂದು ಜೀ ಕನ್ನಡ ವಾಹಿನಿಯ ರಾಘವೇಂದ್ರ ಹುಣಸೂರು ಹೇಳಿದ್ದಾರೆ. ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಇದೇ ಜನವರಿ 14 ಸಂಜೆ 5ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com